Homeಫ್ಯಾಕ್ಟ್‌ಚೆಕ್ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

- Advertisement -
- Advertisement -

ನಾನು ಇಂದು ಬೆಳಿಗ್ಗೆ 4.30ಕ್ಕೆ ಗಾಢ ನಿದ್ರೆ ಮಾಡುತ್ತಿರುವಾಗ ಮನೆಯಿಂದ ನಮ್ಮ ಚಿಕ್ಕಪ್ಪನ ಮಗ ಕಾಲ್ ಮಾಡಿದ. ನಾನು ಗಾಬರಿಯಿಂದ ಫೋನ್ ತೆಗೆದೆ. ಈಗಾಗಲೇ ಲಾಕ್‌ಡೌನ್‌ನಿಂದಾಗಿ ಮನೆಗೆ ಹೋಗದೇ ಬೆಂಗಳೂರಿನಲ್ಲೇ ಇರುವುದರಿಂದ ಕೊರೊನಾ ವೈರಸ್ ಬಗ್ಗೆ ಆತಂಕದಲ್ಲಿರುವಾಗ ಇಂತಹ ಕಾಲ್ ಬೆಳ್ಳಂ ಬೆಳಿಗ್ಗೆ ಬಂದುದರಿಂದ ಭಯವಾಯಿತು. ನನ್ನ ತಮ್ಮನ ಕಾಲ್‌ ರಿಸಿವ್ ಮಾಡುತ್ತಲೇ ಅಣ್ಣ ಎದ್ದೇಳು ಎದ್ದೇಳು ಅಂದ. ನಾನು ಎದ್ದಿದಿನಿ ಹೇಳೋ ಏನೋ ಅಂದೆ. ಮೊದಲು ಎದ್ದು ಕುಳಿತಿಕೋ, ನಮ್ಮ ಅತ್ತೆ ಹೇಳಿದರು ಈಗ ಯಾರು ಮಲಗಬಾರದಂತೆ ಎದ್ದೇ ಇರಬೇಕೆಂತೆ ಅಂತ ಹೇಳೀದ. ನಾನು ಆಯಿತು ಅಂತ ಕಾಲ್ ಕಟ್ ಮಾಡಿ ಮಲಗಿದೆ.

ಆದರೆ ಬೆಳಿಗ್ಗೆ ಎದ್ದು ಕಾಲ್ ಮಾಡಿ ವಿಷಯ ಏನು ಎಂದು ವಿಚಾರಿಸದರೆ, ಎಲ್ಲೋ ಹಸು ಹೊಟ್ಟೆಯಲ್ಲಿ ಮಗು ಹುಟ್ಟಿದೆಯಂತೆ. ಹಾಗಾಗಿ ಇವತ್ತು ಬೆಳಿಗಿನ ಜಾವಾ ನಿದ್ದೆ ಮಾಡಿದ್ರೆ ಏನಾದರೂ ಆಗುತ್ತೆ ಅಂತ ನಮ್ಮ ಏರಿಯಾದವರನ್ನೆಲ್ಲ ಎಬ್ಬಿಸಿದ್ದಾರೆ. ಎಲ್ಲರೂ ಫೋನ್‌ ಮಾಡಿ ಹೇಳು ಅಂದರು, ಅದಕ್ಕಾಗಿ ನಿನಗೆ ಕಾಲ್ ಮಾಡಿದೆ ಅಂದ. ನಾನು ಇವೆಲ್ಲ ನಂಬಬೇಡ ಬರೀ ಸುಳ್ಳು ಸುದ್ಧಿಗಳು ಬುದ್ಧಿ ಇಲ್ವಾ ನಿಮಗೆ ಎಂದು ಬೈಯ್ದು ಫೋನಿಟ್ಟೆ.

ಆನಂತರ ತಿಳಿಯಿತು ಇದು ಎಲ್ಲಾ ಹಳ್ಳಿಹಳ್ಳಿಗಳಿಗೂ ಹಬ್ಬುತ್ತಿದೆ ಎಂದು. ವಾಟ್ಸಪ್‌ನಲ್ಲಿ ನಿರಂತರವಾಗಿ ಈ ರೀತಿಯ ಸುಳ್ಳು ಸುದ್ಧಿಗಳನ್ನು ಹರಡಿ ಗ್ರಾಮೀಣ ಜನರನ್ನು ಇಂತಹ ಮೌಢ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಹುನ್ನಾರವೆ ಇದೆ ಹಾಗಾಗಿ ಇದರ ಕುರಿತು ಫ್ಯಾಕ್ಟ್‌ಚೆಕ್ ಮಾಡಲು ನಿರ್ಧರಿಸಿದೆವು.

ವಾಟ್ಸಾಪ್‌ನಲ್ಲಿ ಹಸುವೊಂದು ಮಗುವಿಗೆ ಜನ್ಮಕೊಟ್ಟಿದೆ ಎಂಬ ಐದು ಚಿತ್ರಗಳು ಹರಿದಾಡುತ್ತಿವೆ. ಇವುಗಳನ್ನು ಗೂಗಲ್‌ ರಿವರ್ಸ್‌ ಸರ್ಚ್‌ ಮಾಡಿದಾಗ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆ ಔಶಾ ತಾಲ್ಲೂಕಿನಲ್ಲಿ ವಿಕಲಾಂಗ ಮಗುವೊಂದು ಜನಿಸಿದ್ದು ಮಾತು ಬರುತ್ತಿಲ್ಲ ಎಂದು ಸುದ್ದಿ ಹರಡಿದೆ. ಹಾಗಾಗಿ ಅದು ಹುಟ್ಟಿದ ಸಮಯದಲ್ಲಿ ಉಳಿದವರೂ ಎಚ್ಚರವಿರಬೇಕು ಇಲ್ಲದಿದ್ದರೆ ಅವರ ಮಾತು ನಿಂತು ಹೋಗುತ್ತದೆ ಎಂದು ಯಾರೋ ಕಿಡಿಗೇಡಿಗಳು ಸುದ್ದಿ ಹರಡಿದ್ದಾರೆ.

ಅಲ್ಲಿಂದ ಒಬ್ಬರಿಂದ ಒಬ್ಬರಿಗೆ ನಿದ್ದೆ ಮಾಡಬೇಡಿ ಎದ್ದೇಳಿ ಎಂದು ಎಚ್ಚರಿಸುವ, ಇಡೀ ರಾತ್ರಿ ಎಚ್ಚರದಿಂದಿರುವ ಚಾಳಿ ಶುರುವಾಗಿದೆ ಮಾತ್ರವಲ್ಲ, ಆ ಮಗು ಹಸುವಿಗೆ ಹುಟ್ಟಿದ್ದು ಎಂಬ ಸುಳ್ಳು ಸಹ ಸೇರಿಕೊಂಡಿದೆ. ಅದೇ ಫೋಟೊಗಳನ್ನು ಷೇರ್‌ ಮಾಡಿ ಆಂಧ್ರ ಪ್ರದೇಶದ ಯಾವುದೋ ಊರು ಎಂದೆಲ್ಲಾ ಸುಳ್ಳು ಪಸರಿಸಿದೆ. ಅದೇ ಕಾಲ್ ಕೊನೆಗೆ ಬೆಂಗಳೂರನ್ನು ಸಹ ಮುಟ್ಟಿದೆ. ಇದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ವೆಬ್‌ಸೈಟ್‌ ಸಕಲ್‌.ಕಾಂ ಸ್ಪಷ್ಟಪಡಿಸಿದೆ.

ಅಲ್ಲದೇ ಸಂಬಂಧವಿಲ್ಲದ ಫೋಟೊಗಳನ್ನೆಲ್ಲಾ ಷೇರ್‌ ಮಾಡಲಾಗಿದೆ. ಆಂಧ್ರದ ಎದುಟ್ಲ ಗೋಪಾಲ್‌ಪೇಟ್‌ ತಾಲ್ಲೂಕು ಎಂಬಲ್ಲಿ ನಡೆದಿದೆ ಎಂಬ ಫೋಟೊಗಳನ್ನು ಸಹ ಹರಿಬಿಡಲಾಗಿದೆ. ಒಟ್ಟಾರೆ ಇದೊಂದು ಶುದ್ಧ ಮೌಢ್ಯಾಚರಣೆಯಾಗಿದೆ.

ಇಂತಹ ವದಂತಿಗಳನ್ನು ಹರಡುವ ಮೂಲಕ, ಕಾರಣವಿಲ್ಲದೆ ಜನರಲ್ಲಿ ಭಯವದ ವಾತಾವರಣ ಸೃಷ್ಟಿಸಲಾಗುತ್ತದೆ. ಯಾರೋ ಮಾನಸಿಕ ಅಸ್ವಸ್ಥರು ಈ ಸುಳ್ಳು ಸುದ್ದಿ ಹರಡಿದ್ದಾರೆ. ಇದರಿಂದ ಯಾವುದೇ ಅಪಾಯ ಯಾರಿಗೂ ಆಗುವುದಿಲ್ಲ. ಮಗು ಬೆಳೆಯುತ್ತಿದ್ದಂತೆ ಮಗುವಿನ ಮಾತುಕತೆಯ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಆದ್ದರಿಂದ ಜನರು ವದಂತಿಗಳಿಗೆ ಬಲಿಯಾಗಬಾರದು. ಎಂದು ಔಶಾ ತಾಲ್ಲೂಕಿನ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಅಧ್ಯಕ್ಷ ಸಚಿನ್ ಮಿಟ್ಕರಿ ತಿಳಿಸಿದ್ದಾರೆ.

ಇತ್ತಿಚಿಗೆ ಉತ್ತರಕರ್ನಾಟಕದ ಹಳ್ಳಿಗಳಲ್ಲಿ ನಿಮ್ಮ ತಾಳಿಯಲ್ಲಿರುವ ಹವಳವನ್ನು ಕುಟ್ಟಿ ಪುಡಿಮಾಡಬೇಕು ಇಲ್ಲವಾದರೆ ನಿಮ್ಮ ಗಂಡು ಸತ್ತು ಹೋಗುತ್ತಾನೆ ಎಂದು ಸುಳ್ಳು ಸುದ್ಧಿ ಹಬ್ಬಿಸಿದ್ದಾರೆ ಇದರಿಂದ ಗ್ರಾಮೀಣ ಹೆಣ್ಣು ಮಕ್ಕಳು ಹಾಗೇ ಮಾಡಿದ್ದಾರೆ.

ಇನ್ನು ಕೆಲವು ತಿಂಗಳುಗಳ ಕೆಳಗೆ ಒಬ್ಬನೇ ಮಗ ಇದ್ದರೆ ಆತನಿಗೆ ಅತ್ತೆಯಂದಿರು ಬೆಳ್ಳಿ ಕಡಗ ಹಾಕಬೇಕು ಇಲ್ಲವಾದರೆ ಆತನಿಗೆ ಕೇಡಾಗುತ್ತದೆ ಎಂದು ಹೇಳಿದ್ದರು ಇದಕ್ಕಾಗಿ ಜನ ಸಾಲ ಮಾಡಿ ಬೆಳ್ಳಿ ಅಂಗಡಿಗಳ ಬಾಗಿಲು ತಟ್ಟಿದ್ದರು. ಆದಾದ ಕೆಲವೇ ದಿನಗಳಿಗೆ ಬೆಳ್ಳಿ ಕಡಗ ಇದ್ದರೆ ತೆಗೆದು ಹಾಗಬೇಕು ಎಂದರೆ ತೆಗೆದು ಹಾಕಿದ್ಧಾರೆ. ಈ ರೀತಿ ಗ್ರಾಮೀಣ ಜನರ ಜೀವನದ ಜೊತೆ ಸುಳ್ಳು ಸುದ್ಧಿಗಳನ್ನು ಹಬ್ಬಿಸಿ ಆಟ ಆಡುತ್ತಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಈ ಬಗ್ಗೆ ಸರ್ಕಾರಗಳು ಒಂದಷ್ಟು ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇತ್ತಿಚಿಗೆ ವಿದ್ಯಾವಂತರೇ ಸುಳ್ಳು ಸುದ್ಧಿಗಳನ್ನು ಹರಡುತ್ತಿರುವುದು ಹೆಚ್ಚಾಗಿದೆ. ಇದನ್ನು ಮೊದಲು ನಿಲ್ಲಿಸಬೇಕು. ಸತ್ಯ ಎಂದು ತಿಳಿಯದ ಹೊರತು ವಿಷಯಗಳನ್ನು ಶೇರ್ ಮಾಡದೆ ಇರುವುದನ್ನು ರೂಢಿಸಿಕೊಳ್ಳಬೇಕು.

ಇದನ್ನೂ ಓದಿ:

ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...