Homeಅಂತರಾಷ್ಟ್ರೀಯಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಟ್ರಂಪ್ ಆಡಳಿತವು ಕ್ಯೂಬಾದ ವೈದ್ಯಕೀಯ ನೆರವು ಕಾರ್ಯಾಚರಣೆಗಳನ್ನು ತಿರಸ್ಕರಿಸುವಂತೆ ಹಲವು ದೇಶಗಳಿಗೆ ಒತ್ತಡ ಹೇರುವ ಮೂಲಕ ಆಶ್ಚರ್‍ಯ ಉಂಟುಮಾಡಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವೆಬ್ ವರದಿ ಮಾಡಿದೆ.

ಏಕಾಏಕಿ ಎರಗಿದ ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಕ್ಯೂಬಾ ದೇಶವು ಪ್ರಮುಖ ಪಾತ್ರ ವಹಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದು ಶ್ಲಾಘನೆಗೆ ಪಾತ್ರವಾಗಿದೆ. ಅದು ಇಟಲಿ ಸೇರಿದಂತೆ ಕೆಲವು ಕೊರೊನಾ ಪೀಡಿತ ದೇಶಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಅಲ್ಲದೇ ಕ್ಯೂಬಾವು ಇಂಟರ್ಫೆರಾನ್ ಆಲ್ಫಾ -2 ಬಿ ಯ ಔಷದಿ ಸರಬರಾಜುಗಳನ್ನು ಸಹ ಒದಗಿಸಿದೆ. ಇದು 1,500 ಕ್ಕೂ ಹೆಚ್ಚು ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಿದಾಗ ಪರಿಣಾಮಕಾರಿ ಎಂದು ಸಾಬೀತಾಗಿದೆ. ಉಸಿರಾಟದ ಕಾಯಿಲೆಯನ್ನು ಎದುರಿಸಲು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಆಯ್ಕೆ ಮಾಡಿದ 30 ಔಷಧಿಗಳಲ್ಲಿ ಇದು ಸಹ ಒಂದಾಗಿದೆ.

ಆದರೆ ಅಮೆರಿಕವು ಕ್ಯೂಬಾದ ಗುರಿ ಕೋವಿಡ್ -19 ಹರಡುವುದನ್ನು ತಡೆಯುವುದಲ್ಲ, ಅದರ ವೈದ್ಯರಿಗೆ ಸಂಬಳ ಪಾವತಿಸುವುದಕ್ಕಾಗಿ ಕೆಲವು ದೇಶಗಳಿಂದ ಹಣಕಾಸಿನ ಸಹಾಯಕ್ಕಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಹವಾನಾದಲ್ಲಿನ ಯುಎಸ್ ರಾಯಭಾರ ಕಚೇರಿಯು “ಕ್ಯೂಬನ್ ಸರ್ಕಾರವು ಅಂತರರಾಷ್ಟ್ರೀಯ ನೆರವು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡ ವೈದ್ಯರು ಮತ್ತು ದಾದಿಯರ ಹೆಚ್ಚಿನ ವೇತನವನ್ನು ತಡೆಹಿಡಿದಿದೆ ಮತ್ತು ಅವರನ್ನು ಭಯಾನಕ ಕೆಲಸದ ಪರಿಸ್ಥಿತಿಗಳಿಗೆ ಒಡ್ಡುತ್ತದೆ” ಎಂದು ಸುಳ್ಳು ಆರೋಪ ಮಾಡಿದೆ.

1959ರ ಕ್ಯೂಬಾ ಕ್ರಾಂತಿಯ ನಂತರ ಹವಾನದ ಮಾನವೀಯ ವೈದ್ಯಕೀಯ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ವಿಶ್ವದಾದ್ಯಂತದ ಹಲವು ಬಡ ರಾಷ್ಟ್ರಗಳಿಗೆ ಆರೋಗ್ಯ ರಕ್ಷಣೆಯನ್ನು ಅದು ಒದಗಿಸಿದೆ.

ಕ್ಯೂಬನ್ ವಿದೇಶಾಂಗ ಸಚಿವಾಲಯದ ಪ್ರಕಾರ, 1960 ರಿಂದೀಚೆಗೆ 6,00,000 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ತಂತ್ರಜ್ಞರನ್ನು 160 ಕ್ಕೂ ಹೆಚ್ಚು ದೇಶಗಳಿಗೆ ಕಳುಹಿಸಲಾಗಿದೆ. ಈ ಕಾರ್ಯಕ್ರಮವು ಪ್ರಸ್ತುತ ಸುಮಾರು 60 ದೇಶಗಳಲ್ಲಿ ಸಕ್ರಿಯವಾಗಿದೆ.

ಸುಮಾರು ಎರಡು ಡಜನ್ ಕಾರ್ಯಾಚರಣೆಗಳನ್ನು ಉಚಿತವಾಗಿ ನೀಡಿದರೆ, ಇತರ ದೇಶಗಳು ಹವಾನಾಕ್ಕೆ ಹಣ ಪಾವತಿಸುತ್ತವೆ. ಇದು ವರ್ಷಕ್ಕೆ ಸುಮಾರು 6.3 ಬಿಲಿಯನ್ ಡಾಲರ್‌ ಹಣ (8 4.8 ಬಿಲಿಯನ್) ಗಳಿಸುತ್ತಿದೆ. ಇದು ಆರು ದಶಕಗಳ ಅಮೆರಿಕಾದ ಆರ್ಥಿಕ ದಿಗ್ಬಂಧನದ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತಿದೆ.

ಅಮೆರಿಕಾವು ಕ್ಯೂಬಾ ಮೇಲೆ ದಿಗ್ಬಂಧನ ವಿಧಿಸಿದ ನಂತರ ವಾಷಿಂಗ್ಟನ್‌ನ ಒತ್ತಡಕ್ಕೆ ಮಣಿದು ಹಲವಾರು ಬಲಪಂಥೀಯ ಸರ್ಕಾರಗಳು ಕ್ಯೂಬಾದ ವೈದ್ಯಕೀಯ ಕಾರ್ಯಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದವು.

ಅವರಲ್ಲಿ ಒಂದು ದೇಶ ಬ್ರೆಜಿಲ್ ಆಗಿದ್ದು, ಅದರ ಬಲಪಂಥೀಯ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 10,000 ವೈದ್ಯರಲ್ಲಿ ಹೆಚ್ಚಿನವರನ್ನು ತಮ್ಮ ದೇಶದಿಂದ ಹೊರಹಾಕಿದ್ದರು. ವೈದ್ಯರನ್ನು ಸಮವಸ್ತ್ರದ ವೇಷ ಧರಿಸಿದ ಭಯೋತ್ಪಾದಕರು ಎಂದು ಕರೆದು ಅವಮಾನ ಮಾಡಿದ್ದರು.

ಆದರೆ ಈಗ ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

ಆದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮಾನವೀಯ ನೆರವು ಕಾರ್ಯಾಚರಣೆಗಳ ಮೂಲಕ ದಿಟ್ಟ ಹೋರಾಟಕ್ಕಾಗಿ ಕ್ಯೂಬಾವನ್ನೇ ಜಗತ್ತೆ ಹಾಡಿ ಹೊಗಳುತ್ತಿವೆ. ಆದ್ದರಿಂದ ಅಮೆರಿಕ ಕ್ಯೂಬಾ ಮತ್ತು ಚೀನಾ ಎರಡರ ವಿರುದ್ಧವೂ ಕಿಡಿಕಾರುತ್ತಿದೆ.

ಅದೇ ಸಮಯದಲ್ಲಿ, ಇರಾನ್ ಮತ್ತು ವೆನೆಜುವೆಲಾ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಬಿಗಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...