Homeಅಂತರಾಷ್ಟ್ರೀಯಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಟ್ರಂಪ್ ಆಡಳಿತವು ಕ್ಯೂಬಾದ ವೈದ್ಯಕೀಯ ನೆರವು ಕಾರ್ಯಾಚರಣೆಗಳನ್ನು ತಿರಸ್ಕರಿಸುವಂತೆ ಹಲವು ದೇಶಗಳಿಗೆ ಒತ್ತಡ ಹೇರುವ ಮೂಲಕ ಆಶ್ಚರ್‍ಯ ಉಂಟುಮಾಡಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವೆಬ್ ವರದಿ ಮಾಡಿದೆ.

ಏಕಾಏಕಿ ಎರಗಿದ ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಕ್ಯೂಬಾ ದೇಶವು ಪ್ರಮುಖ ಪಾತ್ರ ವಹಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದು ಶ್ಲಾಘನೆಗೆ ಪಾತ್ರವಾಗಿದೆ. ಅದು ಇಟಲಿ ಸೇರಿದಂತೆ ಕೆಲವು ಕೊರೊನಾ ಪೀಡಿತ ದೇಶಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಅಲ್ಲದೇ ಕ್ಯೂಬಾವು ಇಂಟರ್ಫೆರಾನ್ ಆಲ್ಫಾ -2 ಬಿ ಯ ಔಷದಿ ಸರಬರಾಜುಗಳನ್ನು ಸಹ ಒದಗಿಸಿದೆ. ಇದು 1,500 ಕ್ಕೂ ಹೆಚ್ಚು ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಿದಾಗ ಪರಿಣಾಮಕಾರಿ ಎಂದು ಸಾಬೀತಾಗಿದೆ. ಉಸಿರಾಟದ ಕಾಯಿಲೆಯನ್ನು ಎದುರಿಸಲು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಆಯ್ಕೆ ಮಾಡಿದ 30 ಔಷಧಿಗಳಲ್ಲಿ ಇದು ಸಹ ಒಂದಾಗಿದೆ.

ಆದರೆ ಅಮೆರಿಕವು ಕ್ಯೂಬಾದ ಗುರಿ ಕೋವಿಡ್ -19 ಹರಡುವುದನ್ನು ತಡೆಯುವುದಲ್ಲ, ಅದರ ವೈದ್ಯರಿಗೆ ಸಂಬಳ ಪಾವತಿಸುವುದಕ್ಕಾಗಿ ಕೆಲವು ದೇಶಗಳಿಂದ ಹಣಕಾಸಿನ ಸಹಾಯಕ್ಕಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಹವಾನಾದಲ್ಲಿನ ಯುಎಸ್ ರಾಯಭಾರ ಕಚೇರಿಯು “ಕ್ಯೂಬನ್ ಸರ್ಕಾರವು ಅಂತರರಾಷ್ಟ್ರೀಯ ನೆರವು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡ ವೈದ್ಯರು ಮತ್ತು ದಾದಿಯರ ಹೆಚ್ಚಿನ ವೇತನವನ್ನು ತಡೆಹಿಡಿದಿದೆ ಮತ್ತು ಅವರನ್ನು ಭಯಾನಕ ಕೆಲಸದ ಪರಿಸ್ಥಿತಿಗಳಿಗೆ ಒಡ್ಡುತ್ತದೆ” ಎಂದು ಸುಳ್ಳು ಆರೋಪ ಮಾಡಿದೆ.

1959ರ ಕ್ಯೂಬಾ ಕ್ರಾಂತಿಯ ನಂತರ ಹವಾನದ ಮಾನವೀಯ ವೈದ್ಯಕೀಯ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ವಿಶ್ವದಾದ್ಯಂತದ ಹಲವು ಬಡ ರಾಷ್ಟ್ರಗಳಿಗೆ ಆರೋಗ್ಯ ರಕ್ಷಣೆಯನ್ನು ಅದು ಒದಗಿಸಿದೆ.

ಕ್ಯೂಬನ್ ವಿದೇಶಾಂಗ ಸಚಿವಾಲಯದ ಪ್ರಕಾರ, 1960 ರಿಂದೀಚೆಗೆ 6,00,000 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ತಂತ್ರಜ್ಞರನ್ನು 160 ಕ್ಕೂ ಹೆಚ್ಚು ದೇಶಗಳಿಗೆ ಕಳುಹಿಸಲಾಗಿದೆ. ಈ ಕಾರ್ಯಕ್ರಮವು ಪ್ರಸ್ತುತ ಸುಮಾರು 60 ದೇಶಗಳಲ್ಲಿ ಸಕ್ರಿಯವಾಗಿದೆ.

ಸುಮಾರು ಎರಡು ಡಜನ್ ಕಾರ್ಯಾಚರಣೆಗಳನ್ನು ಉಚಿತವಾಗಿ ನೀಡಿದರೆ, ಇತರ ದೇಶಗಳು ಹವಾನಾಕ್ಕೆ ಹಣ ಪಾವತಿಸುತ್ತವೆ. ಇದು ವರ್ಷಕ್ಕೆ ಸುಮಾರು 6.3 ಬಿಲಿಯನ್ ಡಾಲರ್‌ ಹಣ (8 4.8 ಬಿಲಿಯನ್) ಗಳಿಸುತ್ತಿದೆ. ಇದು ಆರು ದಶಕಗಳ ಅಮೆರಿಕಾದ ಆರ್ಥಿಕ ದಿಗ್ಬಂಧನದ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತಿದೆ.

ಅಮೆರಿಕಾವು ಕ್ಯೂಬಾ ಮೇಲೆ ದಿಗ್ಬಂಧನ ವಿಧಿಸಿದ ನಂತರ ವಾಷಿಂಗ್ಟನ್‌ನ ಒತ್ತಡಕ್ಕೆ ಮಣಿದು ಹಲವಾರು ಬಲಪಂಥೀಯ ಸರ್ಕಾರಗಳು ಕ್ಯೂಬಾದ ವೈದ್ಯಕೀಯ ಕಾರ್ಯಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದವು.

ಅವರಲ್ಲಿ ಒಂದು ದೇಶ ಬ್ರೆಜಿಲ್ ಆಗಿದ್ದು, ಅದರ ಬಲಪಂಥೀಯ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 10,000 ವೈದ್ಯರಲ್ಲಿ ಹೆಚ್ಚಿನವರನ್ನು ತಮ್ಮ ದೇಶದಿಂದ ಹೊರಹಾಕಿದ್ದರು. ವೈದ್ಯರನ್ನು ಸಮವಸ್ತ್ರದ ವೇಷ ಧರಿಸಿದ ಭಯೋತ್ಪಾದಕರು ಎಂದು ಕರೆದು ಅವಮಾನ ಮಾಡಿದ್ದರು.

ಆದರೆ ಈಗ ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

ಆದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮಾನವೀಯ ನೆರವು ಕಾರ್ಯಾಚರಣೆಗಳ ಮೂಲಕ ದಿಟ್ಟ ಹೋರಾಟಕ್ಕಾಗಿ ಕ್ಯೂಬಾವನ್ನೇ ಜಗತ್ತೆ ಹಾಡಿ ಹೊಗಳುತ್ತಿವೆ. ಆದ್ದರಿಂದ ಅಮೆರಿಕ ಕ್ಯೂಬಾ ಮತ್ತು ಚೀನಾ ಎರಡರ ವಿರುದ್ಧವೂ ಕಿಡಿಕಾರುತ್ತಿದೆ.

ಅದೇ ಸಮಯದಲ್ಲಿ, ಇರಾನ್ ಮತ್ತು ವೆನೆಜುವೆಲಾ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಬಿಗಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...