Homeಮುಖಪುಟದೂರದರ್ಶನದಲ್ಲಿ ಇಂದಿನಿಂದ ರಾಮಾಯಣ - ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ ಪ್ರೇಕ್ಷಕರಿಗೆ ‘ರಾಮಾಯಣ’ ಮತ್ತು ‘ಮಹಾಭಾರತ’ ಮಹಾಕಾವ್ಯಗಳ ಧಾರವಾಹಿಯನ್ನು ಮರಳಿ ತರುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ರಾಮಾನಂದ್ ಸಾಗರ್ ನಿರ್ದೇಶನದ ‘ರಾಮಾಯಣ’ ಮತ್ತು ಬಿ.ಆರ್.ಚೋಪ್ರಾ ನಿರ್ದೇಶನದ ‘ಮಹಾಭಾರತ್’ ಪ್ರಸಾರವನ್ನು ಕೋರಿದ್ದರು. ಮೂರು ದಿನಗಳ ಹಿಂದೆ ಪ್ರಸಾರ್ ಭಾರತಿ ಸಿಇಒ ಶಶಿ ಶೇಖರ್ ವೆಂಪತಿ ಅವರು “ಇದರ ಮೇಲೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜಾವಡೇಕರ್ ಟ್ವೀಟ್ ಮಾಡಿ “ಮಹಾಭಾರತ ಮತ್ತು ರಾಮಾಯಣ ನೋಡಲು ಇಂದು ಮತ್ತು ಪ್ರತಿದಿನ ಡಿಡಿ ನ್ಯಾಷನಲ್ ಹಾಗೂ ಡಿಡಿ ಭಾರತಿಗೆ ದಯವಿಟ್ಟು ಟ್ಯೂನ್ ಮಾಡಿ” ಎಂದು ಹೇಳಿದ್ದಾರೆ.

 

“ಡಿಡಿ ಅಧಿಕಾರಿಗಳ ಸಮರ್ಪಿತ ತಂಡವು ನಿನ್ನೆಯಿಂದ ರಾತ್ರಿಯಿಡೀ ಅವರ ಮನೆ ಮತ್ತು ಕುಟುಂಬಗಳಿಂದ ದೂರವಿದ್ದು ಈ ಕೆಲಸ ಮಾಡಿದರು. ವೀಕ್ಷಕರ ಅಪಾರ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಿದ ಇಡೀ ತಂಡಕ್ಕೆ ಧನ್ಯವಾದ ಸಲ್ಲಿಸಲು ಮಹಾಕಾವ್ಯಗಳನ್ನು ವೀಕ್ಷಿಸಿ” ಎಂದು ಅವರು ಮನವಿ ಮಾಡಿದ್ದಾರೆ.

‘ರಾಮಾಯಣ’ ಮೊದಲ ಬಾರಿಗೆ ದೂರದರ್ಶನದಲ್ಲಿ 1987 ರಲ್ಲಿ ಪ್ರಸಾರವಾಯಿತು ಮತ್ತು ದೇಶಾದ್ಯಂತ ಭಾರಿ ವೀಕ್ಷಕರನ್ನು ಹೊಂದಿತ್ತು. ಇದರಲ್ಲಿ ಶ್ರೀರಾಮನ ಪಾತ್ರದಲ್ಲಿ ಅರುಣ್ ಗೋವಿಲ್ ಮತ್ತು ಸೀತಾ ಪಾತ್ರದಲ್ಲಿ ದೀಪಿಕಾ ಚಿಖಲಿಯಾ, ಹನುಮಂತನ ಪಾತ್ರದಲ್ಲಿ ದಾರಾ ಸಿಂಗ್, ಮಂಥಾರ ಪಾತ್ರದಲ್ಲಿ ಲಲಿತಾ ಪವಾರ್, ವಿಜಯ್ ಅರೋರಾ ಇಂದ್ರಜಿತ್ ಪಾತ್ರದಲ್ಲಿ, ಅರವಿಂದ ತ್ರಿವೇದಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ಸಾಗರ್ ಆರ್ಟ್ಸ್ ತೆರೆಗೆ ತಂದಿತ್ತು. ಹಾಗೆಯೆ ‘ಮಹಾಭಾರತ’ ಮೊದಲ ಬಾರಿಗೆ 1988 ರಲ್ಲಿ ಪ್ರಸಾರವಾಯಿತು, ಇದು ಅನೇಕ ನಟರನ್ನು ಅಪ್ರತಿಮ ಸ್ಥಾನಮಾನವನ್ನು ಗಳಿಸುವಂತೆ ಮಾಡಿತು.

ಇದೇ ಸಂದರ್ಭದಲ್ಲಿ ಸಚಿವರ ಈ ಕ್ರಮಕ್ಕೆ ಅಷ್ಟೇ ವಿರೋಧವೂ ಸಹ ವ್ಯಕ್ತವಾಗಿದೆ. ನಮಗೆ ಸದ್ಯಕ್ಕೆ ಬೇಕಿರುವುದು ಕೊರೊನಾ ಪರೀಕ್ಷಾ ಕಿಟ್‌ಗಳು, ಮಾಸ್ಕ್‌ಗಳು, ಸ್ಯಾನಿಟೈಸರ್‌ಗಳು, ಉತ್ತಮ ಆಸ್ಪತ್ರೆಗಳಾಗಿವೆ. ಸರ್ಕಾರ ಇದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಅನಿವಾರ್ಯವಲ್ಲದರ ಕಡೆ ಗಮನಕೊಡುತ್ತಿದೆ ಎಂದು ಹಲವರು ದೂರಿದ್ದಾರೆ.

ಮತ್ತೊಂದು ನಿರುಪಯುಕ್ತ ಗ್ಯಾಂಗ್ ಇದು. ಯಾರಾದರೂ ರಾಮಾಯಣ ಮಹಾಭಾರತ ನೋಡಲು ಬಯಸಿದರೆ ಅವರು ಯಾವಾಗಲೂ ಯುಟ್ಯೂಬ್‌ನಲ್ಲಿ ಎಲ್ಲಾ ಸಂಚಿಕೆಗಳನ್ನು ವೀಕ್ಷಿಸಬಹುದು.
ಬಡವರು ಬಳಲುತ್ತಿದ್ದಾರೆ ಮತ್ತು ಪ್ರಧಾನ ಮಂತ್ರಿ ಕ್ಷೇತ್ರದಲ್ಲಿ ಮಕ್ಕಳು ಹುಲ್ಲು ತಿನ್ನುತ್ತಿದ್ದಾರೆ ಎಂಬುದನ್ನು ನೆನಪಿಡಿ. ನಿಮ್ಮ ಅಶ್ಲೀಲ ಹಿಂದುತ್ವ ಆರಾಧನೆಯನ್ನು ನಿಲ್ಲಿಸಿ ಎಂದು ಸೈಯದ್ ವಾಸನ್‌ ಮೈಕಲ್‌ ಎಂಬುವವರು ಆಗ್ರಹಿಸಿದ್ದಾರೆ.

ರಾಮಾಯಣ ಮತ್ತು ಮಹಾಭಾರತ ಜೊತೆಗೆ ಟಿಪ್ಪುಸುಲ್ತಾನ್ ಕೂಡ ಪ್ರಸಾರ ಮಾಡ್ಬೇಕಿತ್ತು. ಅದು ನಮ್ಮ ಬಾಲ್ಯದ ನೆನಪಿನೊಂದಿಗೆ ಬೆಸೆದುಕೊಂಡಿರುವ ಧಾರಾವಾಹಿ ಎಂದು ಕನ್ನಡದ ಯುವ ಪ್ರತಿಭಾನ್ವಿತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...