Homeಮುಖಪುಟವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

ವಿಡಿಯೋ| ಕೊರೊನಾ ಹೆಲ್ಮೆಟ್‌ ಪರಿಚಯಿಸಿ ಮಾದರಿಯಾದ ಚನ್ನೈ ಪೊಲೀಸ್‌

- Advertisement -
- Advertisement -

ಕೊರೊನಾ ವೈರಸ್‌ ಇಡೀ ಜಗತ್ತಿನಾದ್ಯಂತ ತಾಂಡವವಾಡುತ್ತಿದೆ. ಬಡವರಿಂದ ಉಳ್ಳವರವರೆಗೂ ಎಲ್ಲರೂ ಕೊರೊನಾ ವೈರಸ್‌ನ ಆರ್ಭಟಕ್ಕೆ ಭೀತರಾಗಿ ಕುಳಿತಿದ್ದಾರೆ. ಭಾರತದಲ್ಲಿ 21 ದಿನಗಳ ಕಾಲ ಲಾಕ್‌ಔಟ್‌ ಘೋಷಿಸಿದ್ದು, ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ಆದೇಶಿಸಲಾಗಿದೆ.  ಈ ತುರ್ತು ಘೋಷಣೆಯಿಂದಾಗಿ ಹಲವಾರು ಜನರು ತಮಗೆ ಬೇಕಾದ ಅತ್ಯಾವಶ್ಯಕ ಸಾಮಗ್ರಿಗಳನ್ನು ಹೊಂದಿಸಿಕೊಳ್ಳಲಾಗದೆ, ಊರಿಂದೂರಿಗೆ ಗುಳೆ ಬಂದವರು ತಮ್ಮೂರಿಗೆ ಹಿಂದಿರಗಲೂ ಆಗದೆ ಪರದಾಡುತ್ತಿದ್ದಾರೆ.

ಕೆಲವರು ಏನಾದರೂ ಸಿಕ್ಕರೆ ಕೊಂಡು ತರಲು ಅಂಗಡಿಗಳನ್ನು ಹುಡುಕುತ್ತಿದ್ದರೆ, ಮತ್ತೂ ಕೆಲವರು ಊರ ಹಾದಿ ಹುಡುಕಿ ಹೊರಟಿದ್ದಾರೆ. ಹೀಗೆಲ್ಲಾ ಬೀದಿಗೆ ಬಂದವರನ್ನು ಪೋಲೀಸರು ಅಡ್ಡಗಟ್ಟಿ ತಮ್ಮ ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಮಕ್ಕಳಿದ್ದ ವಯಸ್ಸಾದ ವೃದ್ಧರವರೆಗೂ ಹಿಂದೆ ಮುಂದೆ ನೋಡದೇ ಬಾಸುಂಡೆಗಳ ಅವರ ಬೆನ್ನಮೇಲೆ ಕೊರೊನಾ ಸಂಕಷ್ಟದ ಗುರುತುಗಳನ್ನು ಮೂಡಿಸುತ್ತಿವೆ. ಪೊಲೀಸರೋ ಮಾನವೀಯತೆ ಎಂದರೇನು ಎಂಬುದನ್ನೇ ಮರೆತ ಮೃಗಗಳಂತೆ ವರ್ತಿಸುತ್ತಿದ್ದಾರೆ.

ಇಂತಹ ಪೊಲೀಸರ ಕ್ರೌರ್ಯದ ನಡುವೆಯೂ ಕೆಲವು ಮಾನವೀಯ ಪೊಲೀಸರು ನಿರ್ಗತಿಕರಿಗೆ, ನಿರಾಶ್ರಿತರಿಗೆ ಊಟ, ತಿಂಡಿ, ನೀರಿನ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ತಮ್ಮೊಳಗಿನ ಮಾನವೀಯತೆ ಜೊತೆಗೆ ತಮ್ಮ ಕರ್ತವ್ಯವೂ ಎಂಬಂತೆ ಬಡವರಿಗೆ ನೆರವಾಗುತ್ತಿದ್ದಾರೆ.

ಇದೆಲ್ಲದರ ನಡುವೆ ವಿಶೇಷ ಎಂಬಂತೆ ಕಾಣುತ್ತಿರುವುದು ತಮಿಳುನಾಡು ಪೊಲೀಸರ ಸೃಜನಾತ್ಮಕವಾಗಿ ಅರಿವು ಮೂಡಿಸುತ್ತಿರುವ ಕಲೆ. ರಸ್ತೆಯಲ್ಲಿ ಓಡಾಡುತ್ತಿರುವ, ಒಂದೂರಿಂದ ಮತ್ತೊಂದು ಊರಿಗೆ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ಲಾಕ್‌ಡೌನ್‌ನ ಉದ್ದೇಶವನ್ನೂ, ಜನರು ಮನೆಯಿಂದ ಹೊರಬರದಂತೆ 21 ದಿನಗಳ ಕಾಲ ಮನೆಯಲ್ಲೇ ಉಳಿಯುವಂತೆ ಎಚ್ಚರಿಕೆಯ ಅರಿವು ಮೂಡಿಸಲು ಅದೇ ಕೊರೊನಾ ಹೆಲ್ಮೆಟ್‌ ಬಳಸಿ ಅಚ್ಚರಿಗೆ ಕಾರಣರಾಗಿದ್ದಾರೆ.

ಚೆನೈನ ಕಿಂಗ್‌ಗೌತಮ್ ಎಂಬ ಪೋಲೀಸ್‌ ಅಧಿಕಾರಿ ತಮ್ಮ ಹೆಲ್ಮೆಟ್‌ ಮೇಲೆ ಕೊರೊನಾ ವೈರಸ್‌ ರೀತಿಯಲ್ಲಿ ಡಿಸೈನ್‌ ಮಾಡಿಕೊಂಡು, ಆ ಹೆಲ್ಮೆಟ್‌ ಹಾಕಿಕೊಂಡು ರಸ್ತೆಯಲ್ಲಿ ನಿಂತು ಬರುವ ಬೈಕ್‌ ಸವಾರರನ್ನು ನಿಲ್ಲಿಸಿ, ತಾನು ಕೊರೊನಾ ನೀವು ಹೀಗೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದರೆ, ಗುಂಪುಗುಂಪಾಗಿ ಓಡಾಡುತ್ತಿದ್ದರೆ, ನಾವು ನಿಮ್ಮ ಮೇಲೆ ದಾಳಿ ಮಾಡುತ್ತೇನೆ, ನಿಮ್ಮ ಆರೋಗ್ಯವನ್ನು ಕಿತ್ತುಕೊಂಡು, ಅನಾರೋಗ್ಯಕ್ಕೆ ಅವಕಾಶವಾಗುತ್ತದೆ. ನನ್ನಿಂದ ನಿಮ್ಮ ಜೀವಕ್ಕೂ ಅಪಾಯವಾದೀತು ಎಂದು ಕೊರೊನಾ ರೀತಿಯಲ್ಲೇ ಅರಿವು ಮೂಡಿಸುತ್ತಿದ್ದಾರೆ.

ಕ್ರೌರ್ಯವನ್ನು ಮೆರೆಯುತ್ತಿರುವ ಪೊಲೀಸರಿಗೆ ಇಂತಹ ಅಧಿಕಾರಿಗಳು ಮಾದರಿಯಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...