Homeಮುಖಪುಟಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

ಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

- Advertisement -
- Advertisement -

ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ ಹಾಗೂ ಅದನ್ನು ಎದುರಿಸಲು ಸಾಕಷ್ಟು ತಯಾರಿ ನಮ್ಮಲ್ಲಿಲ್ಲ ಎಂದು ಕೊರೊನ ವೈರಸ್ ಆಸ್ಪತ್ರೆಗಳ ಕಾರ್ಯಪಡೆಯ ಕನ್ವೀನರ್ ಡಾ.ಗಿರಿಧರ್ ಗ್ಯಾನಿ “ದಿ ಕ್ವಿಂಟ್”ಗೆ ನೀಡಿದ ಸಂದರ್ಶವೊಂದರಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಡಾ.ಗಿರಿಧರ್ ಗ್ಯಾನಿ ಮಾತಾಡುತ್ತಾ “ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ. ಈಗ ಅದು ಸಾಮುದಾಯಿಕವಾಗಿ ಹರಡಲಿದೆ. ಅಧಿಕೃತವಾಗಿ ನಾವು ಇದನ್ನು ಘೋಷಿಸದಿದ್ದರೂ ಇದು 3ನೇ ಹಂತದ ಪ್ರಾರಂಭಿಕ ಲಕ್ಷಣವಾಗಿದೆ” ಎಂದು ಹೇಳಿದ್ದಾರೆ.

“ಮುಂಬರುವ ದಿನಗಳಲ್ಲಿ ಏಕಾಏಕಿ ಎದುರಾಗಬಹುದಾದ ಅಪಾಯಗಳನ್ನು ಎದುರಿಸಲು ಸಜ್ಜಾಗುವಲ್ಲಿ ದೇಶವು ಬಹಳ ಕಡಿಮೆ ಸಮಯವನ್ನು ಹೊಂದಿದೆ. ನಮ್ಮಲ್ಲಿ ಸಾಕಷ್ಟು ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೊನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಆಸ್ಪತ್ರೆಗಳ ಕೊರತೆಯಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮೂರನೇ ಹಂತದಲ್ಲಿ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತದೆ. ಈ ಸಮಯದಲ್ಲಿ ಪ್ರಸರಣದ ಮೂಲವನ್ನು ಕಂಡುಹಿಡಿಯುವುದು ಕೂಡ ಕಷ್ಟವಾಗುತ್ತದೆ. ವೈರಸನ್ನು ನಿಯಂತ್ರಿಸಲು ಮುಂದಿನ ಐದು-ಹತ್ತು ದಿನಗಳು ಬಹಳ ನಿರ್ಣಾಯಕವಾಗಲಿದೆ, ಸೋಂಕು ತಗಲಿಯೂ ಇಲ್ಲಿಯವರೆಗೆ ರೋಗಲಕ್ಷಣ ತೋರಿಸದಿದ್ದವರು ಮುಂದಿನ ದಿನಗಳಲ್ಲಿ ರೋಗಲಕ್ಷಣಗಳನ್ನು ತೋರಿಸಲಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

“ಸರಕಾರದ ಬಳಿ ಸಾಕಷ್ಟು ಪರೀಕ್ಷಾ ಸಾಮಾಗ್ರಿಗಳಿಲ್ಲ. ಕೆಮ್ಮು, ಉಸಿರಾಟದ ಸಮಸ್ಯೆ ಮತ್ತು ಜ್ವರ – ಈ ಮೂರು ರೋಗಲಕ್ಷಣಗಳನ್ನು ಹೊಂದಿರುವವರನ್ನು ಮಾತ್ರ ಸರಕಾರ ಈಗಲೂ ಪರೀಕ್ಷಿಸುತ್ತಿದೆ. ಕೇವಲ ಒಂದು ರೋಗಲಕ್ಷಣ ಹೊಂದಿರುವ ರೋಗಿಗಳನ್ನು ಸ್ಥೂಲವಾಗಿ ಪರೀಕ್ಷೆಗೆ ಒಳಪಡಿಸುತ್ತಿಲ್ಲ, ಇದು ಬದಲಾಗಬೇಕು” ಎಂದಿದ್ದಾರೆ.

“ದೆಹಲಿಯಲ್ಲೇ ಮೂರು ಕೋಟಿ ಜನಸಂಖ್ಯೆಯಿದೆ ಅದಕ್ಕಾಗಿ ನಾವು ಕನಿಷ್ಟ ಮೂರು ಸಾವಿರ ಹಾಸಿಗೆಗಳ ಆಸ್ಪತ್ರೆಗಳನ್ನು ಸಿದ್ದವಾಗಿಡಬೇಕು. ಸಂಪರ್ಕತಡೆಯಲ್ಲಿ ಇರಿಸಬೇಕಾದವರಿಗೆ ಅಥವಾ ಕೊರೊನ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡವರಿಗೆ ಪ್ರತ್ಯೇಕ ಕೊರೊನಾ ವೈರಸ್ ಕೇಂದ್ರಗಳ ಅಗತ್ಯವಿದೆ, ಅದಕ್ಕಾಗಿ ವಸತಿಗೃಹ ಮತ್ತು ಹಾಸ್ಟೆಲ್‌ಗಳನ್ನು ಪರಿವರ್ತಿಸಿ ಇಂತಹ ಕೇಂದ್ರಗಳನ್ನಾಗಿ ಮಾಡಬಹುದು” ಎಂದು ಡಾ.ಗಿರಿಧರ್ ಗ್ಯಾನಿ ಅಭಿಪ್ರಾಯ ಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...