Homeಮುಖಪುಟಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

ಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

- Advertisement -
- Advertisement -

ಕೊರೊನ ವೈರಸ್‌ಗೆ ಭಾರತದ ಪ್ರತಿಕ್ರಿಯೆ “ಪೂರ್ವಭಾವಿ, ಸಕ್ರಿಯ ಮತ್ತು ಶ್ರೇಣೀಕೃತ” ಎಂದು ಕೇಂದ್ರ ಸರ್ಕಾರ ಹೇಳಿದೆ. 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ಯಾವುದೇ ಯೋಜನೆ ಇಲ್ಲದೆ ಘೋಷಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.

ಆದರೆ ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಕೊರೊನ ವೈರಸ್‌ ಅನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಮೊದಲೇ ಸರ್ಕಾರವು ಜನವರಿ 30 ರಂದು ದೇಶದ ಗಡಿಗಳಲ್ಲಿ, ಸಮಗ್ರ ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೆ ತಂದಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕವಾಗಿ ಸ್ಪೋಟಗೊಂಡ ಎರಡು ತಿಂಗಳ ನಂತರ ಆದ ಲಾಕ್‌ಡೌನ್ ಅನ್ನು ಹಠಾತ್ತನೆ ಮತ್ತು ಯೋಜನೆ ಇಲ್ಲದೆ ಘೋಷಿಸಲಾಗಿದೆ ಇದರಿಂದಾಗಿ ಲಕ್ಷಾಂತರ ಜನರು ಸಿಕ್ಕಿಹಾಕಿಕೊಂಡಿದ್ದಾರೆ ಹಾಗೂ ಆಹಾರ ಮತ್ತು ಮೂಲಭೂತ ಅವಶ್ಯಕತೆಗಳ ಬಗ್ಗೆ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳನ್ನು ಮಾಡಲಾಗಿದೆ.

ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರವು ಅಗತ್ಯವಾದವುಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿದೆ ಮತ್ತು ಸಾಮಾಜಿಕ ದೂರಕ್ಕಾಗಿ ಜನರು ಮನೆಯಲ್ಲಿಯೇ ಇರಬೇಕೆಂದು ಕೇಳಿಕೊಂಡಿದೆ.

ಸರ್ಕಾರವು ಪರಿಹಾರ ಕ್ರಮಗಳನ್ನು ಘೋಷಿಸಿದ್ದರೂ, ಅದು ಇನ್ನೂ ಹೆಚ್ಚು ಹಾನಿಗೊಳಗಾದ ಲಕ್ಷಾಂತರ ಜನರನ್ನು ತಲುಪಿಲ್ಲ.

ಒಳಬರುವ ವಾಯು ಪ್ರಯಾಣಿಕರನ್ನು ತಪಾಸಣೆ ಮಾಡುವುದು, ನಂತರ ವೀಸಾಗಳನ್ನು ಅಮಾನತುಗೊಳಿಸುವುದು ಮತ್ತು ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಇತರ ದೇಶಗಳಿಗಿಂತ ಹೆಚ್ಚು ಭಾರತವೂ ಮುಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

“ಚೀನಾ ಮತ್ತು ಹಾಂಗ್‌ಕಾಂಗ್‌ನಿಂದ ಒಳಬರುವ ಅಂತರರಾಷ್ಟ್ರೀಯ ಪ್ರಯಾಣಿಕರ ಉಷ್ಣ ತಪಾಸಣೆಯನ್ನು, ಜನವರಿ 30 ರಂದು ಭಾರತದಲ್ಲಿ ಮೊದಲ ಕೊರೊನ ವೈರಸ್ ಪ್ರಕರಣ ಪತ್ತೆಯಾಗುವುದಕ್ಕಿಂತ ಮುಂಚೆಯೇ ಜನವರಿ 18 ರಂದು ಪ್ರಾರಂಭಿಸಲಾಯಿತು’ ಎಂದುಹೇಳಿದೆ.

ಮೊದಲು ವರದಿಯಾದ ಪ್ರಕರಣಗಳ ನಂತರ ಕ್ರಮವಾಗಿ 25 ದಿನಗಳು ಮತ್ತು 39 ದಿನಗಳ ನಂತರ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ ಇಟಲಿ ಮತ್ತು ಸ್ಪೇನ್‌ನ ಉದಾಹರಣೆಗಳನ್ನು ಉಲ್ಲೇಖಿಸಿ, ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಅದು ಕೈಗೊಂಡ ಕ್ರಮಗಳ ಕಾಲಾನುಕ್ರಮವನ್ನು ಹಂಚಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

30 ವಿಮಾನ ನಿಲ್ದಾಣಗಳು, 12 ಪ್ರಮುಖ ಮತ್ತು 65 ಸಣ್ಣ ಬಂದರುಗಳಲ್ಲಿ ಮತ್ತು ಭೂ ಗಡಿಗಳಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಲಾಗಿದೆ, 36 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಕವರೇಜ್ ಸಂಪೂರ್ಣವಾಗಿದೆ ಮತ್ತು ಯಾವುದೇ ಅಂತರಗಳಿಲ್ಲ ಎಂದು ಕಣ್ಗಾವಲು ವ್ಯವಸ್ಥೆಯನ್ನು ನಿರ್ವಹಿಸಲು ಮತ್ತು ಮತ್ತಷ್ಟು ಸುಧಾರಿಸಲು ರಾಜ್ಯಗಳನ್ನು ನಿಯಮಿತವಾಗಿ ವಿನಂತಿಸಲಾಗಿದೆ ಎಂದು ಅದು ಹೇಳಿದೆ.

“ಒಂದು ನಿಖರವಾದ ವ್ಯವಸ್ಥೆಯು ಕಣ್ಗಾವಲು ತಪ್ಪಿಸಲು ಪ್ರಯತ್ನಿಸಿದ ಅಥವಾ ಸಂಪರ್ಕತಡೆಯನ್ನು ಅನುಸರಿಸದ ವ್ಯಕ್ತಿಗಳನ್ನು ಪತ್ತೆಹಚ್ಚಲು ರಾಜ್ಯಗಳಿಗೆ ಅನುವು ಮಾಡಿಕೊಟ್ಟಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಶನಿವಾರ ಕೊರೊನ ಪ್ರಕರಣಗಳ ಸಂಖ್ಯೆ 873 ಕ್ಕೆ ಏರಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...