Homeಮುಖಪುಟಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

ಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

- Advertisement -
- Advertisement -

ಕೊರೊನ ವೈರಸ್‌ಗೆ ಭಾರತದ ಪ್ರತಿಕ್ರಿಯೆ “ಪೂರ್ವಭಾವಿ, ಸಕ್ರಿಯ ಮತ್ತು ಶ್ರೇಣೀಕೃತ” ಎಂದು ಕೇಂದ್ರ ಸರ್ಕಾರ ಹೇಳಿದೆ. 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ಯಾವುದೇ ಯೋಜನೆ ಇಲ್ಲದೆ ಘೋಷಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.

ಆದರೆ ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಕೊರೊನ ವೈರಸ್‌ ಅನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಮೊದಲೇ ಸರ್ಕಾರವು ಜನವರಿ 30 ರಂದು ದೇಶದ ಗಡಿಗಳಲ್ಲಿ, ಸಮಗ್ರ ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೆ ತಂದಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕವಾಗಿ ಸ್ಪೋಟಗೊಂಡ ಎರಡು ತಿಂಗಳ ನಂತರ ಆದ ಲಾಕ್‌ಡೌನ್ ಅನ್ನು ಹಠಾತ್ತನೆ ಮತ್ತು ಯೋಜನೆ ಇಲ್ಲದೆ ಘೋಷಿಸಲಾಗಿದೆ ಇದರಿಂದಾಗಿ ಲಕ್ಷಾಂತರ ಜನರು ಸಿಕ್ಕಿಹಾಕಿಕೊಂಡಿದ್ದಾರೆ ಹಾಗೂ ಆಹಾರ ಮತ್ತು ಮೂಲಭೂತ ಅವಶ್ಯಕತೆಗಳ ಬಗ್ಗೆ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳನ್ನು ಮಾಡಲಾಗಿದೆ.

ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರವು ಅಗತ್ಯವಾದವುಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿದೆ ಮತ್ತು ಸಾಮಾಜಿಕ ದೂರಕ್ಕಾಗಿ ಜನರು ಮನೆಯಲ್ಲಿಯೇ ಇರಬೇಕೆಂದು ಕೇಳಿಕೊಂಡಿದೆ.

ಸರ್ಕಾರವು ಪರಿಹಾರ ಕ್ರಮಗಳನ್ನು ಘೋಷಿಸಿದ್ದರೂ, ಅದು ಇನ್ನೂ ಹೆಚ್ಚು ಹಾನಿಗೊಳಗಾದ ಲಕ್ಷಾಂತರ ಜನರನ್ನು ತಲುಪಿಲ್ಲ.

ಒಳಬರುವ ವಾಯು ಪ್ರಯಾಣಿಕರನ್ನು ತಪಾಸಣೆ ಮಾಡುವುದು, ನಂತರ ವೀಸಾಗಳನ್ನು ಅಮಾನತುಗೊಳಿಸುವುದು ಮತ್ತು ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಇತರ ದೇಶಗಳಿಗಿಂತ ಹೆಚ್ಚು ಭಾರತವೂ ಮುಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

“ಚೀನಾ ಮತ್ತು ಹಾಂಗ್‌ಕಾಂಗ್‌ನಿಂದ ಒಳಬರುವ ಅಂತರರಾಷ್ಟ್ರೀಯ ಪ್ರಯಾಣಿಕರ ಉಷ್ಣ ತಪಾಸಣೆಯನ್ನು, ಜನವರಿ 30 ರಂದು ಭಾರತದಲ್ಲಿ ಮೊದಲ ಕೊರೊನ ವೈರಸ್ ಪ್ರಕರಣ ಪತ್ತೆಯಾಗುವುದಕ್ಕಿಂತ ಮುಂಚೆಯೇ ಜನವರಿ 18 ರಂದು ಪ್ರಾರಂಭಿಸಲಾಯಿತು’ ಎಂದುಹೇಳಿದೆ.

ಮೊದಲು ವರದಿಯಾದ ಪ್ರಕರಣಗಳ ನಂತರ ಕ್ರಮವಾಗಿ 25 ದಿನಗಳು ಮತ್ತು 39 ದಿನಗಳ ನಂತರ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ ಇಟಲಿ ಮತ್ತು ಸ್ಪೇನ್‌ನ ಉದಾಹರಣೆಗಳನ್ನು ಉಲ್ಲೇಖಿಸಿ, ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಅದು ಕೈಗೊಂಡ ಕ್ರಮಗಳ ಕಾಲಾನುಕ್ರಮವನ್ನು ಹಂಚಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

30 ವಿಮಾನ ನಿಲ್ದಾಣಗಳು, 12 ಪ್ರಮುಖ ಮತ್ತು 65 ಸಣ್ಣ ಬಂದರುಗಳಲ್ಲಿ ಮತ್ತು ಭೂ ಗಡಿಗಳಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಲಾಗಿದೆ, 36 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಕವರೇಜ್ ಸಂಪೂರ್ಣವಾಗಿದೆ ಮತ್ತು ಯಾವುದೇ ಅಂತರಗಳಿಲ್ಲ ಎಂದು ಕಣ್ಗಾವಲು ವ್ಯವಸ್ಥೆಯನ್ನು ನಿರ್ವಹಿಸಲು ಮತ್ತು ಮತ್ತಷ್ಟು ಸುಧಾರಿಸಲು ರಾಜ್ಯಗಳನ್ನು ನಿಯಮಿತವಾಗಿ ವಿನಂತಿಸಲಾಗಿದೆ ಎಂದು ಅದು ಹೇಳಿದೆ.

“ಒಂದು ನಿಖರವಾದ ವ್ಯವಸ್ಥೆಯು ಕಣ್ಗಾವಲು ತಪ್ಪಿಸಲು ಪ್ರಯತ್ನಿಸಿದ ಅಥವಾ ಸಂಪರ್ಕತಡೆಯನ್ನು ಅನುಸರಿಸದ ವ್ಯಕ್ತಿಗಳನ್ನು ಪತ್ತೆಹಚ್ಚಲು ರಾಜ್ಯಗಳಿಗೆ ಅನುವು ಮಾಡಿಕೊಟ್ಟಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಶನಿವಾರ ಕೊರೊನ ಪ್ರಕರಣಗಳ ಸಂಖ್ಯೆ 873 ಕ್ಕೆ ಏರಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...