Homeಕರ್ನಾಟಕವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

ವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

- Advertisement -
- Advertisement -

“ವಿಜಯ ಕರ್ನಾಟಕ” ಕನ್ನಡ ದಿನಪತ್ರಿಕೆಯು ಕರೊನಾವನ್ನು ಕೋಮುವಾದಕ್ಕೆ ಬಳಸುತ್ತಿದೆ ಎಂದು ಆರೋಪಿಸಿ ಪತ್ರಿಕೆಯ ವಿರುದ್ದ ಕರ್ನಾಟಕ ಮುಸ್ಲಿಂ ಜಮಾಅತ್ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ದಿನ ಪತ್ರಿಕೆಯು ತನ್ನ ಮುಖಪುಟದಲ್ಲಿ ಒಂದು ಸಮುದಾಯವನ್ನು ಉದ್ದೇಶಿಸಿ “ಸತ್ತವರೆಲ್ಲ ಒಂದೇ ಸಮುದಾಯದವರು” ಎಂಬ ತಲೆ ಬರಹದ ವರದಿಯನ್ನು ಮಾಡಿತ್ತು.

ಇದನ್ನು ವಿರೋಧಿಸಿ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್‍ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ “ಧರ್ಮ, ವರ್ಗ, ವರ್ಣ ಎಂಬ ವ್ಯತ್ಯಾಸ ಇಲ್ಲದೆ ಎಲ್ಲರಲ್ಲೂಕೊರೊನ ರೋಗ ಕಂಡು ಬಂದಿದೆ. ಆದರೆ ಕನ್ನಡ ಪತ್ರಿಕೋದ್ಯಮದ ಕೆಲವರ ಕೋಮು ಮನಸ್ಥಿತಿ ಈ ಕೊರೊನವನ್ನೂ ಕೋಮುವಾದೀಕರಣ ಮಾಡಲು ಹೊರಟಿದೆ, ’ಸತ್ತವರೆಲ್ಲಾ ಒಂದೇ ಸಮುದಾಯದವರು’ ಎಂಬ ಮುಖಪುಟ ವರದಿಯನ್ನು ಪ್ರಕಟಿಸಿರುವ ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವೈರಸ್ ಕರ್ನಾಟಕದಲ್ಲಿ ಯಾವ ಧರ್ಮದವರಲ್ಲಿ ಹೆಚ್ಚು ಬಂದಿದೆ, ಯಾವ ಧರ್ಮದವರು ಹೆಚ್ಚು ಸತ್ತಿದ್ದಾರೆ, ಯಾವ ಧರ್ಮದವರಿಗೆ ಪೋಲೀಸರು ಹೆಚ್ಚು ಹೊಡೆದಿದ್ದಾರೆ ಎನ್ನುವ ಸುದ್ದಿಯೊಂದಿಗೆ ವಿಕೃತ ಮನೋಭಾವವನ್ನು ಪ್ರದರ್ಶಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ, ’ಕೊರೋನಾ ಹರಡಿ’ ಎಂದು ಟ್ವಿಟರ್ ನಲ್ಲಿ ಕರೆ ನೀಡಿದ್ದ ಕಿಡಿಗೇಡಿಯೊಬ್ಬನ ನೀಚ ಕೃತ್ಯವನ್ನೂ ಈ ವರದಿಯೊಂದಿಗೆ ಜೋಡಿಸಿ ಇತರ ಸಮುದಾಯಗಳ ಮಧ್ಯೆ ಮುಸ್ಲಿಂ ಸಮುದಾಯವನ್ನು ತಪ್ಪಿತಸ್ಥ ವಿಭಾಗವನ್ನಾಗಿ ಚಿತ್ರೀಕರಿಸುವ ಪ್ರಯತ್ನವೂ ನಡೆದಿದೆ” ಎಂದು ಅವರು ಆರೋಪಿಸಿದ್ದಾರೆ.

“ಮನುಷ್ಯ ವರ್ಗದ ಭಾವುಕ ಕ್ಷಣಗಳನ್ನು, ಸೂಕ್ಷ್ಮ ಸಂವೇದನೆಗಳನ್ನು ಕೋಮು ವೈಷಮ್ಯಕ್ಕೆ ತಿರುಗಿಸುವ ಈ ಹೀನ ಕೃತ್ಯ ಖಂಡನೀಯ. ಇದು ಅಮಾನವೀಯ ಮತ್ತು ಪತ್ರಿಕಾ ಧರ್ಮಕ್ಕೆ ವಿರುದ್ಧ” ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯಪಟ್ಟಿದೆ.

“ಕೊರೊನ ವಿರುದ್ದ ಹೋರಾಟದಲ್ಲಿ ಇಡೀ ಮುಸ್ಲಿಂ ಸಮುದಾಯ ಭಾಗಿಯಾಗಿದ್ದು, ಚರಿತ್ರೆಯಲ್ಲೇ ಮೊದಲ ಬಾರಿ ಮುಸ್ಲಿಮರು ಮಸೀದಿಗಳಲ್ಲಿ ನಮಾಝ್ ನಿಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರು ನಮಾಝ್ ಮಾಡಲು ಮಸೀದಿಗೆ ಹೋಗಬೇಕಾಗಿಲ್ಲ ಎಂಬ ಫತ್ವಾವನ್ನು ಅತ್ಯಂತ ಯಶಸ್ವಿಯಾಗಿ ಸಮುದಾಯದ ಮಧ್ಯೆ ಬಿತ್ತರಿಸಲು ಮುಸ್ಲಿಂ ಪಂಡಿತರಿಗೆ ಸಾಧ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಮುಸ್ಲಿಮರ ಈ ಹೋರಾಟವನ್ನು ಶ್ಲಾಘಿಸಿದ್ದಾರೆ”ಎಂದು ಹೇಳಿದ್ದಾರೆ.

ಇಂದು ತುರ್ತಾಗಿ ವೀಡಿಯೋ ಕಾನ್ನರೆನ್ಸ್ ಮೂಲಕ ಸಭೆ ನಡೆಸಿದ ಮುಸ್ಲಿಂ ಜಮಾಅತ್ ರಾಜ್ಯ ಸಕಟರಿಯೇಟ್ ಈ ವರದಿ ಮತ್ತು ಪತ್ರಿಕೆಯ ವಿರುದ್ಧ ಮುಖ್ಯಮಂತ್ರಿಗಳಿಗೆ, ಪತ್ರಿಕಾ ಸಂಪಾದಕರಿಗೆ ಮತ್ತು ಪೆಸ್ ಕೌನ್ಸಿಲ್‌ಗೆ ದೂರು ನೀಡಲು ನಿರ್ಧರಿಸಿದೆ ಅಲ್ಲದೆ ಅಗತ್ಯ ಬಿದ್ದಲಿ ಕಾನೂನು ಹೋರಾಟಕ್ಕೂ ಸಂಘಟನೆ ಸಿದ್ದವಾಗಿದೆ ಎಂದು ಮುಸ್ಲಿಂ ಜಮಾಅತ್ ಹೇಳಿದೆ.

ಜನರು ಸಾಮರಸ್ಯವನ್ನು ಕದಡದೆ, ಕೋಮುವಾದಿಗಳ ಪ್ರಯತ್ನವನ್ನು ಸಫಲಗೊಳಿಸಲು ಬಿಡಬಾರದು ಎಂದು ಜಮಾಅತ್ ಜನತೆಯೊಂದಿಗೆ ವಿನಂತಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...