Homeಕರ್ನಾಟಕವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

ವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

- Advertisement -
- Advertisement -

“ವಿಜಯ ಕರ್ನಾಟಕ” ಕನ್ನಡ ದಿನಪತ್ರಿಕೆಯು ಕರೊನಾವನ್ನು ಕೋಮುವಾದಕ್ಕೆ ಬಳಸುತ್ತಿದೆ ಎಂದು ಆರೋಪಿಸಿ ಪತ್ರಿಕೆಯ ವಿರುದ್ದ ಕರ್ನಾಟಕ ಮುಸ್ಲಿಂ ಜಮಾಅತ್ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ದಿನ ಪತ್ರಿಕೆಯು ತನ್ನ ಮುಖಪುಟದಲ್ಲಿ ಒಂದು ಸಮುದಾಯವನ್ನು ಉದ್ದೇಶಿಸಿ “ಸತ್ತವರೆಲ್ಲ ಒಂದೇ ಸಮುದಾಯದವರು” ಎಂಬ ತಲೆ ಬರಹದ ವರದಿಯನ್ನು ಮಾಡಿತ್ತು.

ಇದನ್ನು ವಿರೋಧಿಸಿ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್‍ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ “ಧರ್ಮ, ವರ್ಗ, ವರ್ಣ ಎಂಬ ವ್ಯತ್ಯಾಸ ಇಲ್ಲದೆ ಎಲ್ಲರಲ್ಲೂಕೊರೊನ ರೋಗ ಕಂಡು ಬಂದಿದೆ. ಆದರೆ ಕನ್ನಡ ಪತ್ರಿಕೋದ್ಯಮದ ಕೆಲವರ ಕೋಮು ಮನಸ್ಥಿತಿ ಈ ಕೊರೊನವನ್ನೂ ಕೋಮುವಾದೀಕರಣ ಮಾಡಲು ಹೊರಟಿದೆ, ’ಸತ್ತವರೆಲ್ಲಾ ಒಂದೇ ಸಮುದಾಯದವರು’ ಎಂಬ ಮುಖಪುಟ ವರದಿಯನ್ನು ಪ್ರಕಟಿಸಿರುವ ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವೈರಸ್ ಕರ್ನಾಟಕದಲ್ಲಿ ಯಾವ ಧರ್ಮದವರಲ್ಲಿ ಹೆಚ್ಚು ಬಂದಿದೆ, ಯಾವ ಧರ್ಮದವರು ಹೆಚ್ಚು ಸತ್ತಿದ್ದಾರೆ, ಯಾವ ಧರ್ಮದವರಿಗೆ ಪೋಲೀಸರು ಹೆಚ್ಚು ಹೊಡೆದಿದ್ದಾರೆ ಎನ್ನುವ ಸುದ್ದಿಯೊಂದಿಗೆ ವಿಕೃತ ಮನೋಭಾವವನ್ನು ಪ್ರದರ್ಶಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ, ’ಕೊರೋನಾ ಹರಡಿ’ ಎಂದು ಟ್ವಿಟರ್ ನಲ್ಲಿ ಕರೆ ನೀಡಿದ್ದ ಕಿಡಿಗೇಡಿಯೊಬ್ಬನ ನೀಚ ಕೃತ್ಯವನ್ನೂ ಈ ವರದಿಯೊಂದಿಗೆ ಜೋಡಿಸಿ ಇತರ ಸಮುದಾಯಗಳ ಮಧ್ಯೆ ಮುಸ್ಲಿಂ ಸಮುದಾಯವನ್ನು ತಪ್ಪಿತಸ್ಥ ವಿಭಾಗವನ್ನಾಗಿ ಚಿತ್ರೀಕರಿಸುವ ಪ್ರಯತ್ನವೂ ನಡೆದಿದೆ” ಎಂದು ಅವರು ಆರೋಪಿಸಿದ್ದಾರೆ.

“ಮನುಷ್ಯ ವರ್ಗದ ಭಾವುಕ ಕ್ಷಣಗಳನ್ನು, ಸೂಕ್ಷ್ಮ ಸಂವೇದನೆಗಳನ್ನು ಕೋಮು ವೈಷಮ್ಯಕ್ಕೆ ತಿರುಗಿಸುವ ಈ ಹೀನ ಕೃತ್ಯ ಖಂಡನೀಯ. ಇದು ಅಮಾನವೀಯ ಮತ್ತು ಪತ್ರಿಕಾ ಧರ್ಮಕ್ಕೆ ವಿರುದ್ಧ” ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯಪಟ್ಟಿದೆ.

“ಕೊರೊನ ವಿರುದ್ದ ಹೋರಾಟದಲ್ಲಿ ಇಡೀ ಮುಸ್ಲಿಂ ಸಮುದಾಯ ಭಾಗಿಯಾಗಿದ್ದು, ಚರಿತ್ರೆಯಲ್ಲೇ ಮೊದಲ ಬಾರಿ ಮುಸ್ಲಿಮರು ಮಸೀದಿಗಳಲ್ಲಿ ನಮಾಝ್ ನಿಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರು ನಮಾಝ್ ಮಾಡಲು ಮಸೀದಿಗೆ ಹೋಗಬೇಕಾಗಿಲ್ಲ ಎಂಬ ಫತ್ವಾವನ್ನು ಅತ್ಯಂತ ಯಶಸ್ವಿಯಾಗಿ ಸಮುದಾಯದ ಮಧ್ಯೆ ಬಿತ್ತರಿಸಲು ಮುಸ್ಲಿಂ ಪಂಡಿತರಿಗೆ ಸಾಧ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಮುಸ್ಲಿಮರ ಈ ಹೋರಾಟವನ್ನು ಶ್ಲಾಘಿಸಿದ್ದಾರೆ”ಎಂದು ಹೇಳಿದ್ದಾರೆ.

ಇಂದು ತುರ್ತಾಗಿ ವೀಡಿಯೋ ಕಾನ್ನರೆನ್ಸ್ ಮೂಲಕ ಸಭೆ ನಡೆಸಿದ ಮುಸ್ಲಿಂ ಜಮಾಅತ್ ರಾಜ್ಯ ಸಕಟರಿಯೇಟ್ ಈ ವರದಿ ಮತ್ತು ಪತ್ರಿಕೆಯ ವಿರುದ್ಧ ಮುಖ್ಯಮಂತ್ರಿಗಳಿಗೆ, ಪತ್ರಿಕಾ ಸಂಪಾದಕರಿಗೆ ಮತ್ತು ಪೆಸ್ ಕೌನ್ಸಿಲ್‌ಗೆ ದೂರು ನೀಡಲು ನಿರ್ಧರಿಸಿದೆ ಅಲ್ಲದೆ ಅಗತ್ಯ ಬಿದ್ದಲಿ ಕಾನೂನು ಹೋರಾಟಕ್ಕೂ ಸಂಘಟನೆ ಸಿದ್ದವಾಗಿದೆ ಎಂದು ಮುಸ್ಲಿಂ ಜಮಾಅತ್ ಹೇಳಿದೆ.

ಜನರು ಸಾಮರಸ್ಯವನ್ನು ಕದಡದೆ, ಕೋಮುವಾದಿಗಳ ಪ್ರಯತ್ನವನ್ನು ಸಫಲಗೊಳಿಸಲು ಬಿಡಬಾರದು ಎಂದು ಜಮಾಅತ್ ಜನತೆಯೊಂದಿಗೆ ವಿನಂತಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...