Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...