Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...