Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...