Homeಕರ್ನಾಟಕವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರದ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸರ್ಕಾರದ ತಪ್ಪಿನಿಂದ ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕೊರೊನಾ 3ನೇ ಹಂತಕ್ಕೆ ಇನ್ನೂ ತಲುಪಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ, ಆತನಿಗೆ ವಿದೇಶದಿಂದ ಬಂದವರ ಯಾರ ಸಂಪರ್ಕವೂ ಇರಲಿಲ್ಲ. ಆದರೂ ಆತನಿಗೆ ಕರೋನ ಬಂದಿದ್ದು ಹೇಗೆ ಎಂಬುದನ್ನು ಶೀಘ್ರ ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬರು ಕೊರೊನಾ ಇಂದ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುದನ್ನು ಪತ್ತೆಹಚ್ಚಬೇಕಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಹಳ್ಳಿಗಳಿಗೆ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.

ಈಗ ದಾಸ್ತಾನಾಗಿರುವ ಮಾಸ್ಕ್, ಸ್ಯಾನಿಟೈಸರ್ ಯಾವುದಕ್ಕೂ ಸಾಲದು. ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಆ ಕೆಲಸ ವಹಿಸಿ. ಸೋಂಕು 3ನೇ ಹಂತಕ್ಕೆ ಹೋಗುವುದನ್ನು ತಡೆಯುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು. ಕರ್ನಾಟಕದಲ್ಲಿ 6020 ಪಂಚಾಯಿತಿಗಳಿವೆ. ಒಂದೊಂದು ಪಂಚಾಯಿತಿಗೆ ಒಬ್ಬ ಮೆಡಿಕಲ್ ಅಧಿಕಾರಿ ನೇಮಕ ಮಾಡಬೇಕು. ಆಹಾರ, ಕೃಷಿ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೃಷಿ ಅಧಿಕಾರಿಯನ್ನೂ ಪಂಚಾಯಿತಿಗೆ ಒಬ್ಬರಂತೆ ಈ ಕೂಡಲೇ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಹೊರ ರಾಜ್ಯದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರನ್ನು ಸ್ವಂತ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು, ಜೊತೆಗೆ ಹೊರ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ರಾಜ್ಯದ ಗಡಿ ತಲುಪಿದ್ದಾರೆ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ. ಮುಂದಿನ ಎರಡು ವಾರ ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ. ಹೀಗಾಗಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಅದನ್ನು‌ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಹಾಗಂತ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡುವುದು ಬೇಡ, ಜನರ ಮನವೊಲಿಸಲು ಹಲವು ಮಾರ್ಗಗಳಿವೆ ಎಂದರು.

ಸರ್ಕಾರವೇ ಮನೆ ಮನೆಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿದರೆ ಒಳ್ಳೆಯದು. ಆಗ ಜನರು ಹೊರಬರುವುದು ತಪ್ಪುತ್ತದೆ. ಪೊಲೀಸರಿಗೂ ವಿಮೆ ಮಾಡಿಸುವುದು ಸೂಕ್ತ. ಈ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಯವರ ಬಳಿ ಮಾತನಾಡಲಿ. ಪೊಲೀಸರ ಜೀವಕ್ಕೂ ಭದ್ರತೆ ಬೇಕು. ಇದರ ಜೊತೆಗೆ ಪೌರ ಕಾರ್ಮಿಕರಿಗೂ ವಿಮೆ ಸೌಲಭ್ಯ ಸಿಗಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...