Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...