Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...