Homeಕರ್ನಾಟಕಪೊಲೀಸರ ಲಾಠಿ ಏಟಿಗೆ ರೈತನ ಸಾವು ಆರೋಪ: ಮುಖ್ಯಮಂತ್ರಿಗಳ ತವರಿನಲ್ಲೇ ಹೆಚ್ಚಿದ ದೌರ್ಜನ್ಯ

ಪೊಲೀಸರ ಲಾಠಿ ಏಟಿಗೆ ರೈತನ ಸಾವು ಆರೋಪ: ಮುಖ್ಯಮಂತ್ರಿಗಳ ತವರಿನಲ್ಲೇ ಹೆಚ್ಚಿದ ದೌರ್ಜನ್ಯ

- Advertisement -
- Advertisement -

ಕೊರೋನಾ ಸೋಂಕು ಪ್ರಸರಣ ಮತ್ತು ಅದರ ನಿಯಂತ್ರಣ ವಿಷಯಕ್ಕಿಂತ ಸದ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಾಕ್ ಡೌನ್ ನಿರ್ವಹಣೆಯ ಪೊಲೀಸರ ವರಸೆಯೇ ಹೆಚ್ಚು ಚರ್ಚೆಯಾಗತೊಡಗಿದೆ.

ಒಂದು ಕಡೆ; ಹಾಲು, ತರಕಾರಿ, ಔಷಧ ಮತ್ತಿತರ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿರುವ ಸರ್ಕಾರ, ಕನಿಷ್ಠ ಅಂತರ ಮತ್ತು ಸುರಕ್ಷಾ ಮಂಜಾಗ್ರತೆಯೊಂದಿಗೆ ಜನರು ತೀರಾ ಅನಿವಾರ್ಯ ಸಂದರ್ಭದಲ್ಲಿ ರಸ್ತೆಗಿಳಿಯಬಹುದು ಎಂದು ಹೇಳಿದೆ. ಆದರೆ, ಅದೇ ಹೊತ್ತಿಗೆ, ಪೊಲೀಸರು ಔಷಧಿ, ಕುಡಿಯುವ ನೀರು, ತರಕಾರಿ, ಹಾಲು ಮುಂತಾದ ವಸ್ತುಗಳ ತರಲು ಹೋದವರಿಗಷ್ಟೇ ಅಲ್ಲದೆ, ಸರ್ಕಾರದ ಆರೋಗ್ಯಸೇವೆಯಲ್ಲಿ ಕರ್ತವ್ಯನಿರತರಾದ ಸಿಬ್ಬಂದಿಯ ಮೇಲೂ ಲಾಠಿ ಬೀಸುತ್ತಿರುವ ಪ್ರಕರಣಗಳು ಎಲ್ಲೆಡೆಯಿಂದ ವರದಿಯಾಗುತ್ತಿವೆ. ಒಂದು ಕಡೆ ಸರ್ಕಾರದ ವಿನಾಯ್ತಿಯನ್ನೇ ಬಳಸಿಕೊಂಡು ತರಕಾರಿ- ದಿನಸಿ ಖರೀದಿಗೆ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ಮುಗಿಬೀಳುವ ನಾಗರಿಕರು, ಮತ್ತೊಂದು ಕಡೆ ಲಾಕ್ ಡೌನ್ ಮತ್ತು ಕರ್ಫ್ಯೂಗೆ ವ್ಯತ್ಯಾಸವಿಲ್ಲದಂತೆ ಕಂಡಕಂಡವರ ಮೇಲೆ ಯಾವುದೇ ಪೂರ್ವಾಪರ ವಿಚಾರಿಸದೇ ಪೈಶಾಚಿಕ ದಾಳಿ ನಡೆಸುತ್ತಿರುವ ಪೊಲೀಸರು!

ಪೊಲೀಸರ ಇಂತಹ ವರಸೆಗೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲೇ ರೈತನೊಬ್ಬ ಜೀವ ಬಿಟ್ಟಿರುವ ಘಟನೆ ವರದಿಯಾಗಿದೆ. ಪೊಲೀಸರು ಆತನ ಸಾವಿಗೆ ತಾವು ಕಾರಣವಲ್ಲ; ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದರೂ, ವಾಸ್ತವವಾಗಿ ಶನಿವಾರ ರಾತ್ರಿ 10.30ರ ಸುಮಾರಿಗೆ ಜಮೀನಿಗೆ ನೀರು ಹಾಯಿಸಲು ಹೋಗಿ ವಾಪಸು ಬರುವಾಗ ಮನೆಯ ಸಮೀಪದ ಚೆಕ್ ಪೋಸ್ಟಿನಲ್ಲಿ ಪೊಲೀಸರು ತಮ್ಮ ತಂದೆಯನ್ನು ತಡೆದು ಒಂಟಿಯಾಗಿದ್ದ ಅವರ ಮೇಲೆ ದಾಳಿ ನಡೆಸಿದರು. ಲಾಠಿ ಏಟಿನಿಂದ ಅವರು ಸಾವು ಕಂಡಿದ್ದಾರೆ. ಎದೆಯ ಭಾಗದಲ್ಲಿ ಲಾಠಿ ಗುರುತುಗಳಿರುವುದೇ ಇದಕ್ಕೆ ನಿದರ್ಶನ ಎಂದು ಮೃತ ಲಕ್ಷ್ಮಣ ನಾಯ್ಕ(55)ನ ಪುತ್ರ ರಾಮಚಂದ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಣ್ಣದಕೊಪ್ಪದ ಲಕ್ಷ್ಮಣ ನಾಯ್ಕ ಅವರ ಶವದ ವೀಡಿಯೋ ದೃಶ್ಯಾವಳಿಗಳಲ್ಲಿ ಕೂಡ ಪೆಟ್ಟಿನ ಗುರುತುಗಳು ಕಾಣುತ್ತಿವೆ ಎಂಬುದು ಕೂಡ ಗಮನಾರ್ಹ. ಸ್ವತಃ ಲಕ್ಷ್ಮಣ ನಾಯ್ಕನ ಮನೆಮಂದಿ ಮತ್ತು ಗ್ರಾಮಸ್ಥರು ಕೂಡ ಇದು ಪೊಲೀಸರ ಲಾಠಿ ಏಟಿನಿಂದಲೇ ಆಗಿರುವ ಸಾವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿ, ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿದ್ದು, ರಾಮಚಂದ್ರ ತನ್ನ ಲಜೇಜು ವಾಹನದಲ್ಲಿ ಎರಡು ಮೂರು ಬಾರಿ ಓಡಾಡಿದ್ದರಿಂದ ಪೊಲೀಸರು ತಡೆದು ಬುದ್ದಿವಾದ ಹೇಳಿದ್ದರು. ಅಷ್ಟರಲ್ಲಿ ಸಮೀಪದ ಮನೆಯಲ್ಲಿದ್ದ ಲಕ್ಷ್ಮಣ ಕೂಡ ಚೆಕ್ ಪೋಸ್ಟ್ ಬಳಿ ಬಂದಿದ್ದರು. ಬಳಿಕ ಪೊಲೀಸರು ಅಪ್ಪ- ಮಗ ಇಬ್ಬರನ್ನೂ ಮನೆಗೆ ಕಳಿಸಿದ್ದರು. ಆಗ ನಡೆದುಕೊಂಡು ಮನೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಕುಸಿದುಬಿದ್ದು ಲಕ್ಷ್ಮಣ ಸಾವು ಕಂಡಿದ್ದಾರೆ ಎಂದು ತಮ್ಮ ಸಿಬ್ಬಂದಿ ತಿಳಿಸಿದ್ದಾರೆ ಎಂದಿದ್ದಾರೆ. ಆದರೆ, ರಾಮಚಂದ್ರ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಲಾಗುವುದು. ಶವಪರೀಕ್ಷೆಯ ವರದಿ ಬಂದ ಬಳಿಕ ತನಿಖೆ ಆರಂಭವಾಗುವುದು ಎಂದಿದ್ದಾರೆ.

ಇದನ್ನು ಓದಿ: ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಆದರೆ, ಪೊಲೀಸರ ಹೇಳಿಕೆ ಪ್ರಕಾರವೇ ರಾಮಚಂದ್ರ ಒಂಟಿಯಾಗಿ ತನ್ನ ಲಗೇಜ್ ಆಟೋದಲ್ಲಿ ತನ್ನ ಹೊಲಕ್ಕೆ ಎರಡು ಮೂರು ಬಾರಿ ಓಡಾಡಿದ್ದರಲ್ಲಿ ಲಾಕ್ ಡೌನ್ ಉಲ್ಲಂಘನೆಯ ಪ್ರಶ್ನೆ ಎಲ್ಲಿದೆ? ಒಬ್ಬ ರೈತ ಬೇಸಿಗೆಯಲ್ಲಿ ಬೆಳೆಗೆ ನೀರು ಹಾಯಿಸಲು ವಿದ್ಯುತ್ ಅಭಾವದ ನಡುವೆ ಹತ್ತಾರು ಬಾರಿ ಹೊಲಕ್ಕೆ ಓಡಾಡಬೇಕಾಗುತ್ತದೆ. ಅದೂ ಆತ ಒಂಟಿಯಾಗಿ ಓಡಾಡುವುದರಿಂದ ಮತ್ತೊಬ್ಬರಿಗೆ ಸೋಂಕು ಹರಡಿಸುವ ಅಥವಾ ಸೋಂಕಿಗೆ ಸ್ವತಃ ಒಳಗಾಗುವ ಪ್ರಮೇಯ ಕೂಡ ಇರದು. ಹಾಗಿದ್ದರೂ ಪೊಲೀಸರು ಯಾಕೆ ಆತನನ್ನು ಚೆಕ್ ಪೋಸ್ಟ್ ನಲ್ಲಿ ತಡೆದು, ಮನೆಯಲ್ಲಿದ್ದ ಆತನ ತಂದೆ ರಸ್ತೆಗೆ ಬರುವಂತೆ ಮಾಡಿದರು ? ಎಂಬುದು ತನಿಖೆಯಾಗಬೇಕಾದ ಸಂಗತಿ. ಪೊಲೀಸರು ಹೊಡೆದಿಲ್ಲವೆಂಬ ಮಾತನ್ನು ಒಪ್ಪಿಕೊಂಡರೂ, ಅವರು ಆತನನ್ನು ತಡೆದಿದ್ದು ಯಾವ ಕಾರಣಕ್ಕೆ ಎಂಬುದು ಕೂಡ ಅನುಮಾಸ್ಪದವಾಗಿದೆ. ಲಾಕ್ ಡೌನ್ ಇರುವಾಗ ರೈತರು ಏಕಾಂಗಿಯಾಗಿ ತನ್ನ ಹೊಲಕ್ಕೆ ಹೋಗಬಾರದು ಎಂಬ ಕಾನೂನು ಇದೆಯೇ ಎಂಬ ಪ್ರಶ್ನೆ ಕೂಡ ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದಿದೆ.

ಈ ನಡುವೆ ಇಂತಹದ್ದೇ ಮತ್ತೊಂದು ಪ್ರಕರಣ ಬೆಳಗಾವಿಯಲ್ಲಿ ನಡೆದಿದೆ. ಅಲ್ಲಿನ ಆರೋಗ್ಯ ಇಲಾಖೆಯ ನೌಕರರೊಬ್ಬರು ಕರೋನಾ ಕಾರ್ಯಾಚರಣೆಯ ಮೇಲೆ ಕರ್ತವ್ಯದಲ್ಲಿದ್ದವರನ್ನೇ ಪೊಲೀಸರು ಮನಸೋಇಚ್ಛೆ ಥಳಿಸಿ ಕೈಕಾಲು ಮುರಿದು ಆಸ್ಪತ್ರೆಗೆ ಸೇರುವಂತೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅವರ ವೀಡಿಯೋದಲ್ಲಿ, ‘ತಾವು ಜಿಲ್ಲಾಧಿಕಾರಿಗಳು ಕರೆದಿರುವ ವಿಶೇಷ ಸಭೆಗೆ ತೆರಳುತ್ತಿದ್ದೇನೆ. ಕರ್ತವ್ಯದ ಮೇಲೆ ಇರುವ ಆರೋಗ್ಯ ಇಲಾಖೆ ನೌಕರ ಎಂದು ಕಡತ ತೋರಿಸಿದರೂ ಪೊಲೀಸರು ಅಟ್ಟಾಡಿಸಿ ಹೊಡೆದರು. ತಮ್ಮ ಐಡಿ ಕಾರ್ಡು, ಕಡತ ಯಾವುದನ್ನು ತೋರಿಸಿದರೂ ಅದನ್ನು ಕೇಳುವ ವ್ಯವಧಾನವೇ ಇರಲಿಲ್ಲ. 25-30 ಬಾರಿ ಪೊಲೀಸರು ಗುಂಪಾಗಿ ಹೊಡೆದ ಪರಿಣಾಮ ಒಂದು ಕೈ ಮುರಿದಿದೆ. ಕಾಲು ಮತ್ತು ಬೆನ್ನಿಗೆ ತೀವ್ರ ಪೆಟ್ಟಾಗಿದೆ” ಎಂದು ಹೇಳಿದ್ದಾರೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಕೈಗೆ ಬ್ಯಾಂಡೇಜು ಹಾಕಿಸಿಕೊಂಡು ಅವರು ನೀಡಿರುವ ಹೇಳಿಕೆಯ ವೀಡಿಯೋ ಈಗ ವೈರಲ್ ಆಗಿದೆ.

ಇದನ್ನು ಓದಿ: ಸರಕಾರದ ಬೇಜವಾಬ್ದಾರಿಯ ಸಾವುಗಳು ಕೊರೊನಾ ಸಾವುಗಳಿಗಿಂತಲೂ ಭೀಕರ: ಪಿ.ಸಾಯಿನಾಥ್

ಪೊಲೀಸರಿಗೆ ಮುಖ್ಯವಾಗಿ; ಕರ್ಫ್ಯೂ ಮತ್ತು ಲಾಕ್ ಡೌನ್ ನಡುವೆ ಇರುವ ವ್ಯತ್ಯಾಸದ ಬಗ್ಗೆ ಹಿರಿಯ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೇ ಇರುವುದೇ ಪೊಲೀಸರ ಈ ಅಟ್ಟಹಾಸಕ್ಕೆ ಕಾರಣ ಎನ್ನಲಾಗುತ್ತಿದೆ. ವೃದ್ಧರು, ಮಕ್ಕಳು ಮರಿ, ಮಹಿಳೆಯರೆನ್ನದೆ ಪೊಲೀಸರು ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದಾರೆ. ಇಷ್ಟಾಗಿಯೂ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ತುಟಿಬಿಚ್ಚಿಲ್ಲ. ಕಾನೂನು ಸುವ್ಯವಸ್ಥೆ ಕಾಯುವ ಕರ್ಫ್ಯೂ ಸಂದರ್ಭಕ್ಕೂ ಒಂದು ಸಾಂಕ್ರಾಮಿಕದ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೇರುವ ಲಾಕ್ ಡೌನ್ ಸಂದರ್ಭಕ್ಕೂ ಇರುವ ವ್ಯತ್ಯಾಸ ಸ್ವತಃ ಗೃಹ ಸಚಿವರಿಗೆ ಸ್ಪಷ್ಟವಿದ್ದಂತಿಲ್ಲ. ಹಾಗಾಗಿಯೇ ಇಷ್ಟೊಂದು ಅವಘಡಗಳಿಗೆ ಈ ಲಾಕ್ ಡೌನ್ ಸಾಕ್ಷಿಯಾಗುತ್ತಿದೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.

ಈ ನಡುವೆ, ಹಲವು ಸಾಮಾಜಿಕ ಸಂಘಟನೆಗಳು ಮತ್ತು ಹೋರಾಟಗಾರರು ಪೊಲೀಸರ ಕ್ರಮವನ್ನು ಖಂಡಿಸಿದ್ದು, “ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಮೊಂಡುತನದ ಜನರನ್ನು ಆ ಶಿಸ್ತಿಗೆ ಒಗ್ಗಿಸಲು ಪೊಲೀಸರು ಬೀದಿಗಿಳಿಯುವುದು ಕೂಡ ಅನಿವಾರ್ಯ. ಆದರೆ, ರಸ್ತೆಯಲ್ಲಿ ಸಂಚರಿಸುವ ವ್ಯಕ್ತಿ ಏಕೆ ಬಂದಿದ್ದಾನೆ ಎಂಬುದನ್ನು ತಿಳಿಯುವ ತಾಳ್ಮೆ ಪೊಲೀಸರಿಗೆ ಇರಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿಯೂ ಜನ ತೀರಾ ಅನಿವಾರ್ಯವಿಲ್ಲದೆ ತಮ್ಮ ಸುರಕ್ಷತೆಯನ್ನೂ ಪಣಕ್ಕಿಟ್ಟು ರಸ್ತೆಗೆ ಇಳಿಯಲಾರರು ಎಂಬುದು ಸಾಮಾನ್ಯ ಜ್ಞಾನ. ಪೊಲೀಸರು ಇದನ್ನು ಅರ್ಥಮಾಡಿಕೊಂಡು ಒಂದಿಷ್ಟು ಸಂಯಮದಿಂದ ವರ್ತಿಸದೇ ಹೋದರೆ, ಕರೋನಾ ಸಾವಿಗೆ ಮುನ್ನವೇ ಜನರ ಲಾಠಿ ಏಟಿಗೆ ಸಾಯುವ ಪರಿಸ್ಥಿತಿ ತಲೆದೋರಬಹುದು” ಎಂಬ ಸಾಮಾಜಿಕ ಹೋರಾಟಗಾರ ಹಾಗೂ ಹಿರಿಯ ವಕೀಲ ಕೆ ಪಿ ಶ್ರೀಪಾಲ್ ಆತಂಕ ವ್ಯಕ್ತಪಡಿಸಿದ್ದಾರೆ.

“ಮುಖ್ಯವಾಗಿ ಶಿಕಾರಿಪುರ ತಾಲ್ಲೂಕಿನ ರೈತನ ಸಾವಿನ ಕುರಿತು ಪ್ರತ್ಯೇಕವಾಗಿ ನ್ಯಾಯಾಂಗ ತನಿಖೆಯಾಗಬೇಕು. ಏಕೆಂದರೆ, ಸಾವಿನ ವಿಷಯದಲ್ಲಿ ಜನರು ಮತ್ತು ಕುಟುಂಬವರ್ಗದವರು ಹೇಳುವ ಸಂಗತಿಗಳಿಗೂ, ಪೊಲೀಸರ ಸ್ಪಷ್ಟನೆಗೆ ಸಾಕಷ್ಟು ಗೊಂದಲವಿದೆ. ಜೊತೆಗೆ ರೈತನೊಬ್ಬ ತನ್ನ ಹೊಲಕ್ಕೆ ನೀರು ಬಿಡಲು ಹೋಗುತ್ತಿದ್ದಾಗ ಆತನನ್ನು ತಡೆದು ಆತಂಕ ಮೂಡಿಸುವ ಪ್ರಮೇಯವೇ ಇಲ್ಲ. ಹಾಗಿದ್ದರೂ ಚೆಕ್ ಪೋಸ್ಟ್ ಪೊಲೀಸರು ಯಾಕೆ ಹಾಗೆ ಮಾಡಿದರು? ಎಂಬ ಪ್ರಶ್ನೆಯೂ ಇದೆ. ಹಾಗಾಗಿ ಘಟನೆ ಕುರಿತು ನ್ಯಾಯಾಂಗ ತನಿಖೆಯಾಗಬೇಕು ಮತ್ತು ಒಂದು ವೇಳೆ ಪೊಲೀಸರ ತಪ್ಪಿದ್ದರೆ, ತಕ್ಕ ಶಿಕ್ಷೆಯಾಗಬೇಕು” ಎಂದೂ ಶ್ರೀಪಾಲ್ ಆಗ್ರಹಿಸಿದ್ದಾರೆ.

ಈ ನಡುವೆ, ಜನರು ಅಗತ್ಯ ವಸ್ತಗಳಿಗಾಗಿ ಹೊರಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ವಿವಿಧ ಜಿಲ್ಲಾಡಳಿತಗಳು ಪ್ರತಿ ಮನೆ ಬಾಗಿಲಿಗೆ ತರಕಾರಿ, ಹಾಲು, ಹಣ್ಣು ಮುಂತಾದ ವಸ್ತುಗಳನ್ನು ತಲುಪಿಸುವ ಕ್ರಮಕೈಗೊಳ್ಳುತ್ತಿವೆ. ಜೊತೆಗೆ ಔಷಧಿ, ಆಹಾರ ಪದಾರ್ಥ ಮುಂತಾದ ತುರ್ತು ಅಗತ್ಯಗಳನ್ನು ಕೂಡ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸ್ವಯಂಸೇವಾ ಸಂಸ್ಥೆಗಳು ಮತ್ತು ವೃತ್ತಿನಿರತರ ಸ್ವಯಂಸೇವಕರನ್ನು ಬಳಸಿಕೊಂಡು ಪರಿಣಾಮಕಾರಿ ವ್ಯವಸ್ಥೆ ಜಾರಿಗೊಳಿಸಿದ್ದಲ್ಲಿ ಸಾಮಾಜಿಕ ಅಂತರವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯ. ಆ ದಿಸೆಯಲ್ಲಿ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳು ಹೆಚ್ಚು ಗಮನ ಹರಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...