Homeಮುಖಪುಟಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

ಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

- Advertisement -
- Advertisement -

ಲಾಕ್‌ಡೌನ್ ಸಂಧರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ದೆಹಲಿಯಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೊರಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರಕ್ಕೆ ಕೇಂದ್ರ ತೀಕ್ಷ್ಣ ಪತ್ರ ಕಳುಹಿಸಿದೆ.

ಶನಿವಾರದಂದು ದೆಹಲಿಯಿಂದ ಹತ್ತಾರು ಸಾವಿರ ಕಾರ್ಮಿಕರು ವಲಸೆ ಹೋಗುತ್ತಿರುವ ಕುರಿತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀಕ್ಷ್ಣವಾಗಿ ಪತ್ರ ಬರೆದಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ವಲಸೆ ಹೋಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರಕಾರವನ್ನು ಕೋರಿಕೊಂಡಿವೆ. ಲಾಕ್‌ಡೌನ್ ಸಮಯದಲ್ಲಿ ವಲಸಿಗರು ಆರೋಗ್ಯಕ್ಕೆ ಅಪಾಯ ಒಡ್ಡಿಕೊಳ್ಳುವ ಬಗ್ಗೆ ಪ್ರಧಾನಿ ಹಾಗೂ ಗೃಹಮಂತ್ರಿ  ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಿಗೆ ಈ ಪತ್ರವನ್ನು ಕಳುಹಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಅವರನ್ನು ಕರೆದು ಯಾವುದೇ ವಲಸೆಗಳಿಗೆ ಅವಕಾಶ ನೀಡಬಾರದು ಎಂಬ ಸ್ಪಷ್ಟ ಸೂಚನೆಗಳನ್ನು ನೀಡಿದ ನಂತರ ಭಾನುವಾರ ಸಂಜೆ ಈ ಪತ್ರವನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್‌ ಷಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರೊಂದಿಗೆ ಈ ಕುರಿತು ಈ ಹಿಂದೆ ಮಾತನಾಡಿದ್ದರು ಎಂದು ತಿಳಿದುಬಂದಿದೆ.

ವಲಸಿಗರನ್ನು ಯುಪಿ ಗಡಿಯವರೆಗೆ ತಲುಪಿಸಲು ಡಿಟಿಸಿ ಬಸ್ಸುಗಳನ್ನು ಬಳಸಲು ಅನುಮತಿಸಿದ ದೆಹಲಿ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ದೆಹಲಿ ಮುಖ್ಯ ಕಾರ್ಯದರ್ಶಿಗೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಲಾಕ್ ಡೌನ್ ಜಾರಿಗೊಳಿಸುವಲ್ಲಿನ ವಿಫಲತೆಗಳಿಗಾಗಿ ಅಮಾನತುಗೊಳಿಸಬೇಕೆಂದು ಹೇಳಿದ್ದಾರೆ.

ದೆಹಲಿಯಿಂದ ನಿರ್ಗಮಿಸಿದ ಎಲ್ಲಾ ವಲಸಿಗರನ್ನು ಹದಿನಾಲ್ಕು ದಿನಗಳ ಕಾಲ ಸಂಪರ್ಕ ತಡೆಯಲ್ಲಿರಿಸುವಂತೆ ರಾಜ್ಯಸರಕಾರಗಳಿಗೆ ಕೇಂದ್ರ ಆದೇಶ ನೀಡಲು ಒತ್ತಾಯಿಸಲಾಗಿದೆ.

“ಲಾಕ್‌ಡೌನ್ ಅನ್ನು ಕಾರ್ಯಗತಗೊಳಿಸಲು ದೆಹಲಿ ಸರ್ಕಾರವು ಅಗತ್ಯವಿರುವ ಎಲ್ಲಾ ಅಧಿಕಾರಗಳನ್ನು ಹೊಂದಿದೆ” ಎಂದು ಅಧಿಕಾರಿ ಹೇಳಿದ್ದಾರೆ. ಕೇಜ್ರಿವಾಲ್ ಸರ್ಕಾರದ ಅಧಿಕಾರಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವು ರಾಷ್ಟ್ರೀಯ ರಾಜಧಾನಿಯಲ್ಲಿ ವ್ಯವಹಾರಗಳನ್ನು ನಡೆಸಲು ಹಾಗೂ ಅಧಿಕಾರ ವಿತರಣೆಯ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ದೀರ್ಘಕಾಲದವರೆಗೆ ನಡೆದ ಸಂಘರ್ಷವನ್ನು ಇದು ಸೂಚಿಸುತ್ತದೆ.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ದೆಹಲಿ ಸರ್ಕಾರವನ್ನು ವಲಸೆ ಕಾರ್ಮಿಕರನ್ನು ಮಾನವೀಯ ರೀತಿಯಲ್ಲಿ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ ಅಥವಾ ಸರ್ಕಾರವು ನಡೆಸುವ ಆಶ್ರಯ ಮನೆಗಳಿಗೆ ತೆರಳಲು ಅಥವಾ ಅಲ್ಲಿಗೆ ಹೋಗಲು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ರಾಜ್ಯವು ಒದಗಿಸುವಂತೆ ಕೇಳಿಕೊಂಡಿದ್ದಾರೆ.

ಲಾಕ್‌ಡೌನ್ ಮತ್ತು ಕೆಲಸದ ದಿನಗಳ ನಷ್ಟದ ಕಾರಣದಿಂದಾಗಿ ಉದ್ಯೋಗದಾತರು ಕಾರ್ಮಿಕರಿಗೆ ತಮ್ಮ ಬಾಕಿಗಳನ್ನು ಯಾವುದೇ ಕಡಿತವಿಲ್ಲದೆ ಪಾವತಿಸಿದ್ದಾರೆನ್ನುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆಗಳನ್ನು ಬೈಜಾಲ್ ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...