Homeಮುಖಪುಟಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

- Advertisement -
- Advertisement -

ಉತ್ತರ ಪ್ರದೇಶಕ್ಕೆ ಹಿಂತಿರುಗಿರುವ ವಲಸಿಗ ಕಾರ್ಮಿಕರ ಮೇಲೆ “ಸೋಂಕುನಿವಾರಕ” ಸಿಂಪಡಿಸುತ್ತಿರುವ ಆಘಾತಕಾರಿ ವೀಡಿಯೋವೊಂದು ಹೊರಬಿದ್ದಿದೆ.

ಈ ವೀಡಿಯೊವನ್ನು ಬರೇಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಲಕ್ನೋದಿಂದ ಸುಮಾರು 270 ಕಿ.ಮೀ. ದೂರದಿಂದ ವಲಸೆ  ಹೊರಟವರ ತಂಡಕ್ಕೆ ವಿಶೇಷ ಬಸ್‌ಗಳನ್ನು ವ್ಯವಸ್ಥೆಗೊಳಿಸಿದ ನಂತರ ವಾರಾಂತ್ಯದಲ್ಲಿ ಯುಪಿಗೆ ಮರಳಿದ್ದಾರೆ. ಸೋಂಕುನಿವಾರಕವನ್ನು ಹಾಕುತ್ತಿರುವ ವಿಡಿಯೋದಲ್ಲಿ ಕೆಲವು ಪೊಲೀಸರು ಇದ್ದಾರೆ. ವಿಡಿಯೊ ಕ್ಲಿಪ್‌ನಲ್ಲಿ ಒಬ್ಬ ಮನುಷ್ಯ “ನಿಮ್ಮ ಕಣ್ಣುಗಳನ್ನು ಹಾಗೂ ಮಕ್ಕಳ ಕಣ್ಣುಗಳನ್ನು ಸಹ ಮುಚ್ಚಿ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೊ ಕ್ಲಿಪ್ ಜಿಲ್ಲಾಡಳಿತದ ಟೀಕೆಗೆ ಕಾರಣವಾದ ನಂತರ, ಅಧಿಕಾರಿಯೊಬ್ಬರು “ವಲಸಿಗರಿಗೆ ಕ್ಲೋರಿನ್ ಮತ್ತು ನೀರಿನ ಮಿಶ್ರಣವನ್ನು ಸಿಂಪಡಿಸಲಾಗಿತ್ತು … ಯಾವುದೇ ರಾಸಾಯನಿಕ ದ್ರಾವಣವನ್ನು ಬಳಸಲಾಗಿಲ್ಲ. ನಾವು ಅವರ ಕಣ್ಣುಗಳನ್ನು ಮುಚ್ಚಿಡಲು ಕೇಳಿದೆವು” ಎಂದು ಹೇಳಿದ್ದಾರಲ್ಲದೆ, “ಇದರಿಂದಾಗಿ ನಾವು ಅಮಾನವೀಯರೆಂದು ಅರ್ಥವಲ್ಲ … ಎಲ್ಲರನ್ನೂ ಸ್ವಚ್ಛಗೊಳಿಸುವುದು ಮುಖ್ಯವಾಗಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿದ್ದರಿಂದ ಜನರ ಸಂಖ್ಯೆ ಭಾರಿ ವಿಪರೀತವಾಗಿದೆ. ಆದ್ದರಿಂದ ನಮಗೆ ಉತ್ತಮವೆನಿಸಿದ್ದನ್ನು ನಾವು ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಕ್ಲಿಪ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾಧಿಕಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಮುಖ್ಯಮಂತ್ರಿಗಳ ಕಚೇರಿಯ ಮೇಲ್ವಿಚಾರಣೆಯಲ್ಲಿ, ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಸಂಸ್ಥೆ ಮತ್ತು ಅಗ್ನಿಶಾಮಕ ದಳದ ತಂಡವನ್ನು ಬಸ್ಸುಗಳನ್ನು ಸ್ವಚ್ಛಗೊಳಿಸಲು ಕೇಳಲಾಯಿತು … ಆದರೆ ಅವರು ಹೆಚ್ಚಿನ ಜನವಿದ್ದ ಕಾರಣ ಇದನ್ನು ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು -ಬರೆದಿದ್ದಾರೆ.

ಬರೇಲಿಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ “ಸೋಂಕುನಿವಾರಕಗಳಲ್ಲಿ ರಾಸಾಯನಿಕಗಳಿವೆ. ಇದನ್ನು ಮನುಷ್ಯರ ಮೇಲೆ ಬಳಸಬಾರದು. ಕಣ್ಣುಗಳ ಸಂಪರ್ಕಕ್ಕೆ ಬರಬಾರದು. ಈ ವಿಡಿಯೋವನ್ನು ತನಿಖೆ ಮಾಡಲಾಗುತ್ತಿದೆ. ಹಿರಿಯರಿಂದ ವರದಿಯನ್ನು ಕೋರಲಾಗಿದೆ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ವಿಡಿಯೊ ಕ್ಲಿಪ್ ಬಗ್ಗೆ ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದು, ಈ ಕ್ರಮವನ್ನು “ಅಮಾನವೀಯ” ಎಂದು ಕರೆದಿದ್ದಾರೆ. “ನಾನು ಯುಪಿ ಸರ್ಕಾರಕ್ಕೆ ಮನವಿ ಮಾಡುತ್ತೇನೆ … ಈ ಬಿಕ್ಕಟ್ಟಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ದಯವಿಟ್ಟು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗಬೇಡಿ. ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕಗಳನ್ನು ಸಿಂಪಡಿಸಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ … ಬದಲಿಗೆ ಇದು ಅವರ ಆರೋಗ್ಯಕ್ಕೆ ಹಾನಿ ಮಾಡುತ್ತದೆ “ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ “ಈ ಕಠಿಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ, ದೇಶಾದ್ಯಂತ ಅನ್ಯಾಯದ ಬಗ್ಗೆ ಹಲವಾರು ಚಿತ್ರಗಳು ಹೊರಬಂದಿವೆ … ಆದರೆ ಬರೇಲಿಯಲ್ಲಿ ವಲಸೆ ಬಂದವರ ಮೇಲೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸಂಪೂರ್ಣ ಕ್ರೌರ್ಯಕ್ಕೆ ಒಂದು ಉದಾಹರಣೆಯಾಗಿದೆ, ಅನ್ಯಾಯ. ಸರ್ಕಾರ ಕೂಡಲೇ ಗಮನ ಹರಿಸಬೇಕು” ಎಂದು ಹರಿಹಾಯ್ದಿದ್ದಾರೆ.

ಕೊರೊನ ವೈರಸ್ ವಿರುದ್ಧ ಹೋರಾಡಲು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲದೆ ದೇಶದಲ್ಲಿ 1,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ, ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ.

ಹಲವರು ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.  ನಿನ್ನೆ ದೆಹಲಿಯಿಂದ 200 ಕಿ.ಮೀ ನಡೆದು 38 ವರ್ಷದ ಯುವಕ ಯುಪಿ ಹೆದ್ದಾರಿಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...