Homeಮುಖಪುಟಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

ಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

- Advertisement -
- Advertisement -

ದೇಶದಲ್ಲಿ ಕೊರೋನಾ ಸೃಷ್ಟಿಸಿರುವ ಆತಂಕವನ್ನು ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಲಾಕ್‍ಡೌನ್‍ನಿಂದ ಹಿರಿಯ ನಾಗರೀಕರು, ಕೂಲಿ ಕಾರ್ಮಿಕರು ಹಾಗೂ ಹಮಾಲಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಸೂಕ್ತ ನೆರವು ಕಲ್ಪಿಸಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಒತ್ತಾಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಹಮಾಲಿಗಳು ಸಂಕಷ್ಟದಲ್ಲಿದ್ದಾರೆ. ಅವರ ಸಂಕಟವನ್ನು ನಿವಾರಿಸುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಆಸ್ಪತ್ರೆ ಸಿಬ್ಬಂದಿಗೆ ವಿಮೆ ಹಾಗೂ ಸುರಕ್ಷ ಸಾಧನ ನೀಡಬೇಕು ಎಂದು ಆಗ್ರಹಿಸಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಮಹೇಶ್ ಮಾತನಾಡಿ ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅವಶ್ಯಕತೆ ಇದೆ, ಆದರೆ ಮಾಸ್ಕ್ ಸಿಗದಿದ್ದರೆ ಬಟ್ಟೆ ಬಳಸಬೇಕು, ರೋಗ ಹರಡದಂತೆ ಸಹಕರಿಸಬೇಕು ಎಂದು ತಿಳಿಸಿದರು.

ಖಾಸಗಿ ಕ್ಲಿನಿಕ್‍ಗಳ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ, ಖಾಸಗಿ ಕ್ಲಿನಿಕ್ ಪ್ರಪಂಚದಲ್ಲೆಡೆ ಸ್ಥಗಿತಗೊಳಿಸಲಾಗಿದೆ. ವೈದ್ಯರಿಗೆ ಸೋಂಕು ತಗುಲಿದರೆ ಕಷ್ಟವಾಗಲಿದೆ, ಇಪ್ಪತ್ತು ಲಕ್ಷ ಜನರಿಗೆ ಒಂದು ಸಾವಿರ ವೈದ್ಯರಿದ್ದು, ಟೆಲಿ ಮೆಡಿಸನ್ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದ ಅವರು, ಜನರಿಗೆ ತೊಂದರೆಯಾಗಬಾರದು ಎಂದು ಕ್ಲಿನಿಕ್ ಮುಚ್ಚುವ ನಿರ್ಧಾರ ಮಾಡಲಾಗಿದೆ ಎಂದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಜನರು ಭೀತಿಯಿಂದ ಹೊರಬರುವಂತೆ ನೋಡಿಕೊಳ್ಳಬೇಕು. ಕಾಯಿಲೆಯು ವೈಜ್ಞಾನಿಕವಾಗಿ ಗುಣವಾಗುತ್ತದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಆದರೆ ಜನರಲ್ಲಿ ವಿಶ್ವಾಸ ತುಂಬಬೇಕಾಗಿರುವ ಜನಪ್ರತಿನಿಧಿಗಳು ಮತ್ತು ವೈದ್ಯರು ಅಡಗುತಾಣಗಳಲ್ಲಿ ಹುದುಗಿಕೊಂಡಿದ್ದಾರೆ. ಅವರು ಹೊರಬಂದು ಜನರಲ್ಲಿ ಆತ್ಮವಿಶ್ವಾಸ ತುಂಬಿದರೆ ಜನರು ಭಯದಿಂದ ಹೊರಬರಲು ಸಾಧ್ಯ ಎಂದು ಸಲಹೆ ಮಾಡಿದರು.

ಜಿಲ್ಲಾಡಳಿತ ಜನರ ಅಗತ್ಯಗಳೇನೆಂಬುದನ್ನು ಕಂಡುಕೊಳ್ಳಬೇಕು. ಈ ಮೂಲಕ ವಿಕೇಂದ್ರೀಕರಣದ ನೀರು, ಆಹಾರ  ಮತ್ತು ಔಷಧಿಯಂತಹ ಅಗತ್ಯವಸ್ತುಗಳನ್ನು ವಿತರಣೆ ಮಾಡಿದರೆ ಜನರು ಗುಂಪುಗೂಡುವುದು ತಪ್ಪಿಸಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬಹುದು. ಕೊರೊನ ಸೋಂಕನ್ನು ನಿಯಂತ್ರಿಸಬಹುದು. ಎಂದು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಕೊರೋನಾದಿಂದ ಬೀಡಿ ಕಾರ್ಮಿಕ ಉದ್ಯಮ ಸಂಕಷ್ಟದಲ್ಲಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅವರೇ ಸುರಕ್ಷಿತವಲ್ಲ. ಹಾಗಾಗಿ ಇಲಾಖೆ ಮೂಲಕ ಗ್ರಾಮಮಟ್ಟದಲ್ಲಿ ಹೊರಗಿನಿಂದ ಬಂದವರು ಯಾರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ, ದುಡಿಯುವ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ಜನರು ಮನೆಯಿಂದ ಹೊರ ಬಾರದಂತೆ ಅಗತ್ಯವಾದ ಆಹಾರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ರೆಡ್‍ಕ್ರಾಸ್ ಸೊಸೈಟಿಯ ಚಂದ್ರ, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ,   ಟೂಡಾ ಮಾಜಿ ಅಧ್ಯಕ್ಷ ರೆಡ್ಡಿಚಿನ್ನಯಲ್ಲಪ್ಪ, ಗಾಂಧಿವಾದಿ ಎನ್.ಬಸವಯ್ಯ,    ರೈತ ಸಂಘದ ಜಿಲ್ಲಾಧ್ಯಕ್ಷ  ಗೋವಿಂದರಾಜು, ಮುಖಂಡ ಬೆಳ್ಳಿಲೊಕೇಶ್, ಸಿದ್ಧಗಂಗಾ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...