Homeಕರ್ನಾಟಕಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಸ್ವಯಂಪ್ರೇರಣೆಯಿಂದ ಸರ್ಕಾರದ ಸಹಾಯವಾಣಿಯನ್ನು ಪ್ರಚಾರ ಮಾಡಿದ ನಾನುಗೌರಿ.ಕಾಂಗೆ ಆಘಾತ ಕಾದಿತ್ತು.

- Advertisement -
- Advertisement -

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ನಾನುಗೌರಿ.ಕಾಂ ಸರ್ಕಾರವನ್ನು ಪ್ರಶ್ನೆ ಮಾಡುವುದಷ್ಟೇ ಮಾಡಬಾರದು ಎಂದು ಭಾವಿಸಿದೆ. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆಗೂ ನಿಂತು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.  ಜನರಿಗೆ ನೆರವು ಒದಗಿಸುತ್ತಿರುವ ಹಲವು ಸಂಸ್ಥೆಗಳಿಗೂ ಮತ್ತು ಸಾಮಾನ್ಯ ಬಡಜನರಿಗೂ ನಡುವೆ ಸೇತುವೆಯಂತೆ ಕೆಲಸ ಮಾಡಲು ಪ್ರಯತ್ನ ನಡೆಸಿದೆ. ಆದರೆ, ಅದೇ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ದೀರ್ಘ ಕಾಲ ನೆರವು ಸಿಗಬೇಕೆಂದರೆ ಸರ್ಕಾರವೇ ಕೆಲಸ ಮಾಡಬೇಕಾಗುತ್ತದೆ.

ಆ ಹಿನ್ನೆಲೆಯಲ್ಲಿ ನಾನುಗೌರಿ.ಕಾಂನಿಂದ ಸರ್ಕಾರದ ಸಹಾಯವಾಣಿ 155214ಗೆ ಕರೆ ಮಾಡಿ ಅದು ಕೆಲಸ ಮಾಡುತ್ತಿದೆಯೇ  ಎಂದು ಪರಿಶೀಲಿಸಲಾಯಿತು ಮತ್ತು ಫೋನ್‌ ಕರೆ ಸ್ವೀಕರಿಸಿದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಆ ನಂಬರ್‌ ಅನ್ನು ಹಾಕಿ ಪೋಸ್ಟರ್‌ ಮಾಡಿ ಸಾಮಾನ್ಯ ಜನರು ಮತ್ತು ಸ್ವಯಂಸೇವಕರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಜೊತೆಗೆ ಉತ್ತರಹಳ್ಳಿಯ ಅಂಬೇಡ್ಕರ್‌ ನಗರದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಅಗತ್ಯವಿದ್ದ ನೆರವಿಗಾಗಿ ಪ್ರಯತ್ನ ಮಾಡುತ್ತಿದ್ದ ಸ್ಥಳೀಯರಿಗೂ ಈ ಹೆಲ್ಪ್‌ಲೈನ್‌ ನಂಬರ್‌ ನೀಡಿ ಸಂಪರ್ಕಿಸಲು ಹೇಳಲಾಯಿತು. ಅವರ ಅನುಭವವು ನಮ್ಮಲ್ಲಿ ನಿರಾಶೆಯನ್ನು ಮೂಡಿಸಿತು.

ಉತ್ತರಹಳ್ಳಿಯ ಆಸುಪಾಸಿನಲ್ಲೇ ವಾಸಿಸುವ ಬರಹಗಾರ, ಸಾಮಾಜಿಕ ಚಿಂತಕ ಶ್ರೀಪಾದ್‌ ಅವರ ಅನುಭವವು ಕೆಳಕಂಡಂತಿದೆ.

ದಿನಾಂಕ : 29.3.2020 ರಂದು 155214 ಸಹಾಯವಾಣಿಗೆ ಕರೆ ಮಾಡಿ ಉತ್ತರಹಳ್ಳಿಯ ಅಂಬೇಡ್ಕರ್ ನಗರದ ಸಾವಿತ್ರಿ ಬಾ ಫುಲೆ ಕಾಲನಿ ಸ್ಲಂಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅನಾಥರಾಗಿವೆ ಮತ್ತು ಅವರಿಗೆ ತುರ್ತಾಗಿ ಆಹಾರದ ಪೂರೈಕೆ ಮಾಡಬೇಕು ಎಂದು ಮನವಿ ಸಲ್ಲಿಸಿಲಾಯಿತು. ಆ ಸಹಾಯವಾಣಿಯವರೂ ನಮ್ಮ ಕೋರಿಕೆಗೆ ಪ್ರತಿಕ್ರಿಯಿಸಿ ಸಂಜೆಯ ಒಳಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದರು. ಆದರೆ ರಾತ್ರಿಯವರೆಗೂ ಯಾವುದೇ ಸಹಾಯ ದೊರಕಲಿಲ್ಲ.

ನಂತರ ಪರಿಚಯದ ಸರಕಾರಿ ಅಧಿಕಾರಿಯೊಬ್ಬರಿಗೆ ಈ ಕುರಿತು ಗಮನ ಸೆಳೆಯಲಾಯಿತು. ಅವರೂ ಸಹ ಭರವಸೆ ನೀಡಿದರು.

ಇದನ್ನೂ ಓದಿ: ಊರಿಗೆ ಬಂದ ವಲಸೆ ಕಾರ್ಮಿಕರಿಗೆ ಅಲ್ಲೂ ಅವಮಾನ

ದಿನಾಂಕ 30.3.2020ರಂದು ಮರಳಿ ವಿಚಾರಿಸಲಾಗಿ ಇಲ್ಲಿಯವರೆಗೂ (ಸಂಜೆ 6.30) ಯಾವುದೇ ಬಗೆಯ ಪರಿಹಾರ ದೊರಕಿಲ್ಲ. ಅಲ್ಲಿನ ಕುಟುಂಬಗಳು ಆಹಾರ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ. ದಾನಿಗಳ ಮೂಲಕ ತಾತ್ಕಾಲಿಕವಾಗಿ ಸಣ್ಣ ಪ್ರಮಾಣದ ದಿನಸಿ ವಸ್ತುಗಳನ್ನು ಕೊಡಲಾಗಿದೆ. ಆದರೆ ಅದು ಸಾಕಾಗುವುದಿಲ್ಲ.

155214 ಸಹಾಯವಾಣಿ ಹೊಣೆ ಹೊತ್ತ ಬಿಬಿಎಂಪಿ ತುರ್ತು ಪರಿಸ್ಥಿತಿಯಂತಹ ಈ ದಿನಗಳಲ್ಲಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಬೇಕು. ಆದರೆ ಆ ರೀತಿ ಮಾಡುತ್ತಿಲ್ಲ. ಇವರನ್ನು ಫಾಲೋ ಅಪ್ ಅಪ್ ಮಾಡುವುದೆ ಒಂದು ಕೆಲಸವಾದರೆ ಅದು ಕಷ್ಟದ ಕೆಲಸ.

ಸಾರ್ವಜನಿಕವಾಗಿ ಹೊಣೆಗಾರಿಕೆಯನ್ನು ನಿಭಾಯಿಸಲು ಕರಾರುವಕ್ಕಾದ ಕಾರ್ಯಯೋಜನೆ ಮತ್ತು ಪ್ರತಿಕ್ರಿಯೆ ತುಂಬಾ ಅವಶ್ಯಕ. ಆದರೆ ಈ ಉತ್ತರ ಹಳ್ಳಿ ಸ್ಲಂ ಗಳ ವಿಷಯದಲ್ಲಿ ಮೇಲೆ ತಿಳಿಸಿದ ಸಹಾಯವಾಣಿಯಿಂದ ತುರ್ತು ಸಹಾಯ ದೊರಕಿಲ್ಲ.

ಇದನ್ನೂ ಓದಿ: ಕೊರೊನಾ ವೈರಸ್‌ ವಿರುದ್ಧ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರ್ಕಾರ

ಇನ್ನೊಂದು ಉದಾಹರಣೆ ಈ ರೀತಿ ಇದೆ. ಕೆ.ಆರ್‌.ಪುರದಾಚೆಗಿನ ನಲ್ಲಿ ಸುಮಾರು 150ರಿಂದ 200 ಜನ ವಲಸೆ ಕಾರ್ಮಿಕರಿದ್ದು ನಾಳೆ ಅವರಲ್ಲಿರುವ ಆಹಾರ ಪದಾರ್ಥಗಳು ಕೊನೆಯಾಗಲಿದ್ದು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದರು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ಮೂಲಕ ಅವರು ನಾನುಗೌರಿ.ಕಾಂಅನ್ನು ಸಂಪರ್ಕಿಸಿದರು. ಅವರಿಗೆ ಸದರಿ ಹೆಲ್ಪ್‌ಲೈನ್‌ ನಂಬರ್‌ಅನ್ನು ಸಂಪರ್ಕಿಸಲು ತಿಳಿಸಲಾಯಿತು. ಸುಮಾರು 20 ಸಾರಿ ಕರೆ ಮಾಡಿದರೂ ಆ ನಂಬರ್‌ಅನ್ನು ಯಾರೂ ಸ್ವೀಕರಿಸಲಿಲ್ಲವೆಂದು ಆ ವಲಸೆ ಕಾರ್ಮಿಕರಲ್ಲೊಬ್ಬರಾದ ಕಿಶನ್‌ (ಹೆಸರು ಬದಲಿಸಲಾಗಿದೆ) ತಿಳಿಸಿದರು.

ನಾನುಗೌರಿ.ಕಾಂ ಕಳಿಸಿದ ಪೋಸ್ಟರ್‌ಅನ್ನು ಷೇರ್‌ ಮಾಡಿದ ವಿಜಯ್‌ಕುಮಾರ್‌ ಸೀತಪ್ಪ ಅವರ ಸ್ನೇಹಿತರೊಬ್ಬರು ಸದರಿ ನಂಬರ್‌ಗೆ ಕರೆ ಮಾಡಿದರೆ ಅವರಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂತೆಂದು ತಿಳಿಸಿದ್ದಾರೆ.

ಹೀಗಾದಲ್ಲಿ ವಲಸೆ ಕಾರ್ಮಿಕರ ಗತಿಯೇನು? ನೂರಾರು ಕಿ.ಮೀ ನಡೆದಾದರೂ ಸರಿ, ನಮ್ಮೂರಿನಲ್ಲಿ ಇದ್ದರೆ ಕ್ಷೇಮ ಎಂದು ಅವರು ಹೊರಡುವುದು ಸಹಜ ತಾನೇ? ಈ ಪ್ರಶ್ನೆಗಳಿಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಅಧಿಕಾರಿಗಳು ನೆರವು ನೀಡುವುದಾದಲ್ಲಿ ಮೇಲಿನ ಎಲ್ಲಾ ವಿವರಗಳನ್ನೂ (ಹೆಸರುಗಳು, ಫೋನ್‌ ನಂಬರ್‌ ಸಮೇತ) ನೀಡುತ್ತೇವೆ ಮತ್ತು ಸರ್ಕಾರದ ಸಕಾರಾತ್ಮಕ ಕೆಲಸವನ್ನು ಮತ್ತಷ್ಟು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತೇವೆ.

ಸಂಬಂಧಿಸಿದ ಅಧಿಕಾರಿಯನ್ನು ಉತ್ತರಹಳ್ಳಿಯಲ್ಲಿ ಸಂಪರ್ಕ ಮಾಡಿದರೂ ಪರಿಹಾರ ಸಿಗದೇ ಇದ್ದುದರಿಂದ ಇದನ್ನು ವರದಿ ಮಾಡುವ ಅಗತ್ಯವಿದೆಯೆಂದು ಭಾವಿಸಿ ಈ ವರದಿ ಬರೆಯಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಉದ್ದೇಶದಿಂದ ಈ ವರದಿಯನ್ನು ಷೇರ್‌ ಮಾಡಬೇಕೆಂದು ಕೋರುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...