Homeಮುಖಪುಟಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಇದು ಯಾರೋ ಕೆಲವು ಪೊಲೀಸರ ಅಚಾತುರ್ಯವಲ್ಲ : ಬದಲಾಗಬೇಕಿರುವುದು ಇಡೀ ನಮ್ಮ ಪೊಲೀಸ್‌ ವ್ಯವಸ್ಥೆ

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.

- Advertisement -
- Advertisement -

ಭಾರತದ ಪೊಲೀಸರಿಗೆ ಈಗ ಒದಗಿಬಂದಿರುವ ಸವಾಲು ಭಿನ್ನವಾದದ್ದು. ಕೋಮುಗಲಭೆ, ರಾಜಕೀಯ ಗಲಭೆ, ಸಮುದಾಯ ಕೇಂದ್ರಿತ ದಾಳಿಗಳು, ಗ್ಯಾಂಗ್ ವಾರ್, ಎಲ್ಲಾ ಬಗೆಯ ಭಯೊತ್ಪಾದಕರ ದಾಳಿ, ದೇಶದ ಆಂತರಿಕವಾಗಿ ಕಾನೂನು- ಸುವ್ಯವಸ್ಥೆ ಗೆ ಧಕ್ಕೆ ಬಂದಾಗ ಅವುಗಳನ್ನು ನಿಭಾಯಿಸುವ ಕ್ಷಮತೆ ಮತ್ತು ಸಾಮರ್ಥ್ಯ ಪೊಲೀಸರಲ್ಲಿದೆ.

ಆದರೆ ಹೀಗಿನ ಪರಿಸ್ಥಿತಿ ತುಂಬಾ ಭಿನ್ನವಾದದ್ದು. ಕೊರೊನಾ ಹಿನ್ನಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪೊಲೀಸರು ಬೇರೆ ತರವಾದ ಮನೋಸ್ಥಿತಿಯನ್ನೆ ಹೊಂದಿರಬೇಕಾಗಿದೆ. ಆದರೆ ಅವರಿಗೆ ಇದುವರೆಗೂ ರೂಢಿಸಿರುವ ಮನೋಸ್ಥಿತಿಯಿಂದ ಹೊರಗೆಳೆಯುವುದು ಕಷ್ಡದ ಕೆಲಸ. ಹೊಡಿ. ಬಡಿ, ಶೂಟ್ ಮಾಡು ಇವೇ ಅವರ ಕಾರ್ಯಕ್ಷಮತೆಯ ಪಾಠಗಳಾಗಿರುವಾಗ ಇದಕ್ಕಿಂತ ಭಿನ್ನವಾಗಿ ವರ್ತಿಸುವುದು ಅಷ್ಟು ಸುಲಭವಲ್ಲ. ಬಹಳಷ್ಟು ಪೊಲೀಸರು ಸಂದರ್ಭಾನುಸಾರವಾಗಿ ಮಾನವೀಯತೆಯನ್ನು ಮೆರೆದ ಉದಾಹರಣೆಗಳಿವೆ. ಆದರೆ ಪೊಲೀಸರು ಮಾನವ ಹಕ್ಕುಗಳನ್ನು ಹತ್ತಿಕ್ಕಿದ್ದೆ ಹೆಚ್ಚು ಎಂಬ ವರದಿಗಳಿವೆ.

ಲಾಕ್‌ಡೌನ್‌ನ ಈ ಹೊತ್ತಿನಲ್ಲಿ ಪೊಲೀಸರು ಸಮುದಾಯದ ಸ್ನೇಹಿತರಂತೆ ವರ್ತಿಸಬೇಕಾಗಿದೆ. ಜನರ ಹಿತದ ದೃಷ್ಟಿಯಲ್ಲಿ ಸರ್ಕಾರ ಜಾರಿಗೆ ತಂದ ನಿಯಮಗಳನ್ನು ಪಾಲಿಸುವುದು ಜನರ ಕರ್ತವ್ಯ. ಆದರೆ ಈ ಒತ್ತಡದಲ್ಲಿ ಜನರನ್ನು ಹೊಡೆದು ಬಡಿದು ನಿರ್ಬಂಧಿಸುವ ಸಂದರ್ಭ ಇದಲ್ಲ. ಸ್ವಾತಂತ್ರ್ಯ ನಂತರದ ಭಾರತದಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಸಂಸ್ಕೃತಿ ಬ್ರಿಟೀಷರ ಪಳೆಯುಳಿಕೆಯಂತೆ ಉಳಿದಿವೆ. ಅದು ಬದಲಾಗಿಲ್ಲ. ” socioyo police ” (ಸಾಮಾಜಿಕ ಆರಕ್ಷಕ) ಕಲ್ಪನೆಯಿಂದ ದೂರವೆ ಉಳಿದಿದೆ. ಜನಸ್ನೇಹಿ ಪೊಲೀಸ್ ಎಂಬ ಘೋಷಣೆಗಳು ಜನರಲ್ಲಿ ನಂಬಿಕೆ ಹುಟ್ಟಿಸಿಲ್ಲ. ಇದಕ್ಕೆ ಕಾರಣ ಭಾರತದ ಪೊಲೀಸ್ ವ್ಯವಸ್ಥೆ ಭಾರತದ ಸಾಮಾಜಿಕ ಸಂರಚನೆಗೆ ತಕ್ಕಂತೆ ಬದಲಾಗಿಲ್ಲ.

ಈ ಕಾರಣದಿಂದಲೆ ಪೊಲೀಸರು ಪದೇ ಪದೇ ಜನರ ತಿರಸ್ಕಾರಕ್ಕೆ ಮತ್ತು ಜನರ ಶತ್ರುವಿನಂತೆ ಕಾಣತೊಡಗುತ್ತಾರೆ. ಅಸಲಿಗೆ ಪೊಲೀಸರು ನಮ್ಮಂತೆ ಮನುಷ್ಯರು. ಇಲ್ಲಿ ಪೊಲೀಸರ ವ್ಯಕ್ತಿಯ ನೆಲೆಯಲ್ಲಿನ ದೋಷಗಳಿಗಿಂತ ವ್ಯವಸ್ಥೆ ಕಟ್ಟಿಕೊಟ್ಟಿರುವ ಲೋಪಗಳಿಗೆ ಪೊಲೀಸರೂ ಬಲಿಯಾಗುತ್ತಿದ್ದಾರೆ. ಇದು ವಿಪರ್ಯಾಸ.

ಪೊಲೀಸರೆಂದರೆ ಅವರು ರಾಜಕೀಯ ನಿರ್ಣಯಗಳ ಜಾರಿಯ ಕಾಲಾಳುಗಳು ಎಂಬ ಸ್ಥಾಪಿತ ಕಟ್ಟುಪಾಡುಗಳನ್ನು ಶಿಸ್ತು ಪಾಲನೆ ನೆಪದಲ್ಲಿ ಪೊಲೀಸ್ ಸಮುದಾಯದಲ್ಲಿ ಬಿತ್ತಲಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪ ಪೊಲೀಸರನ್ನು ಸುಲಭವಾಗಿ ಪಾರಾಗಲು ಬಿಡುವುದಿಲ್ಲ.

ಅದೇ ಶಿಕಾರಿಪುರದ ಸುಣ್ಣದಳ್ಳಿಯ ಬಡ ರೈತನೊಬ್ಬ ಪೊಲೀಸರ ಏಟಿನಿಂದ ಸತ್ತರೂ ಪೊಲೀಸರು ಸುಲಭವಾಗಿ ಪಾರಾಗಿಬಿಡುತ್ತಾರೆ.

ಈ ಎರಡೂ ಜವಾಬ್ದಾರಿಯನ್ನು ಪೊಲೀಸ್ ವ್ಯವಸ್ಥೆಯೇ ನಿರ್ವಹಿಸುತ್ತಾ ಒಂದು ‘ಸಾಮಾಜಿಕ ಅನ್ಯಾಯ’ ವನ್ನು ಪ್ರಜ್ಞಾಪೂರ್ವಕವಾಗಿಯೇ ನಡೆಸಿಬಿಡುತ್ತದೆ.

ಒಬ್ಬ ಪೊಲೀಸ್ ಪೇದೆ ಅಥವಾ ಓರ್ವ ಅಧಿಕಾರಿ ಜನಸ್ನೇಹಿ ಆಗುವುದರಿಂದ ಲಾಭವಿಲ್ಲ. ಇಡೀ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿಸುವಲ್ಲಿ ಪ್ರಯತ್ನಗಳು ಸಾಗಬೇಕಿದೆ.


ಇದನ್ನೂ ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌ 


ಅದಾದಾಗ ಪೊಲೀಸರ ಗುಂಡಿಗೆ, ಲಾಠಿ ಏಟಿಗೆ ಜನಸಾಮಾನ್ಯ, ನಿರಪರಾಧಿ, ಅಮಾಯಕ ಬಲಿಯಾಗುವುದು ತಪ್ಪುತ್ತದೆ. ಅದೇ ಕಾಲಕ್ಕೆ ಪೊಲೀಸರು ಕಟಕಟೆಯಲ್ಲಿ ನಿಲ್ಲವುದು ತಪ್ಪುತ್ತದೆ.

-(ಎನ್‌. ರವಿಕುಮಾರ್‌ ಟೆಲೆಕ್ಸ್‌ರವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...