HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...