HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...