HomeUncategorizedಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

ಏಕಾಏಕಿ ಲಾಕ್‌ಡೌನ್‌ ಘೋಷಿಸಿದ ಸರ್ಕಾರ; ದುಸ್ತರಗೊಂಡಿದೆ ’ಕಲ್ಲಂಗಡಿ’ ಬೆಳೆದ ರೈತರ ಬದುಕು

- Advertisement -
- Advertisement -

ಬೇಸಿಗೆ ಬಂತೆಂದರೆ ಕರಬೂಜ, ಕಲ್ಲಂಗಡಿ ಎಲ್ಲೆಲ್ಲೂ ಕಂಡುಬರುವುದು ಸಾಮಾನ್ಯ. ರಸ್ತೆಗಳ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡಿರುತ್ತಿದ್ದ ಕಲ್ಲಂಗಡಿ, ಕರಬೂಜ ಹಣ್ಣುಗಳು ಈ ಬಾರಿ ಕಣ್ಮರೆಯಾಗಿವೆ. ಬೇಸಿಗೆ ಬಿರುಬಿಸಿಲಿನ ಧಗೆಯಿಂದ ನಿವಾರಿಸಿಕೊಳ್ಳಲು ಜನರು ಈ ಹಣ್ಣು ತಿಂದು, ಜ್ಯೂಸ್ ಕುಡಿದು ದೇಹ ತಂಪು ಮಾಡಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಿಸಿದ ಹಿನ್ನೆಲೆಯಲ್ಲಿ ದೇಶ ಲಾಕ್‌ಡೌನ್ ಮಾಡಿದ ಮೇಲೆ ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮತ್ತು ಮಾರಾಟಗಾರರು ಹಾಕಿದ ಬಂಡವಾಳವೂ ಬರದೆ ತೀವ್ರ ನಷ್ಟ ಅನುಭವಿಸುವಂತಾಗಿದೆ.

ಮಾರುಕಟ್ಟೆಗಳು, ಪ್ರಮುಖ ರಸ್ತೆಗಳು, ಆಸ್ಪತ್ರೆಗಳು, ಕಾಲೇಜು ಮೈದಾನದ ಬಳಿ – ಹೀಗೆ ಕಲ್ಲಂಗಡಿ ಮತ್ತು ಕರಬೂಜದ ಹಣ್ಣುಗಳನ್ನು ಇಟ್ಟುಕೊಂಡು ಸಣ್ಣತುಂಡುಗಳಾಗಿ ಕೊಯ್ದು ಮಾರಾಟ ಮಾಡುತ್ತಿದ್ದರು. ಪ್ರತಿ ತುಂಡಿಗೆ 10 ರೂಪಾಯಿ ಬೆಲೆ ನಿಗದಿಪಡಿಸುತ್ತಿದ್ದರು. ಬಿಸಿಲಿನಿಂದ ಬಳಲಿ ಬಂದವರು ಕಲ್ಲಂಗಡಿ ಹಣ್ಣು ತಿಂದು ನಿರಾಳವಾಗಿ ಮನೆಗೆ ತೆರಳುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿ ಈ ಹಣ್ಣುಗಳ ಜ್ಯೂಸ್  ಕುಡಿದು ಬಳಲಿಕೆಯಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರು. ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಮೊದಲು ಮಾರಾಟಗಾರರು ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿದರು. ಕೆಜಿ ಗೆ 20 ರಿಂದ 25 ರೂಪಾಯಿಯಂತೆ ಒಂದು ಕಲ್ಲಂಗಡಿ ಹಣ್ಣಿಗೆ 200 ರೂಪಾಯಿ ದೊರೆಯುತ್ತಿತ್ತು. ಭಾರತವೇ ಲಾಕ್‌ಡೌನ್ ಆದ ಮೇಲೆ ಇವರ ಬದುಕು ದುಸ್ಥರವಾಗಿದೆ.

ನಾನುಗೌರಿ.ಕಾಮ್ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ “ಕಲ್ಲಂಗಡಿ ಅಷ್ಟೇ ಅಲ್ಲ, ಅಲ್ಪಾವಧಿ ಬೆಳೆಗಳಿಗೆ ಮಾರುಕಟ್ಟೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಯ ಹಾದಿ ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಬಹುಸಂಖ್ಯಾತರು ಅವರ ಬಗ್ಗೆ ಆಡಳಿತ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಅಲ್ಪಾವಧಿ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಸಿಗದೆ ನಷ್ಟವಾಗಿದೆ  ದೇಶದ ಯಾವುದೇ ಭಾಗದಲ್ಲಿಯೂ ಶೀತಲ ಕೇಂದ್ರಗಳಿಲ್ಲ. ಹಣ್ಣು ತರಕಾರಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿಟ್ಟು ಬೆಲೆ ಬಂದಾಗ ಮಾರಾಟ ಮಾಡಿದರೆ ರೈತರಿಗೆ ಲಾಭವಾಗುತ್ತದೆ. ಆದರೆ ಆ ಪರಿಸ್ಥಿತಿ ದೇಶದಲ್ಲಿ ಎಲ್ಲಿಯೂ ಇಲ್ಲ. ಮುಂದಾಲೋಚನೆಯಿಲ್ಲದ ರಾಜಕಾರಣಿಗಳಿಂದ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೇಳಿದರೆ ಕೊರೊನ ಕಡೆ ಕೈ ತೋರಿಸುತ್ತಾರೆ” ಎಂದು ಹೇಳಿದರು.

ಕಲ್ಲಂಗಡಿ-ಕರಬೂಜ ಬೆಳೆದ ರೈತರು ತಮ್ಮ ಬೆಳೆಗೆ ಸರಿಯಾದ ಮಾರಕಟ್ಟೆ ಲಭಿಸದೆ ಲಕ್ಷಾಂತರ ರೂ ನಷ್ಟ  ಅನುಭವಿಸಿದ್ದಾರೆ. ಕೊಳ್ಳುವವರೂ ಇಲ್ಲದೆ, ಮಾರಾಟವೂ ಆಗದೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿಗೆ ಉತ್ತಮ ಕಲ್ಲಂಗಡಿ ಬೆಳೆ ಬಂದಿತ್ತು. ಆದರೆ ಮಾರಾಟವಾಗದೆ, ಹಾಕಿದ ಬಂಡವಾಳ ಮತ್ತು ಮಾಡಿದ ಸಾಲವನ್ನು ತೀರಿಸುವುದು ಕಷ್ಟವಾಗಿದೆ. ಕಲ್ಲಂಗಡಿ ಮತ್ತು ಕರಬೂಜ ಬೆಳೆಯಲು ಸಾವಿರಾರು ರೂ. ಸಾಲ ಮಾಡಿದ್ದೆವು. ಕೊರೊನ ರೋಗದಿಂದ ಇಡೀ ಬೆಳೆಯೇ ನಾಶವಾಯಿತು . ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ “ಏಕಾಏಕಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿಕರಿಗೆ, ರೈತರಿಗೆ ಭಾರೀ ಅನ್ಯಾಯವಾಗಿದೆ. ಲಾಕ್‌ಡೌನ್ ಮಾಡುವ ಮೊದಲು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಹೀಗಾಗಿ ರೈತರು ಬೆಳೆದ ಟೊಮೋಟ, ಕಲ್ಲಂಗಡಿ ಹಣ್ಣನ್ನು ಸರ್ಕಾರವೇ ನೇರ ಖರೀದಿ ಮಾಡಬೇಕು. ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರದ ಕ್ರಮದಿಂದ ಬೆಳೆದ ಹಣ್ಣುಗಳು ತಿನ್ನಲೂ ಆಗದೆ ಮಣ್ಣು ಪಾಲಾಗುತ್ತಿವೆ. ಇದರಿಂದ ಸರ್ಕಾರ ಖರೀದಿ ಮಾಡಿ ಜನರಿಗೆ ವಿತರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಲಾಕ್‌ಡೌನ್ ಪರಿಣಾಮ ಹಣ್ಣಿಗೆ ವೈಜ್ಞಾನಿಕ ಬೆಲೆ ಮತ್ತು ಮಾರುಕಟ್ಟೆ ಸಿಗದೆ ಕಲಬುರಗಿಯಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಬೆಳೆಯಿಂದ ಒಟ್ಟಿಗೆ ಒಂದಿಷ್ಟು ಹಣವನ್ನು ರೈತರು ಮತ್ತು ಮಾರಾಟಗಾರರು ಪಡೆದು ಅದರಲ್ಲೇ ಜೀವನ ಸಾಗಿಸುತ್ತಿದ್ದರು. ಈಗ ಬೆಳೆ ಬೆಳೆದರೂ ಅದು ಹಣವಾಗಿ ಪರಿವರ್ತನೆಯಾಗುವ ಹೊತ್ತಿಗೆ ಕೊರೊನ ಬಂದು ರೈತರ ಬದುಕನ್ನೇ ನಾಶ ಮಾಡಿದೆ. ಕಲ್ಲಂಗಡಿಯೂ ಇಲ್ಲ, ಕರಬೂಜವೂ ಇಲ್ಲ, ಎಳೆನೀರು ಸಿಗುತ್ತಿಲ್ಲ. ಬೇಸಿಗೆಯ ಬೆಳೆಯಿಂದ ಸಂಪೂರ್ಣ ಕೈಸುಟ್ಟುಕೊಂಡಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...