Homeಮುಖಪುಟಮೂರನೇ ಒಂದು ಭಾಗದಷ್ಟು ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಬಹುದು: ಸುಪ್ರೀಂಗೆ ಕೇಂದ್ರದ ಉತ್ತರ

ಮೂರನೇ ಒಂದು ಭಾಗದಷ್ಟು ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಬಹುದು: ಸುಪ್ರೀಂಗೆ ಕೇಂದ್ರದ ಉತ್ತರ

ಭೀತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಕೊರೊನಾದ ನೈಜ-ಸಮಯದ ಮಾಹಿತಿಯನ್ನು ಪ್ರಸಾರ ಮಾಡಲು 24 ಗಂಟೆಗಳ ಒಳಗೆ ಪೋರ್ಟಲ್ ಸ್ಥಾಪಿಸಲು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದಾಗಿ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ತೆರಳಿರುವ 10 ಜನ ವಲಸೆ ಕಾರ್ಮಿಕರಲ್ಲಿ ಮೂವರಿಗೆ ಕೊರೊನಾ ವೈರಸ್ ಕಾಯಿಲೆ ಹರಡುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಎರಡು ಸಾರ್ವಜನಿಕ ಹಿತಾಸಕ್ತಿ ದಾವೆಗಳ (ಪಿಐಎಲ್) ವಿಚಾರಣೆಯಲ್ಲಿ ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಉತ್ತರಿಸಿದ್ದು, ಸುಮಾರು 4.14 ಕೋಟಿ ಜನರು ಕೆಲಸಕ್ಕಾಗಿ ವಲಸೆ ಬಂದಿದ್ದಾರೆ. ಆದರೆ ಕೊರೊನಾವೈರಸ್ ಲಾಕ್‌ಡೌನ್‌  ಕಾರಣಕ್ಕಾಗಿ ಹಿಮ್ಮುಖ ವಲಸೆ ನಡೆಯುತ್ತಿದೆ ಎಂದಿದ್ದಾರೆ.

ಆಶ್ರಯ ಮನೆಗಳಲ್ಲಿ ಇರಿಸಲಾಗಿರುವ ವಲಸೆ ಕಾರ್ಮಿಕರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶನ ನೀಡಿತು. ವಲಸಿಗರ ಭೀತಿಯನ್ನು ಹೋಗಲಾಡಿಸಲು ಸಹಾಯ ಮಾಡಲು ಎಲ್ಲಾ ಧರ್ಮಗಳ ತರಬೇತಿ ಪಡೆದ ಸಲಹೆಗಾರರು ಮತ್ತು ಧಾರ್ಮಿಕ ಮುಖಂಡರ ಸಹಾಯವನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಸೂಚಿಸಿದೆ.

“ಭೀತಿಯು ವೈರಸ್‌ಗಿಂತ ಹೆಚ್ಚಿನ ಜನರನ್ನು ನಾಶಮಾಡುತ್ತದೆ ಎಂದು ನಾವು ನಿಮಗೆ ತಿಳಿಸಲು ಬಯಸುತ್ತೇವೆ. ನಿಮಗೆ ಸಲಹೆಗಾರರ ​​ಅಗತ್ಯವಿದೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರ ನ್ಯಾಯಪೀಠವು ಹೇಳಿದೆ. ಅದಕ್ಕಾಗಿ ನೀವು ’ಭಜನೆ, ಕೀರ್ತನೆ ನಮಾಜ್’ ಅಥವಾ ಯಾವುದನ್ನಾದರೂ ಮಾಡಿಸುವ ಮೂಲಕ ಜನರಿಗೆ ಬಲವನ್ನು ನೀಡಬೇಕು ಎಂದು ಹೇಳಿದರು.

ಭೀತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಕೊರೊನಾದ ನೈಜ-ಸಮಯದ ಮಾಹಿತಿಯನ್ನು ಪ್ರಸಾರ ಮಾಡಲು 24 ಗಂಟೆಗಳ ಒಳಗೆ ಪೋರ್ಟಲ್ ಸ್ಥಾಪಿಸಲು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಕೊರೊನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ವಿಧಿಸಿದ ನಂತರ ಅಸಹಾಯಕರಾಗಿ ಉಳಿದಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಸಮಯದಲ್ಲಿ ಹಳ್ಳಿಗಳಲ್ಲಿ ವೈರಸ್ ಹರಡುವುದರಿಂದ ಜನರ ವಲಸೆಯನ್ನು ಈ ಸಮಯದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಮೆಹ್ತಾ ಹೇಳಿದರು.

“ನೀವು ವಲಸೆ ನಿಲ್ಲಿಸಿದ ಎಲ್ಲರನ್ನು ಆಹಾರ, ಆಶ್ರಯ, ಪೋಷಣೆ ಮತ್ತು ವೈದ್ಯಕೀಯ ನೆರವಿನ ವಿಷಯದಲ್ಲಿ ನೋಡಿಕೊಳ್ಳುವುದನ್ನು ಭರವಸೆ ನೀಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಪಿಐಎಲ್‌ಗಳ ಮೇಲಿನ ವಿಚಾರಣೆಯನ್ನು ಏಪ್ರಿಲ್ 7 ಕ್ಕೆ ಮುಂದೂಡಿದ ನ್ಯಾಯಪೀಠ, ವಲಸಿಗರ ಸಮಸ್ಯೆಯನ್ನು ತೆಗೆದುಕೊಳ್ಳದಂತೆ ಹೈಕೋರ್ಟ್‌ಗಳನ್ನು ತಡೆಯಲು ನಿರಾಕರಿಸಿದೆ. ಅವರು ಈ ಸಮಸ್ಯೆಯನ್ನು ಹೆಚ್ಚು ನಿಕಟವಾಗಿ ಮೇಲ್ವಿಚಾರಣೆ ಮಾಡಬಹುದು ಎಂದು ಕೋರ್ಟ್ ಹೇಳಿದೆ.

ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ದೇಶಾದ್ಯಂತ 21,000 ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 6.6 ಲಕ್ಷಕ್ಕೂ ಹೆಚ್ಚು ನಿರ್ಗತಿಕರು ಮತ್ತು ಕೋವಿಡ್ -19 ಲಾಕ್‌ಡೌನ್ ಕಾರಣದಿಂದಾಗಿ ಸಿಕ್ಕಿಕೊಂಡವರಿಗೆ ಆಶ್ರಯ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...