Homeಕರ್ನಾಟಕಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

- Advertisement -
- Advertisement -

ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಏಷ್ಯಾದ ಅತಿದೊಡ್ಡ ಫುಡ್ ಪಾರ್ಕ್ ರೈತರ ಉಪಯೋಗಕ್ಕೆ ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಕನಸಿನ ಫುಡ್ ಪಾರ್ಕ್ ನಿರ್ಮಾಣವಾಗಿ ಆರು ವರ್ಷ ಕಳೆದರೂ ರೈತರು ಬೆಳೆದ ಹಣ್ಣು ಹಂಪಲುಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ಯಾವ ಚಟುವಟಿಕೆಗಳು ನಡೆದ ಸೂಚನೆಗಳೇ ಸಿಕ್ಕಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಸಂಸ್ಥೆ ರೈತರ ನೆರವಿಗೆ ಧಾವಿಸುವಂತಹ ಕೆಲಸ ಮಾಡಬೇಕಿತ್ತು. ಇದು ಆಗಿಲ್ಲ ಜೊತೆಗೆ ಫುಡ್ ಪಾರ್ಕ್ ಉದ್ದೇಶವೂ ಈಡೇರಿಲ್ಲ.

ರಾಜ್ಯದ ಅರ್ಧ ಭಾಗದಷ್ಟು ಜಿಲ್ಲೆಗಳ ರೈತರು ಟಮೋಟೊ, ಸಪೋಟೊ, ಕಲ್ಲಂಗಡಿ, ಕರ್ಬೂಜ, ದ್ರಾಕ್ಷಿ ಮತ್ತು ತರಕಾರಿಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ವ್ಯವಸ್ಥೆ ಮಾಡುವುದಾಗಿ ಪ್ರಧಾನಿ ಮೋದಿ 2014ರಲ್ಲಿ ಘೋಷಿಸಿದ್ದರು. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ,  ಬಳ್ಳಾರಿ, ಶಿವಮೊಗ್ಗ ಹೀಗೆ 16 ಜಿಲ್ಲೆಗಳ ರೈತರಿಗೆ ಅನುಕೂಲ ಆಗಬೇಕಿತ್ತು. ಸಾವಿರಾರು ಟನ್ ಹಣ್ಣು ಹಂಪಲು ಮತ್ತು ತರಕಾರಿಯಲ್ಲಿ ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟು ಒಳ್ಳೆಯ ಬೆಲೆ ಸಿಕ್ಕಾಗ ರೈತರು ಮಾರಾಟ ಮಾಡಲು ಅವಕಾಶ ಕಲ್ಪಿಸುವಂತಹ ಕೆಲಸ ಮಾಡಬೇಕಿತ್ತು. ಆದರೆ ಒಂದು ಟನ್ ಹಣ್ಣನ್ನು ಕೋಲ್ಡ್ ಸ್ಟೋರ್‌ನಲ್ಲಿಟ್ಟ ಉದಾಹರಣೆಯೇ ಇಲ್ಲ.

ಬಗೆಬಗೆಯ ಸೊಪ್ಪು, ಬದನೆ, ಮೂಲಂಗಿ, ಈರೇಕಾಯಿ, ಬೆಂಡೆ, ಟಮೋಟೊ, ಕ್ಯಾರೆಟ್, ಗೋರಿಕಾಯಿ, ತೊಂಡೆಕಾಯಿ ಸೇರಿದಂತೆ ತರಿಕಾರಿಗಳನ್ನು ಇಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಕೊರೊನ ವೈರಸ್ ಹರಡಿರುವ ಸಂದರ್ಭದಲ್ಲಿ ಇವುಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟಿದ್ದರೆ ರೈತರಿಗೂ ಲಾಭವಾಗುತ್ತಿತ್ತು. ತಮಗೆ ಬೇಕಾದಾಗ ಅವುಗಳನ್ನು ಮಾರಿಕೊಳ್ಳಬಹುದಿತ್ತು. ಆದರೆ ಕೊರೊನ ಹಿನ್ನೆಲೆಯಲ್ಲಿ ಭಾರತ ಲಾಕ್‌ಡೌನ್ ಆದ ಮೇಲೆ ರೈತರು ಬೆಳೆದ ಎಲ್ಲಾ ಅಲ್ಪಾವಧಿ ಬೆಳೆಯು ಹಳ್ಳಿಗಳಲ್ಲೇ ಕೊಳೆಯುವಂತಾಗಿದೆ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರಲು ಆಗುತ್ತಿಲ್ಲ. ಮಾರಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಬಡ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಜಿಲ್ಲೆಯ ಪಾವಗಡ, ಶಿರಾ, ಮಧುಗಿರಿ ತಾಲೂಕುಗಳಲ್ಲಿ ಹೆಚ್ಚಾಗಿ ಹುಣಸೇಹಣ್ಣು ಬೆಳೆಯುತ್ತಿದ್ದು ಲಾಕ್ ಡೌನ್ ಆಗಿರುವುದರಿಂದ ಚಳ್ಳಕೆರೆ ಮತ್ತು ಹಿಂದೂಪುರ ಮಾರುಕಟ್ಟೆಗಳು ಬಂದ್ ಆಗಿವೆ. ಈಗ ಹುಣಸೇಹಣ್ಣು ಮಾರುಕಟ್ಟೆಗೆ ಹೆಚ್ಚು ಬರುವ ಕಾಲ. ಇಂತಹ ಸನ್ನಿವೇಶದಲ್ಲಿ ಮಾರುಕಟ್ಟೆ ಇಲ್ಲದೆ ಹುಣಸೇಹಣ್ಣು ಒಣಗಿ ಬೆಂಡಾಗುತ್ತಿದೆ. ಹುಣಸೇಹಣ್ಣನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವ ವ್ಯವಸ್ಥೆ ಮಾಡಿದ್ದರೆ ರೈತರು ನಿಧಾನವಾಗಿ ಮಾರಾಟ ಮಾಡಿಕೊಳ್ಳುತ್ತಿದ್ದರು. ಆದರೆ ವಸಂತನರಸಾಪುರದ ಫುಡ್ ಪಾರ್ಕ್‌‌ನಲ್ಲಿಯಾಗಲೀ ಹಿಂದೂಪುರ ಮತ್ತು ಚಳ್ಳಕೆರೆಯ ಹುಣಸೇಹಣ್ಣು ಮಾರುಕಟ್ಟೆಯಲ್ಲಾಗಲೀ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವುದಕ್ಕೆ ಅವಕಾಶವಿಲ್ಲ. ಇದರಿಂದಾಗಿ ಹುಣಸೇಹಣ್ಣು ಬೆಳೆದ ರೈತರು ಕೈಕೈ ಹಿಸುಕಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಲಾಕ್ ಡೌನ್ ಇಡೀ ರೈತ ಸಮೂಹವನ್ನು ಆಘಾತಕ್ಕೆ ಒಳಗಾಗುವಂತೆ ಮಾಡಿದೆ. ಅಲ್ಪಾವಧಿ ಮತ್ತು ದೀರ್ಘಾವಧಿ ಎರಡೂ ಬೆಳೆಗಳು ಕೈಗೆ ಬಂದಿರುವ ಹೊತ್ತಿನಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹ ಮಾಡಲು ಅವಕಾಶ ಇಲ್ಲದಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ. ಸಾಲ ಮಾಡಿ ಬೆಳೆದಿರುವ ಹಣ್ಣು, ತರಕಾರಿ ಕಣ್ಣಮುಂದೆಯೇ ಒಣಗಿ ಹೋಗುವಂಹತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರಿಂದ ನೇರ ಖರೀದಿ ಮಾಡಿ ಮಾರುಕಟ್ಟೆ ಕಲ್ಪಿಸಬೇಕು ನಗರದ ಜನರಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.


ಇದನ್ನು ಓದಿ: ತುಮಕೂರಿನ ಫುಡ್ ಪಾರ್ಕ್‌ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ತುಮಕೂರು ಫುಡ್ ಪಾರ್ಕ್‌ನಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇದ್ದಿದ್ದರೆ ರೈತರಿಗೆ ಹೆಚ್ಚು ಪ್ರಯೋಜನ ಆಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಫುಡ್‌ ಪಾರ್ಕ್ ರೈತರ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವ ಉದ್ದೇಶದಿಂದ ನಿರ್ಮಾಣವಾಗಿತ್ತೋ ಆ ಉದ್ದೇಶ ಈಡೇರಿಲ್ಲ. ನೂರಾರು ಕೋಟಿ ವೆಚ್ಚದ ಫುಡ್ ಪಾರ್ಕ್ ವ್ಯರ್ಥವಾದಂತಾಗಿದೆ. ರೈತರ ಸಹಾಯಕ್ಕಿಲ್ಲದ ಫುಡ್ ಪಾರ್ಕ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...