HomeUncategorizedಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಸಂದರ್ಭದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣಕ್ಕೆ ಬಹಳಷ್ಟು ಜನಕ್ಕೆ ಅನ್ನ, ನೀರು, ವಸತಿ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಹೊತ್ತಲ್ಲಿ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಅಮಾನವೀಯ ವರ್ತನೆ ಮಿತಿಮೀರಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಲಾಕ್‌ಡೌನ್‌ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದರು. ಇಂತಹ ಸಮಯಕ್ಕಾಗಿ ಕಾದು ಕುಳಿತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

ವಿಡಿಯೋ ನೋಡಿ.

ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

Posted by Naanu Gauri on Wednesday, April 1, 2020

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ. ಹಲವಾರು ವರ್ಷಗಳಿಂದ ತಮಗೆ ಭೂಮಿ, ವಸತಿ ಬೇಕೆಂದು ಹೋರಾಟ ಮಾಡುತ್ತಿರುವವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ತಮ್ಮ ಜೀವನಕ್ಕೆ ಗತಿಯೇನು ಎಂದು ವಾದಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ದಾಳಿಗೆ ಕಾರಣವೇನು?

ಅರಣ್ಯ ಇಲಾಖೆಯು ಪ್ರಧಾನವಾಗಿ ಈ ಜನರು ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮನೆಕಟ್ಟಲು, ಇತರ ಕೃಷಿ ಸಂಬಂಧಿ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಾರೆ.

ಆದರೆ ಆ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬೆಂಬಲವಿದೆ..

ಈ ಕುರಿತು ನಾನುಗೌರಿ.ಕಾಂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್‌ರವರನ್ನು ಮಾತನಾಡಿಸಿತು. ಅವರು “ಅರಣ್ಯ ಹಕ್ಕು ಕಾಯ್ದೆಯಲ್ಲಿ ಆದಿವಾಸಿಗಳು ಮತ್ತು ಇತರ ಪಾರಂಪರಿಕ ಅರಣ್ಯ ಹಕ್ಕುದಾರರು ಅಂತ ಇದೆ. ಅಂದರೆ ಯಾವುದಾದರೂ ಸಮುದಾಯ ಅಲ್ಲಿ ಮೂರು ತಲೆಮಾರು ವಾಸಿಸಿದ್ದರೆ ಅವರಿಗೆ ಅಲ್ಲಿ ವಾಸಿಸಲು ಹಕ್ಕು ಸಿಗುತ್ತದೆ. ಇದನ್ನು ಬಳಸಿ ಹಲವಾರು ಜನರಿಗೆ ಭೂಮಿ ಕೊಟ್ಟಿರುವ ನೂರಾರು ಉದಾಹರಣೆಗಳಿವೆ. ಕಾಗೋಡು ತಿಮ್ಮಪ್ಪ ಮತ್ತು ಡಿ.ಕೆ ಶಿವಕುಮಾರ್‌ ಈ ರೀತಿ ಹಲವರಿಗೆ ಭೂಮಿ ಕೊಡಿಸಿದ್ದಾರೆ. ಇದೇ ಮಾದರಿಯಲ್ಲಿ ಈ ಇರುಳಿಗ ಜನರಿಗೆ ಭೂಮಿ ನೀಡಬಹುದಾಗಿದೆ. ಆದರೆ ಅರಣ್ಯ ಇಲಾಖೆಯವರು ಸರಿಯಾಗಿ ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಓದಿಕೊಳ್ಳದೇ ಈ ಕೃತ್ಯ ಎಸಗುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಮೀಸಲು ಅರಣ್ಯವೇ ಆಗಿದ್ದರೂ ಸಹ ಆದಿವಾಸಿಗಳಾಗಿದ್ದರೆ ಆ ಕಾಡಿನ ಮೇಲೆ ಅವರಿಗೆ ಹಕ್ಕು ಇರುತ್ತದೆ. ಅವರ ಮರಗಳು, ವಾಸವಿದ್ದ ಮನೆಯ ಗೋಡೆ, ಅವರ ದೈವದ ದಾಖಲೆಗಳಿದ್ದರೆ ಸಾಕು. ಅವರಿಗೆ ಅಲ್ಲಿನ ಹಣ್ಣು ಮತ್ತು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರುವ ಹಕ್ಕು ಸಹ ಇದೆ. ಕಾಡಿನ ಮೇಲ್ಮೆಗೆ ಯಾವುದೇ ರೀತಿ ಬದಲಾವಣೆ ಮಾಡದೇ ಅದನ್ನು ಉಪಯೋಗಿಸುವ ಕಾನೂನಾತ್ಮಕ ಹಕ್ಕು ಇದೆ. ಆದರೆ ಅರಣ್ಯ ಅಧಿಕಾರಿಗಳು ಬಡಜನರ ವಿರುದ್ಧದ ನಿಲುವಿನಿಂದಾಗಿ ತೊಂದರೆ ಕೊಡುತ್ತಿದ್ದಾರೆ ಎಂದು ಸಿರಿಮನೆ ನಾಗರಾಜ್‌ ಆರೋಪಿಸಿದ್ದಾರೆ.

ಈಗಿನ ಅರಣ್ಯ ಇಲಾಖೆಯ ಈ ಕ್ರಮದಿಂದಾಗಿ ಅಲ್ಲಿನ ಬಡಜನರು ಬೀದಿಪಾಲಾಗಿದ್ದು ಗೋಳಾಡುತ್ತಿದ್ದಾರೆ. ಮಹಿಳೆಯರು ಮಕ್ಕಳು ಬೀದಿಗೆ ಬಿದ್ದಿದ್ದು ಹೋರಾಟಕ್ಕೆ ಅಣಿಯಾಗಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...