HomeUncategorizedಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಈ ಸಂದರ್ಭದಲ್ಲಿ ಪೂರ್ವ ತಯಾರಿ ಇಲ್ಲದ ಕಾರಣಕ್ಕೆ ಬಹಳಷ್ಟು ಜನಕ್ಕೆ ಅನ್ನ, ನೀರು, ವಸತಿ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಂತಹ ಹೊತ್ತಲ್ಲಿ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಅಮಾನವೀಯ ವರ್ತನೆ ಮಿತಿಮೀರಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಲಾಕ್‌ಡೌನ್‌ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದರು. ಇಂತಹ ಸಮಯಕ್ಕಾಗಿ ಕಾದು ಕುಳಿತಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಮುಂಜಾನೆ ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

ವಿಡಿಯೋ ನೋಡಿ.

ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬನ್ನೇರುಘಟ್ಟ ಅರಣ್ಯ ಪ್ರದೇಶದ ಬುಡಗಯ್ಯನ ದೊಡ್ಡಿ ಪ್ರದೇಶದಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಹಲವಾರು ಕುಟುಂಬಗಳು ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ಭೂಮಿ ಮತ್ತು ವಸತಿಗಾಗಿ ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಿವೆ. ಅಂತಹ ಕುಟುಂಬಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೇಳೆ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಗುಡಿಸಲುಗಳನ್ನು ಧ್ವಂಸಗೊಳಿಸಿರುವ ದುರ್ಘಟನೆ ಜರುಗಿದೆ.

Posted by Naanu Gauri on Wednesday, April 1, 2020

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಮೊದಲೇ ಸಂಕಷ್ಟದಲ್ಲಿದ್ದ ಈ ಬುಡಕಟ್ಟು ಜನರ ಮೇಲೆ ಅರಣ್ಯ ಇಲಾಖೆಯ ದಾಳಿಯಿಂದ ಅಲ್ಲಿನ ಜನತೆ ದಿಕ್ಕೆಟ್ಟಿದ್ದಾರೆ. ಹಲವಾರು ವರ್ಷಗಳಿಂದ ತಮಗೆ ಭೂಮಿ, ವಸತಿ ಬೇಕೆಂದು ಹೋರಾಟ ಮಾಡುತ್ತಿರುವವರನ್ನು ಏಕಾಏಕಿ ಒಕ್ಕಲೆಬ್ಬಿಸಿದರೆ ತಮ್ಮ ಜೀವನಕ್ಕೆ ಗತಿಯೇನು ಎಂದು ವಾದಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ದಾಳಿಗೆ ಕಾರಣವೇನು?

ಅರಣ್ಯ ಇಲಾಖೆಯು ಪ್ರಧಾನವಾಗಿ ಈ ಜನರು ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಗುಡಿಸಲುಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮನೆಕಟ್ಟಲು, ಇತರ ಕೃಷಿ ಸಂಬಂಧಿ ಚಟುವಟಿಕೆಗಳನ್ನು ನಡೆಸಲು ಅವಕಾಶವಿಲ್ಲ. ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ನಾವು ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಹೇಳುತ್ತಾರೆ.

ಆದರೆ ಆ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬೆಂಬಲವಿದೆ..

ಈ ಕುರಿತು ನಾನುಗೌರಿ.ಕಾಂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟಗಾರರಾದ ಸಿರಿಮನೆ ನಾಗರಾಜ್‌ರವರನ್ನು ಮಾತನಾಡಿಸಿತು. ಅವರು “ಅರಣ್ಯ ಹಕ್ಕು ಕಾಯ್ದೆಯಲ್ಲಿ ಆದಿವಾಸಿಗಳು ಮತ್ತು ಇತರ ಪಾರಂಪರಿಕ ಅರಣ್ಯ ಹಕ್ಕುದಾರರು ಅಂತ ಇದೆ. ಅಂದರೆ ಯಾವುದಾದರೂ ಸಮುದಾಯ ಅಲ್ಲಿ ಮೂರು ತಲೆಮಾರು ವಾಸಿಸಿದ್ದರೆ ಅವರಿಗೆ ಅಲ್ಲಿ ವಾಸಿಸಲು ಹಕ್ಕು ಸಿಗುತ್ತದೆ. ಇದನ್ನು ಬಳಸಿ ಹಲವಾರು ಜನರಿಗೆ ಭೂಮಿ ಕೊಟ್ಟಿರುವ ನೂರಾರು ಉದಾಹರಣೆಗಳಿವೆ. ಕಾಗೋಡು ತಿಮ್ಮಪ್ಪ ಮತ್ತು ಡಿ.ಕೆ ಶಿವಕುಮಾರ್‌ ಈ ರೀತಿ ಹಲವರಿಗೆ ಭೂಮಿ ಕೊಡಿಸಿದ್ದಾರೆ. ಇದೇ ಮಾದರಿಯಲ್ಲಿ ಈ ಇರುಳಿಗ ಜನರಿಗೆ ಭೂಮಿ ನೀಡಬಹುದಾಗಿದೆ. ಆದರೆ ಅರಣ್ಯ ಇಲಾಖೆಯವರು ಸರಿಯಾಗಿ ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಓದಿಕೊಳ್ಳದೇ ಈ ಕೃತ್ಯ ಎಸಗುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಮೀಸಲು ಅರಣ್ಯವೇ ಆಗಿದ್ದರೂ ಸಹ ಆದಿವಾಸಿಗಳಾಗಿದ್ದರೆ ಆ ಕಾಡಿನ ಮೇಲೆ ಅವರಿಗೆ ಹಕ್ಕು ಇರುತ್ತದೆ. ಅವರ ಮರಗಳು, ವಾಸವಿದ್ದ ಮನೆಯ ಗೋಡೆ, ಅವರ ದೈವದ ದಾಖಲೆಗಳಿದ್ದರೆ ಸಾಕು. ಅವರಿಗೆ ಅಲ್ಲಿನ ಹಣ್ಣು ಮತ್ತು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಿ ಮಾರುವ ಹಕ್ಕು ಸಹ ಇದೆ. ಕಾಡಿನ ಮೇಲ್ಮೆಗೆ ಯಾವುದೇ ರೀತಿ ಬದಲಾವಣೆ ಮಾಡದೇ ಅದನ್ನು ಉಪಯೋಗಿಸುವ ಕಾನೂನಾತ್ಮಕ ಹಕ್ಕು ಇದೆ. ಆದರೆ ಅರಣ್ಯ ಅಧಿಕಾರಿಗಳು ಬಡಜನರ ವಿರುದ್ಧದ ನಿಲುವಿನಿಂದಾಗಿ ತೊಂದರೆ ಕೊಡುತ್ತಿದ್ದಾರೆ ಎಂದು ಸಿರಿಮನೆ ನಾಗರಾಜ್‌ ಆರೋಪಿಸಿದ್ದಾರೆ.

ಈಗಿನ ಅರಣ್ಯ ಇಲಾಖೆಯ ಈ ಕ್ರಮದಿಂದಾಗಿ ಅಲ್ಲಿನ ಬಡಜನರು ಬೀದಿಪಾಲಾಗಿದ್ದು ಗೋಳಾಡುತ್ತಿದ್ದಾರೆ. ಮಹಿಳೆಯರು ಮಕ್ಕಳು ಬೀದಿಗೆ ಬಿದ್ದಿದ್ದು ಹೋರಾಟಕ್ಕೆ ಅಣಿಯಾಗಿದ್ದಾರೆ.


ಇದನ್ನೂ ಓದಿ: ಕಾರ್ಯತಂತ್ರ ಮಾತ್ರವಲ್ಲ; ಮಾನವೀಯತೆಯೇ ಇಲ್ಲದ ಮೋದಿ ಸರಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...