Homeಮುಖಪುಟಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ

ಲಾಕ್‌ಡೌನ್‌: ತುತ್ತು ಅನ್ನಕ್ಕಾಗಿ ಗುಳೆ ಹೊರಟವರ ಕತೆ

ರಣವೀರ್ ಸಿಂಗ್ ಎಂಬ 29ರ ಯುವಕ ತನ್ನೂರಿಗೆ ನಡೆಯುತ್ತಲೇ ಪ್ರಾಣಬಿಟ್ಟ ಕಣ್ಣೀರ ಕಥೆಯನ್ನು ಕಣ್ಮುಂದೆ ಕಟ್ಟಿಕೊಡುವ ಲೇಖನ

- Advertisement -
- Advertisement -

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವೇಡ್ಕರ್ ಕಳೆದ ದಿನ ತನ್ನ ಅಧಿಕೃತ ನಿವಾಸದಲ್ಲಿ ‘ರಾಮಾಯಣ’ ಧಾರವಾಹಿ ನೋಡಿ ಆನಂದಿಸುತ್ತಿದ್ದಾಗಲೇ, ರಣವೀರ್ ಸಿಂಗ್ ಎಂಬ ಯುವಕ ದೆಹಲಿಯ ಸರಹದ್ದು ದಾಟಿಯಾಗಿರಬೇಕು. ರಾಷ್ಟ್ರದ ರಾಜಧಾನಿಯಲ್ಲಿ ದಿನಗೂಲಿಗಾಗಿ ರೆಸ್ಟೋರೆಂಟ್‌ಗಳಲ್ಲಿ ಡೆಲಿವರಿ ಏಜೆಂಟ್ ಕೆಲಸ ಮಾಡುವ ಒಬ್ಬ ಸಾಮಾನ್ಯ ವ್ಯಕಿಯಾಗಿದ್ದ ರಣವೀರ್.

ಕೋವಿಡ್-19ರ ಹಿನ್ನೆಲೆಯಲ್ಲಿ, ಪ್ರತ್ಯೇಕವಾದ ಪೂರ್ವ ತಯಾರಿಗಳಿಲ್ಲದೆ ಮಾರ್ಚ್ 24 ಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೂರು ವಾರಗಳ ಲಾಕ್‌ಡೌನ್ ಘೋಷಿಸಿದಾಗ, ಬೀದಿಗೆ ಬಿದ್ದ ಸಾವಿರಾರು ಜನರ ಪೈಕಿ ಅವನೂ ಒಬ್ಬ.

ಅತ್ತ ದುಡಿಮೆಯೂ, ಇತ್ತ ಆಹಾರವೂ ಇಲ್ಲದೆ ದೆಹಲಿಯಲ್ಲಿ ಕೂಡುವುದು ಕಷ್ಟಸಾಧ್ಯವೆಂಬುದನ್ನು ಅರಿತ ರಣವೀರ್, ಮಧ್ಯ ಪ್ರದೇಶದ ಮೊರೋನಾ ಜಿಲ್ಲೆಯ ತನ್ನ ಹುಟ್ಟೂರಿಗೆ ಹಿಂತಿರುಗಲು ತೀರ್ಮಾನಿಸಿದ. 200 ಕಿ.ಮೀ.ಗಿಂತಲೂ ಹೆಚ್ಚು ದೂರದ ಪ್ರದೇಶವದು. ಇತರ ಸಂಪರ್ಕ ವ್ಯವಸ್ಥೆಗಳಿಲ್ಲದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಕಾಲ್ನಡಿಗೆಯಲ್ಲೇ ಸಾಗಬೇಕಿತ್ತು. ಹಾಗೇ ಮರುದಿನ ರಾತ್ರಿ ಹೊತ್ತಲ್ಲಿ, ಕುಡಿಯಲು ನೀರೂ ಕೂಡಾ ಜೊತೆಗಿಲ್ಲದೆ ನಡೆಯಲು ಆರಂಭಿಸಿದ.

ಅದಾಗಲೇ ರಣವೀರ್ ಸುಮಾರು 100 ಕಿ.ಮೀ ದೂರವನ್ನು ಬರಿಗಾಲಲ್ಲೇ ಕ್ರಮಿಸಿಯಾಗಿತ್ತು. ಇದರ ನಡುವೆ ಯಾರೋ ದಾರಿ ನಡುವೆ ಸಿಕ್ಕ ವ್ಯಾಪಾರಿಯೋರ್ವರು ಕೊಟ್ಟ ಚಹಾ ಮತ್ತು ಬಿಸ್ಕತ್ತು ಮಾತ್ರವಾಗಿತ್ತು ದಾರಿಯುದ್ದಕ್ಕೂ ಆಹಾರ. ನಡೆದಾಡಿ ಬಳಲಿದ ಆ 29ರ ಹರೆಯದ ಯುವಕ, ತನ್ನ ಗ್ರಾಮ ತಲುಪುವುದಕ್ಕಿಂತಲೂ ಬಹಳ ದೂರದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದನೆಂದಾಗಿತ್ತು ವರದಿ.

ನರೇಂದ್ರ ಮೋದಿಯ ಎಂಟು ಗಂಟೆಯ ಘೋಷಣೆಯಿಂದ ಉಂಟಾದ ಆಘಾತದಿಂದಾಗಿ, ಇದರಂತೆಯೇ ಲಕ್ಷಾಂತರ ರಣವೀರ್‌ಗಳು ‘ಕಾಲ್ನಡಿಗೆ’ ಆರಂಭಿಸಿದ ದೃಶ್ಯಗಳನ್ನು ಎಲ್ಲೆಡೆ ಕಂಡಿದ್ದೇವೆ. ನೆರೆಯ ರಾಜ್ಯಗಳಿಂದ ಕೆಲಸ ಹುಡುಕುತ್ತಾ ದೆಹಲಿ ತಲುಪಿದ್ದ ಕಾರ್ಮಿಕರು ಲಾಕ್‌ಡೌನ್‌ ಕಾರಣದಿಂದಾಗಿ ಅವರ ಕುಟುಂಬಗಳೊಂದಿಗೆ ಸಾಲು ಸಾಲಾಗಿ ಗುಳೆ ಹೊರಟಿರುವ ದಯನೀಯ ದೃಶ್ಯಗಳು ದೇಶಕ್ಕೆ ಕೋವಿಡ್ ವೈರಾಣುವಿನಷ್ಟೇ ಭೀತಿಜನಕವಾದುದು.

ದೆಹಲಿ- ಯು.ಪಿ ಗಡಿಭಾಗದ ಗಾಜಿಯಾಬಾದ್‌ನಲ್ಲೂ ಅಂತೆಯೇ ಇನ್ನಿತರ ಪ್ರದೇಶಗಳಲ್ಲೂ ಊರು ಸೇರಲು ಲಾಕ್‌ಡೌನ್ ಉಲ್ಲಂಘಿಸಿ, ಬಸ್ಸಿಗಾಗಿ ಕಾಯುತ್ತಿರುವ ಈ ಜನರ ಗುಂಪು, ಎಲ್ಲಾ ಗಡಿಗಳಲ್ಲೂ ಇದೀಗ ‘ನಿರಾಶ್ರಿತ ವಲಸಿಗರು’  ಎಂಬ ವಿಶೇಷ ಮನ್ನಣೆ ಪಡೆದುಕೊಂಡಿದ್ದಾರೆ.

ಉತ್ತರ ಆಫ್ರಿಕಾದ ಹಾಗೂ ಪಶ್ಚಿಮ ಏಷ್ಯಾದ ಸಂಘರ್ಷ ಭೂಮಿಯಿಂದ ಮುಕ್ತಿ ಹೊಂದಿ, ಯುರೋಪಿಯನ್ ಯೂನಿಯನ್ನಿನ ಪ್ರವೇಶ ಕವಾಟಗಳಾದ ಮಾಸಿಡೋನಿಯ ಹಾಗೂ ಇತರೆಡೆಗಳಲ್ಲಿ ಅಭಯ ಯಾಚಿಸುತ್ತಾ ಕಾದು ನಿಂತಿರುವ ಲಕ್ಷಾಂತರ ಜನರನ್ನು ನೆನೆಪಿಸುತ್ತಿದೆ ಈ ಜನಸಾಗರ. ಜೀವನದ ಹೊಸ ನಿರ್ಣಾಯಕ ದಡವನ್ನು ಸೇರುವ ಆಸೆಯಿಂದ ಯುರೋಪಿನತ್ತ ಹಲವರು ಮೆಡಿಟೆರೇನಿಯನ್ ಸಮುದ್ರವನ್ನು ಈಜುತ್ತಾ ದಾಟಿ ಬಂದರೆ, ಇಲ್ಲಿ ಕಾಲ್ನಡಿಗೆ ಸಂಚಾರ ಎನ್ನುವ ವ್ಯತ್ಯಾಸ ಮಾತ್ರ. ಪಲಾಯನದ ಉದ್ದೇಶ ಮಾತ್ರ ಒಂದೇ. ಒಂದು ಹೊತ್ತಿನ ತುತ್ತು ಅನ್ನ.

ದೆಹಲಿಯಲ್ಲಿರುವ ಕೂಲಿ ಕಾರ್ಮಿಕರ ಸಂಖ್ಯೆ 20 ಲಕ್ಷಕ್ಕಿಂತಲೂ ಹೆಚ್ಚು. ಲಾಕ್‌ಡೌನ್ ಘೋಷಿಸಿದಾಗ ಇದರಲ್ಲಿ ಹೆಚ್ಚಿನ ಪ್ರಮಾಣದ ಜನರು ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ದೆಹಲಿ ಸರ್ಕಾರದ ಗಣತಿಯಂತೆ, ಈಗಾಗಲೇ ನಾಲ್ಕು ಲಕ್ಷದಷ್ಟು ಬರುವ ಜನರಿಗಾಗುವಷ್ಟು ಮಾತ್ರ ಆಹಾರ ಮತ್ತು ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಏರ್ಪಡಿಸಲಾಗಿದೆ.  ಕೇಂದ್ರ ಸರಕಾರವೋ ಬಂದ್ ಮಾಡಿ ಅನ್ನೋ ಘೋಷಣೆ ಬಿಟ್ಟು ಕ್ರಿಯಾತ್ಮಕವಾದ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಗುಳೆ ಹೊರಡುವುದು ಸ್ವಾಭಾವಿಕ.

ಸರಕಾರವು ಗುರುತರವಾದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವಾಗ, ವಲಸೆ ಕಾರ್ಮಿಕರು ಗುಳೆ ಹೊರಟಿರುವುದರ ಹಿಂದಿನ ಉದ್ದೇಶ ನಿಜವಾಗಿಯೂ ಹಸಿವಿನಿಂದ ಬರುವ ಸಾವುಗಳನ್ನ ಪ್ರತಿರೋಧಿಸುವುದಕ್ಕಾಗಿಯೇ ಆಗಿದೆ. ಈ ಸಾಮೂಹಿಕ ಗುಳೆಯ ಬಗ್ಗೆ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲೂ ವರದಿಯಾದಾಗ, ವಲಸಿಗರನ್ನು ಕರೆತರಲು ನೆರೆಯ ರಾಜ್ಯಗಳು ಬಸ್ಸುಗಳನ್ನು ಕಳುಹಿಸಲು ಮುಂದೆ ಬಂದವು.  ಇದು ಬರಿ ದೆಹಲಿಯ ದೃಶ್ಯಗಳಾಗಿವೆ ಅಂದುಕೊಂಡರೆ ಅದು ತಪ್ಪು. ಮುಂಬೈ , ಕಲ್ಕತ್ತಾ, ಚೆನ್ನೈ, ಬೆಂಗಳೂರು ಮುಂತಾದ ಮೆಟ್ರೋ ನಗರಗಳಲ್ಲಿನ ಬೀದಿಗಳಿಂದೆಲ್ಲಾ, ಈ ರೀತಿಯ ಸಾಮೂಹಿಕ ಪಲಾಯನದ ಸುದ್ದಿಗಳು ವರದಿಯಾಗುತ್ತಿವೆ.

ಗಾಜಿಯಾಬಾದ್ ಮತ್ತು ಇತರೆಡೆಗಳಲ್ಲಿ ಬಸ್ಸುಗಳಿಗಾಗಿ ಕಾಯುತಿರುವ ಹಲವರು ಆಡುವ ಮಾತು “ನಮ್ಮಲ್ಲಿ ಹಲವರಿಗೆ ಆಧಾರ್ ನಂತಹ ಯಾವುದೇ ಗುರುತು ಚೀಟಿಗಳಿಲ್ಲ” ಎಂದಾಗಿದೆ. ಅಂದರೆ, ನಾಮಮಾತ್ರವಾದರೂ, ಈ ಸಮಯದಲ್ಲಿ ಸರಕಾರ ನೀಡುವ ಯಾವುದೇ ಸೌಜನ್ಯ ಸವಲತ್ತುಗಳಿಗೆ ಅವರು ಅನರ್ಹರು. ಇವೆಲ್ಲವೂ ವರ್ತಮಾನ ಭಾರತದ ಅವ್ಯವಸ್ಥೆಯ ನೇರನೋಟಗಳಾಗಿವೆ ಎಂಬುದನ್ನು ಮನಗಾಣಬೇಕಿದೆ.

ಗೃಹ ಸಚಿವ ಅಮಿತ್ ಶಾ ಘೋಷಿಸಿದ ಎನ್‌ಆರ್‌ಸಿ ದೇಶವ್ಯಾಪಿಯಾಗಿ ಪ್ರಾಬಲ್ಯಕ್ಕೆ ಬಂದರೆ, ಗುರುತು ತೋರಿಸಲು ದಾಖಲೆಗಳಿಲ್ಲದ ಈ ಜನರ ಸ್ಥಿತಿ ಏನಾಗಬಹುದೆಂಬುದು ಈ ಮೂಲಕ ಊಹಿಸಬಹುದಾಗಿದೆ. ಆದ್ದರಿಂದ ಹಲವರ ನಿರೀಕ್ಷಿಸಿದಂತೆ, ಮೋದಿಯ ಲಾಕ್‌ಡೌನ್ ಘೋಷಣೆಯು ಹಳೆಯ ನೋಟು ನಿಷೇಧವನ್ನಲ್ಲ ನೆನೆಪಿಸೋದು. ಬದಲಾಗಿ, ಇನ್ನೇನು ಜಾರಿಗೊಳಿಸಲಿರುವ ಎನ್‌ಆರ್‌ಸಿಯ ಪ್ರತ್ಯಾಘಾತ ಎಂಬಂತೆ, ದೇಶದುದ್ದಕ್ಕೂ ಪ್ರತ್ಯಕ್ಷವಾಗಲು ಸಾಧ್ಯತೆಗಳಿರುವ ಬಹುದೊಡ್ಡ ಸಂಖ್ಯೆಯ  ನಿರಾಶ್ರಿತ ಸಮೂಹಗಳ ಸೂಕ್ತ ಮುನ್ಸೂಚನೆಯೇ ಆಗಿದೆ ಈ ಬಸ್ಸು ಕಾಯುತ್ತಿರುವ ಜನ ಸಮೂಹ ಅನ್ನುವುದು ಸ್ಪಷ್ಟ.

ಈ ಸಾಮೂಹಿಕವಾಗಿ ಗುಳೆ ಹೊರಟವರೊಂದಿಗಿನ ಅಧಿಕಾರಿಗಳ ಮನೋಭಾವ ಕೂಡಾ ಅತ್ಯಂತ ದಯನೀಯವಾದುದು. ಲಾಕ್‌ಡೌನ್ ಅನ್ನುವ ಕಠಿಣ ನಿರ್ಧಾರವನ್ನು ತಳೆದಿದ್ದಕ್ಕಾಗಿ ಜನತೆಯೊಂದಿಗೆ ಕ್ಷಮೆ ಯಾಚಿಸುತ್ತೇನೆ ಎಂದಾಗಿತ್ತು ಕಳೆದೆರಡು ದಿನಗಳ ಹಿಂದಿನ ಮೋದಿಯ ಪ್ರಸ್ತಾವನೆ. ಯಾವುದೇ ಪೂರ್ವ ತಯಾರಿಗಳಿಲ್ಲದೆ, ನಾಲ್ಕು ಗಂಟೆಗಳ ಸಮಯವನ್ನು ಮಾತ್ರ ನೀಡಿ, 130 ಕೋಟಿ ಜನರನ್ನು ನಿರ್ದಾಕ್ಷಿಣ್ಯ ಲಾಕ್‌ಡೌನ್ ನತ್ತ ತಳ್ಳಿಹಾಕಿ, ನಂತರದ ಈ ಕ್ಷಮಾಪಣೆಯಲ್ಲಿ ಯಾವುದೇ ಅರ್ಥವಿಲ್ಲ.

ನೋಟ್ ಬ್ಯಾನ್‌ನ ನಂತರ, 50 ದಿನಗಳ ಸಮಯಾವಕಾಶ ಕೋರಿದ, ಅದೇ ‘ಪ್ರಾಮಾಣ ಕತೆ’ಯಷ್ಟೇ ಈ ಪ್ರಸ್ತಾವನೆಗೂ ಇರುವುದು. ಅಂದು ನೋಟು ಬ್ಯಾನ್‌ನಲ್ಲಿ ಕ್ಯೂ ನಿಂತು ಅಸ್ವಸ್ಥರಾದವರೇ ಇಂದೂ ಬೀದಿಗೆ ಬಂದಿರುವುದು. ಆ ಜನರೊಂದಿಗೆ ‘ಮನೆಯೊಳಗೇ ಕುಳಿತುಕೊಂಡಿರಿ’ ಎಂಬುದಾಗಿದೆ ಈಗಲೂ ನೀಡಿರುವ ಎಚ್ಚರಿಕೆ. ಹಾಗಾದರೆ ಇದಕ್ಕೂ ಮುನ್ನವೇ ಸೂರು ಕಳೆದುಕೊಂಡ ಬಡಜನರು ಎತ್ತ ಹೋಗಬೇಕು..? ಸಂಘರಾಜಕೀಯದ ವಿಷಬೀಜಗಳು ಬಿತ್ತಿದ ರಾಮಾನಂದ ಸಾಗರನ ‘ಸೀರಿಯಲ್ ನಾಸ್ಟಾಲ್ಜಿಯ’ದ ಮೂಲಕ ಜನರ ಹಸಿವು ನೀಗುತ್ತದೆ ಎಂದಾಗಿದೆಯೋ ಈ ಆಡಳಿತಾರೂಢರು ಅಂದ್ಕೊಂಡಿರೋದು…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...