Homeಮುಖಪುಟಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

ಟ್ರಂಪು ಬಂದಾಗ್ಲೆ ಕರೋನ ಬತ್ತಂತೆ : ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ದಿನಬೆಳಗಾಯ್ತೆಂದರೆ ಅವರಿವರ ಮನೆ ಅಟ್ಟಿ ಬಾಗಿಲಿಗೆ ಹೋಗಿ, ಮಾತನಾಡಿಸುತ್ತಿದ್ದ ಜುಮ್ಮಿ, ಈಗ ಮನೆಯೊಳಗೇ ಇರಲು ಒಂದೇ ವಾರಕ್ಕೆ ಸಾಕಾಗಿ ಹೋಗಿತ್ತು. ಆಗ ಬಂದ ವಾಟಿಸ್ಸೆ ನೋಡಿದ ಅವಳು, “ಇನ್ನು ಏಟು ದಿನ ಹಿಂಗೆ ಇರಬೇಕ್ಲ ಮನೆ ವಳಗೆ” ಎಂದಳು.

“ಅದನ್ನು ಮೋದಿ ತೀರಮಾನಸ್ತಾನೆ ಕಣಕ್ಕ”

“ಆ ಕೆರೋನ ಕಾಯ್ಲ ಇರೂ ಜಾಗದಲ್ಲಿ ಅಂಗಿರ್ಲಿ ನಾವಾಕ್ಲ ವಳಗಿರಬೇಕು”

“ಯಾಕಿರಬೇಕು ಅಂದ್ರೇ, ಕರೋನ ವೈರಸ್ ಗಾಳಿಲೆ ಬತ್ತದಂತೆ ಕಣಕ್ಕ”

“ಗಾಳಿಲಿ ಬೆಂಗಳೂರಿಂದ ಇಲ್ಲಿಗಂಟ ಬಂದತ್ಲ”

“ಬೆಂಗಳೂರಲ್ಲ ಕಣಕ್ಕ, ನಮಿಗೆ ತುಮಕೂರು ನಿರ‍್ರು, ಇತ್ಲಗೆ ಮೈಸೂರು ನಿರ‍್ರು. ಅಲ್ಯಾವನಾರ ಕೊರೋನಾ ರ‍್ಯಾಸ್ಕಲ್ ಪವರ್ ಪುಲ್ಲಾಗಿ ಸೀನಿಬುಟ್ಟು ಅದೇ ಟೈಮಿಗೆ ಒಂದು ಬಿರುಗಾಳಿ ಬಂದು ಇಲ್ಯಾಸಿ ಹೋದ್ರೆ ನಾವ್ಯಲ್ಲ ಕೊರೋನಾಗಳಾಯ್ತಿವಿ ಅಂತ ಮೋದಿ ಮನೆವಳಗಿರಿ ಅಂದವುನೆ”

“ಅವುನೇನೊ ಇರತನೆ ನಾವಿರದ್ಯಂಗ್ಲಾ, ಸೊಪ್ಪು ಸ್ಯದೆ ನೋಡಬಾರ್ದೆ, ದನಿಕರಗಳ ಮನೆವಳಗೆ ಏಟುದಿನ ಅಂತ ಕಟಿಗಳಿದ. ಹುಲ್ಲು ಕೊಪ್ಪಲಿಗೋಗಿ ಹುಲ್ಲು ತರಬಾರ್ದೆ, ಸೌದೆ ತರಬಾರ್ದೆ ಬೀದಿ ನಲ್ಲಿಲಿ ನೀರತರಬಾರ್ದೆ”

“ನಿನ್ನ ಕಷ್ಟ ಯಾವು ಅವುನಿಗೆ ಗೊತ್ತಿಲ್ಲ ಕಣಕ್ಕ. ಒಟ್ಟಿನಲ್ಲಿ ಮನೆವಳಗಿರಿ ಈಚೆಗೆ ಬರಬ್ಯಾಡಿ ಅಂದವುನೆ”

“ಇದಿನ್ಯಂಥಾ ಕಾಯಿಲನ್ಲ ಇಲ್ಲಿಗಂಟ ನೋಡಿರಲಿಲ್ಲ”

“ನೋಡಕ್ಕೆ ಕಾಣಬೇಕಲ್ಲಕ್ಕ ಅದೂ ದೇವ್ರಂಗೆ ಕಣ್ಣಿಗೆ ಕಾಣದಿಲವೊ. ಅಂಗೆ ಕೊರೋನಾನು ಕಾಣದಿಲ್ಲ”

“ದೇವುರ ಮಾಡಿದ್ರೆ ಉಸರಾಗದಿಲವೇನ್ಲ”

“ಯಕ್ಕಾ. ಈ ಹಾಳು ಕೊರೊನಾ ಅಂದ್ರೆ ಏನು ತಿಳಕಂಡಿದ್ದೀ? ಅದರ ಒಂದೇಟಿಗೆ ನಿಮ್ಮ ತಿರುಪ್ತಿ ತಿಮ್ಮಣ್ಣ, ಧರುಮಸ್ಥಳದ ಮಂಜಣ್ಣ, ಮ್ಯಾಲುಕೋಟೆ ಚಲುವಣ್ಣನೆ ಬಾಗಲಾಯ್ಕಂಡು ಪರಾರಿಯಾಗ್ಯವರೆ.

ಇನ್ನ ಈ ಲೋಕಲ್ ದೇವುರಂತು ಕೊರೋನ ತಗಲಿ ಸತ್ತೇ ಹೋಗಿರಬವುದು. ಯಾಕೆ ಅಂದ್ರೇ ಅವೂ ಕಣ್ಣಿಗೆ ಕಾಣೋದಿಲ್ಲ ಆ ಕೊರೊನಾಗೂ ಕಾಣದಿಲ್ಲ. ಯಲ್ಲ ಶೂನ್ಯ ಸಮಾಚಾರ”

“ಅದಿನ್ಯಂಗೆ, ಬತ್ತೊ’’

“ನಮ್ಮ ಜನ ಹೇಳೊ ಪ್ರಕಾರ, ಅಮೇರಿಕಾದ ಟ್ರಂಪಿನ ಜೊತೆಲೆ ಬತ್ತಂತೆ ಕಣಕ್ಕ’’

“ಅಮೆರಿಕಾದ ಟ್ರಂಕು ಅಂದ್ರೆ ಅವುನ್ಯಾರ್ಲ’’

‘‘ಅವುನು ಮೋದಿ ಪ್ರೆಂಡು ಕಣಕ್ಕ. ಅವುನೊಂಥರ ಇವುನಂಗೆಯಾ. ಇಬ್ರೂ ಪ್ರಂಡು. ನಾನು ಉಗ್ರಿ ಇದ್ದಿವಿ ನೋಡು ಆ ಥರದ ಪ್ರೆಂಡು. ನೀನೊಂಥರ ಸೋನಿಯಾ ಗಾಂಧಿ ಇದ್ದಂಗೆ”

“ಅಣಕ ವಡಿಬ್ಯಾಡ ಮುಂದಕ್ಕೇಳ್ಳ”

“ಆ ಟ್ರಂಪು ಒಂದು ಸತಿಯ ಮೋದಿಯ ಅಮೆರಿಕಕ್ಕೆ ಕರಿಸಿಗಂಡು, ಬಾಸಣ ಮಾಡಿಸಿದನಂತೆ. ಇವುನು ಬರುವಾಗ ನೀನು ಬಾ ನಮ್ಮ ದೇಸ ಯಂಗದೆ ನೋಡು ಅಂದಿದ್ನಂತೆ. ಆಗವುನು ಬತ್ತಿನಿ ನಡಿ ಅಂದ ಅಂಗೆ ಬಂದೇ ಬುಟ್ಟ’

“ಇನ್ನ ಇಲ್ಲೇ ಇದ್ದನೆ”

“ಅವುನ್ಯಾಕಿದ್ದನಕ್ಕ ಆಗ್ಲೆ ಹೋದ, ಅವುನ ಬತ್ತನೆ ಅಂತ ಈ ಕಡೆವು, ಟ್ರಂಪಿಗೆ ಕಾಣದಂಗೆ ಸ್ಲಂನ್ಯಲ್ಲ ತಗಿಸಿ ಅಲ್ಲಿಗೆ ಬಣ್ಣದ ಪರದೆ ಬುಟ್ಟಿದ್ರಂತೆ”

“ಅದ್ಯಾಕೆ”

“ಸಾಮಾನ್ಯವಾಗಿ ಬಡುವುರು ಬಡತನ ಮುಚ್ಚಿಡತರೆ ನೋಡು, ಅಂಗೆ ಈ ಮೋದಿ ನೋಟುಬ್ಯಾನು ಜಿ.ಎಸ್.ಟಿ ತಂದು, ಜನ ಕ್ಯಲಸ ಕಳಕಂಡು ಬಡುವುರಾಗಿ ಟ್ರಂಪು ಬರೋ ಜಾಗದಲ್ಲಿ ಟೆಂಟಾಕಿದ್ದವಂತೆ”

“ಪಾಪ ಇನ್ನೆಲ್ಲಿಗೋದವುಲ’’

“ನೀನು ಪಾಪ ಅಂತಿಕಣಕ್ಕ ಮೋದಿ ಶಾ ನು ಪಾಪ ಅನ್ನಬೇಕಲ್ಲ. ಅದ್ಕೆ ಅವುರು, ಟ್ರಂಪು ಬರೊ ಜಾಗದ ಟೆಂಟ ಬುಲ್ಡೋಜರ್ ಹಾಕಿ ಮಟ್ಟ ಮಾಡಿ, ಅಲ್ಲಿಗೆ ಪರದೆ ಬುಟ್ಟು, ಡೆಲ್ಲಿ ಕೆಂಪು ಕೋಟೆ, ಕುತುಬ್ ಮಿನಾರ್, ತಾಜ್ ಮಹಲ್ ಚಿತ್ರ ಹಾಕಿದ್ರಂತೆ”

“ಕಡಿಗೂ ಈ ನನ್ನ ಮಕ್ಕಳು ಸಾಬುರು ಕಟ್ಟಿದ್ದ ಸ್ಮಾರಕ ತೋರಿದ್ರೆ ವರತೂ ಇವುರ ಕಟ್ಟಿದ್ದೇನೂ ಇರಲಿಲ್ಲ ನೋಡು” ಎಂದ ಉಗ್ರಿ

‘‘ಇವುರದಿನ್ನ ಲೇಟಲ್ಲವೇನೋ ಇನ್ನ ಸಾವುರಾರು ಗೋರಿ ಕಟ್ಟಬೇಕಾಗ್ಯದೆ. ಅದ್ಕೆ ಕಾಂಗ್ರೆಸ್ಸಿಗೆ ಯಪ್ಪತೊರಸ ಕೊಟ್ಟಿರೊ ನೀವು ನಮಿಗೆ ಯಪ್ಪತ್ತು ತಿಂಗಳನಾರ ಕೊಡಿ ಅಂತ ಮೋದಿ ಕೇಳಿದ್ದ ಗೊತ್ತೆ”

“ಯಪ್ಪತ್ತು ತಿಂಗಳಾಯ್ತಲ್ಲೊ ಆಗ್ಲೆಯ”

“ಅದ್ಕೆ ದೇಸದ ಕತೆನೆ ಮುಗಿತಾ ಅದಲ್ಲೊ”

“ಅದೇನೊ ನಿಜ ಕಣೊ, ಮುಂದಿನ ದಿನ ನ್ಯನಿಸಿಗಂಡ್ರೆ ನ್ಯನಿಸಿಗಳಕ್ಕೆ ಭಯಾಯ್ತದೆ”

“ಅದೇನು ಟ್ರಂಕಿನ ಸುದ್ದಿ ಹೇಳ್ಳ”

‘‘ಸಾರಿ ಕಣಕ್ಕ, ಆ ಟ್ರಂಪು ಬಂದಾಗ್ಲೆ ಕೊರೋನಾ ಬಂದಿರದು ಯಾಕೆ ಅಂದ್ರೆ, ಅಮೆರಿಕ ದೇಸಕ್ಕಾಗ್ಲೆ ಕೊರೊನಾ ಬಂದಿತ್ತಂತೆ. ಅವುನ ಜೊತೆ ಬಂದೋರು, ಅದ ತಂದು ಇಲ್ಲಿ ಬುಟ್ಟು ಹೋದರಂತೆ ಅಮ್ಯಾಲೆ ಹರಡಿಕತ್ತು”

“ಅದಂಗಲ್ಲ ಕಣೊ”

“ಅಂಗೆ ಕಣೊ ಉಗ್ರಿ ಟ್ರಂಪು ಬಂದು ಹೋಗಗಂಟ ಅವುನ ಕಣ್ಣಲ್ಲಿ ಕಣ್ಣಿಟ್ಟು ನೋಡಿಕಳುವಾಗ, ಕಣ್ಣಿಗೆ ಕಾಣದ ಕರೊನ ಯಾರಿಗೂ ಕಾಣಲಿಲ್ಲ. ಅವುನು ಹೋದ ಮ್ಯಾಲೆ ಅಟಗಾಸಿಗತ್ತು”

“ಈಗ್ಯಂಗೆ ವಾಸಿ ಮಾಡಿಕಳದು”

“ಮನಿವಳಿಗಿರಬೇಕಂತೆ”

“ಏಟು ದಿನ”

“ತಿರಿಗ ಪ್ರಧಾನಿ ಹೇಳತನೆ, ಅದ ಕಡ್ಡಿರಂಗ ಹೇಳತನೆ. ಅಲ್ಲಿ ಗಂಟ ಕಡ್ಡಿರಂಗ ಹೇಳಿದಂಗ ಕೇಳಬೇಕು”

“ಅವುನ್ಯಾರರ್ಲ”

“ಏ ಅದೊಂದು ಪೋಲಿಬಡ್ಡೆತ್ತದ್ದು ಕಣಕ್ಕ. ತಲಿ ಕೆಟ್ಟೋಗ್ಯದೆ. ಪಬ್ಲಿಕ್ ಟಿ.ವಿ ವಳಗಡೆ ಕುತುಗಂಡು, ಯಾಕ್ರಿ ಈಚಿಗೆ ಬತ್ತಿರಿ. ಮನೆವಳಗಿರಿ ಇಲ್ಲ ನೇಣಾಯ್ಕಂಡು ಸಾಯಿರಿ ಅಂದವುನೆ”

“ಅಂಗಂದ ಆ ಸೂಳೆಮಗನ್ನ ಯಳಕಂಡು ಬಾರ್ಲ ಇಲ್ಲಿ, ಯಕ್ಕಡದಲ್ಲಿ ಹೊಡಿತಿನಿ”

“ಹೋಗ್ಲಿ ಬುಡಕ್ಕ ಪೂರ್ ಬ್ರಾಹ್ಮಿನ್ ಪೆಲೊ”

*****

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...