Homeಮುಖಪುಟಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

- Advertisement -
- Advertisement -

ನಾಗಾಲೋಟದಲ್ಲಿ ಓಡುತ್ತಿದ್ದ ಜನರ ಜೀವನಕ್ಕೆ ಇದ್ದಕ್ಕಿದ್ದ ಹಾಗೆ ಬ್ರೇಕ್ ಬಿದ್ದಿದೆ. ಇವತ್ತು ಜಗತ್ತಿನ ಮಾನವಕುಲ ಅದರಲ್ಲೂ ನಮ್ಮ ಪೀಳಿಗೆಯವರು ಹಿಂದೆಂದೂ ಕಂಡಿರದ ಸಾಂಕ್ರಾಮಿಕ ಪಿಡುಗಿಗೆ ಮತ್ತದರ ಪರಿಣಾಮಗಳಿಗೆ ಸಾಕ್ಷಿಯಾಗುತ್ತಿದ್ದೇವೆ. ಅನಿರೀಕ್ಷಿತವಾಗಿ ಎದುರಾದ ಈ ಆಘಾತಕ್ಕೆ ವಿಶ್ವದೆಲ್ಲೆಡೆ ದೇಶಗಳು ಸ್ತಬ್ಧವಾಗಿವೆ. ಪ್ರತಿಯೊಂದು ದೇಶ ತನ್ನಲ್ಲಿರುವ ವ್ಯವಸ್ಥೆಗಳೊಂದಿಗೆ ಈ ಪಿಡುಗಿನ ವಿರುದ್ಧ ಸೆಣಸಿ ಹರಸಾಹಸ ಪಡುತ್ತಿವೆ. ಅದರಲ್ಲೂ ಭಾರತದಂತಹ ದೇಶಕ್ಕೆ ಇದೊಂದು ದೊಡ್ಡ ಸವಾಲೇ ಸರಿ. ವ್ಯಕ್ತಿಗತ ನೆಲೆಯಲ್ಲಿ ಭಾರತದ ಅನೇಕರು ಜಗತ್ತಿನ ಶ್ರೇಷ್ಠ ವೈದ್ಯರೆಂದು ಹೆಸರು ಪಡೆದಿದ್ದರೂ, ಸಾಮುದಾಯಿಕ ನೆಲೆಯಲ್ಲಿ ಒಳ್ಳೆಯ ವೈದ್ಯಕೀಯ ಸೌಲಭ್ಯಗಳನ್ನು, ತನ್ನೆಲ್ಲ ನಾಗರಿಕರಿಗೆ ಒದಗಿಸುವುದರಲ್ಲಿ ಜಗತ್ತಿನ ಮುಂದುವರೆದ ದೇಶಗಳಿಗೆ ಹೋಲಿಸಿದರೆ ಬಹಳಷ್ಟು ಹಿಂದೆಬಿದ್ದಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಅತಿ ವೇಗವಾಗಿ ಹಬ್ಬುತ್ತಿರುವ ಈ ಕೋವಿಡ್-19 ಎಂಬ ಸಾಂಕ್ರಾಮಿಕ ಪಿಡುಗನ್ನು ಪತ್ತೆ ಹಚ್ಚಿ ತಡೆಗಟ್ಟುವುದು ಅತ್ಯಂತ ಕಷ್ಟಕರ ಹಾಗೂ ಸವಾಲಿನ ಕೆಲಸ. ಮುಂದಿನ ಕೆಲವು ದಿನಗಳಲ್ಲಿ ವಿಶ್ವದಾದ್ಯಂತ ದೇಶಗಳು ಯಾವ ರೀತಿ, ಎಷ್ಟು ವೇಗವಾಗಿ ಸ್ಪಂದಿಸಿ ಈ ಪಿಡುಗಿನ ನಿರ್ಮೂಲನೆಗೆ ಕ್ರಮ ಕೈಗೊಳ್ಳುತ್ತವೆ ಎನ್ನುವುದರ ಮೇಲೆ ಜಾಗತಿಕ ಅಭಿವೃದ್ಧಿ ಮತ್ತು ಬದುಕು ನಿಂತಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಗತ್ತು ಈವರೆಗೂ ತೆಗೆದುಕೊಳ್ಳಲು ಹಿಂಜರಿಯುತ್ತಿದ್ದ ಕೆಲವು ನಿರ್ಧಾರಗಳನ್ನು ಮುಲಾಜಿಲ್ಲದೆ ತೆಗೆದುಕೊಳ್ಳುತ್ತಿದೆ. ತಂತ್ರಜ್ಞಾನ ಬಹಳ ಮುಂದುವರೆದ ಜಗತ್ತಿನಲ್ಲಿ ಈ ಪಿಡುಗಿನಿಂದ ಜಗತ್ತನ್ನು ಪಾರುಮಾಡಲು ಅದೇ ಪ್ರಬಲ ಅಸ್ತ್ರವಾಗಿದೆ. ಭಾರತವೂ ಇದಕ್ಕೆ ಹೊರತಾಗಿಲ್ಲ.

ಸೋಂಕು ಹರಡುತ್ತಿರುವ ಮಾದರಿಯನ್ನು ತಿಳಿಯಲು, ಪ್ರತಿಯೊಬ್ಬರನ್ನು ಹದ್ದಿನ ಕಣ್ಣಿನಿಂದ ಕಾಯಬೇಕಾದ ಸನ್ನಿವೇಶ ಬಂದಿದೆ. ಸಾಂಕ್ರಾಮಿಕ ತಡೆಯಲು ಹಾಕಿರುವ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕಾಗಿದೆ. ಈ ಹಿಂದೆ ಸಾಕಷ್ಟು ಸಾಂಕ್ರಾಮಿಕಗಳು ಮನುಕುಲದ ಅವಸಾನಕ್ಕೆ ಕಾರಣವಾಗಿದ್ದರೂ, ಆಗೆಲ್ಲ ಸಂಕಷ್ಟದಿಂದ ರಕ್ಷಿಸಿಕೊಳ್ಳಲು ಇಂದಿನಂತೆ ಮುಂದುವರೆದ ತಂತ್ರಜ್ಞಾನಗಳಿರಲಿಲ್ಲ. ಇವತ್ತು ಜಗತ್ತಿನ ಹಲವು ದೇಶಗಳಿಗೆ ತನ್ನ ಪ್ರಜೆಗಳನ್ನು ‘ತಂತ್ರಜ್ಞಾನ ಕಣ್ಗಾವಲಿನಿಂದ” (surveillance) ಕಾಯುತ್ತ, ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗಿದೆ. ಇಂತಹ ಬಿಕ್ಕಟ್ಟಿನಲ್ಲಿ ಇದು ಮೊದಲು ಪ್ರಯೋಗವಾಗಿರುವುದು, ಕೋವಿಡ್-19 ಮೊದಲು ಕಾಣಿಸಿಕೊಂಡ ಚೈನಾದಲ್ಲಿ.

ಇದನ್ನು ಓದಿ: ಕೊರೊನಾ ತರದಿರಲಿ ಸರ್ವಾಧಿಕಾರತ್ವದ ಮೋಹ

ಏನಿದು “ತಂತ್ರಜ್ಞಾನ ಕಣ್ಗಾವಲು” ಎಂದರೆ, ಇವತ್ತು ಜಗತ್ತಿನ ಎಲ್ಲ ದೇಶದ ಬಹುತೇಕ ನಾಗರಿಕರಲ್ಲಿ ಬಹು ದೊಡ್ಡಮಟ್ಟದಲ್ಲಿ ಸ್ಮಾರ್ಟ್ ಫೋನ್ ನುಸುಳಿದೆ. ಜನ ಬಳಸುವ ಈ ಫೋನ್‌ಗಳನ್ನು ಜಾಗರೂಕತೆಯಿಂದ ಗಮನಿಸುತ್ತ, ಮುಖ ಗುರುತಿಸುವ ಕ್ಯಾಮರಾಗಳು ಮತ್ತು ಆಪ್‌ಗಳನ್ನು ಬಳಸಲು ಜನರನ್ನು ಪ್ರೇರೇಪಿಸಿ ಆ ಮೂಲಕ ಮನುಷ್ಯನ ದೇಹದ ಉಷ್ಣತೆ ಮತ್ತಿತರ ವೈದ್ಯಕೀಯ ಮಾಹಿತಿಗಳನ್ನು ಕಲೆ ಹಾಕಬಹುದು. ಜಿಪಿಎಸ್ ತಂತ್ರಜ್ಞಾನದ ನೆರವಿನಿಂದ ಜನರ ಚಲನವಲನ ಅವರು ಸಂಪರ್ಕಿಸುವ ವ್ಯಕ್ತಿಗಳ ಮಾಹಿತಿಗಳನ್ನು ಪತ್ತೆ ಹಚ್ಚಬಹುದು. ಇವೆ ಈ “ತಂತ್ರಜ್ಞಾನ ಕಣ್ಗಾವಲಿನ” ಪ್ರಮುಖ ಕೆಲಸ. ಇದನ್ನು ಸಮರ್ಪಕವಾಗಿ ಬಳಸಿ, ಜನರ ಚಲನವಲನಗಳನ್ನು ನಿಯಂತ್ರಿಸಿ ಸಾಂಕ್ರಾಮಿಕವನ್ನು ಹರಡದಂತೆ ಮಾಡಿ, ಪಿಡುಗನ್ನು ತೊಲಗಿಸಬಹುದು. ಚೈನಾ ಈ ಮಾದರಿಯನ್ನು ಬಳಸಿ ಬಹಳ ಪರಿಣಾಮಕಾರಿಯಾಗಿ ಕೊರೊನ ವೈರಸ್ ತಮ್ಮ ದೇಶದಲ್ಲಿ ಹರಡುವುದನ್ನು ನಿಯಂತ್ರಿಸಿದೆ.

ಈ ತಂತ್ರಜ್ಞಾನದ ಅಡಿಯಲ್ಲಿ ಮಾಡುವ ಕಣ್ಗಾವಲಿನ ಬಗ್ಗೆ, ಸರ್ಕಾರಗಳು ಜನರಿಗೆ ಸರಿಯಾದ ಮಾಹಿತಿ ಒದಗಿಸುವುದಿಲ್ಲ. ನಮಗೆ ಗೊತ್ತಾಗದೆ ನಮ್ಮ ದೇಹದಲ್ಲಿ ಆಗುವ ಸಣ್ಣ ಸಣ್ಣ ಬದಲಾವಣೆಗಳನ್ನು ಈ ಬಯೋಮೆಟ್ರಿಕ್ ಕಣ್ಗಾವಲು ಪತ್ತೆಹಚ್ಚುತ್ತದೆ. ವಾಹ್! ತಾಂತ್ರಿಕವಾಗಿ ನಾವೆಷ್ಟು ಮುಂದುವರೆದಿದ್ದೇವೆ ಎಂದೆನಿಸುತ್ತದೆ ಅಲ್ಲವೇ? ಇದೆ ತಂತ್ರಜ್ಞಾನ ನಮ್ಮ ಯೋಚನೆಗಳನ್ನೂ ಗುರುತಿಸಬಲ್ಲದು ಎಂದೆನಿಸಿದರೆ? ನಮ್ಮ ಸಿಟ್ಟು, ಖುಷಿ, ಆಲಸ್ಯ, ಪ್ರೀತಿ, ಅಸಹನೆ ಎಲ್ಲವೂ ಜ್ವರ, ತಲೆನೋವು, ನೆಗಡಿಯಯಂತೆಯೇ ತಂತ್ರಜ್ಞಾನಕ್ಕೆ ಬೇರೆಯಲ್ಲ. ಇವುಗಳನ್ನು ಗುರುತಿಸುವುದರಿಂದ ಆಗುವ ಅಡ್ಡಪರಿಣಾಮಗಳನ್ನು ಯೋಚಿಸಿ. ಉದಾಹರಣೆಗೆ ನಮ್ಮ ಫೋನ್ ಮೂಲಕ ನಾವು ಪದೇ ಪದೇ ಹುಡುಕುವ ವೆಬ್‌ಸೈಟ್‌ಗಳು, ನಾವು ಹೆಚ್ಚು ಬಾರಿ ತಡಕುವ ನ್ಯೂಸ್ ಲಿಂಕ್‌ಗಳು, ವಿಡಿಯೋಗಳು, ಮಾಹಿತಿಗಳು, ನಮ್ಮ ಆಸಕ್ತಿ, ನಮ್ಮ ಯೋಚನೆ, ನಮ್ಮ ಬದುಕು ಮತ್ತು ನಮ್ಮ ಬಗೆಗಿನ ಎಲ್ಲ ಅಂಶಗಳೂ ಈ ಮೂಲಕ ಸರ್ಕಾರದ ಗಮನಕ್ಕೆ ಬರುತ್ತದೆ! ಕೆಮ್ಮನ್ನು ಕಂಡುಹಿಡಿಯುವ ತಂತ್ರಜ್ಞಾನ ನಮ್ಮ ನಗುವನ್ನೂ ಕಂಡುಹಿಡಿಯಬಲ್ಲದು. ಒಟ್ಟಾರೆಯಾಗಿ ನಮ್ಮ ಬಗ್ಗೆ ನಮಗೆ ಗೊತ್ತಿರುವುದಕ್ಕಿಂತ ಹೆಚ್ಚಾಗಿ ಸರ್ಕಾರ ಗುರುತಿಸಿ ತಿಳಿದುಕೊಳ್ಳಬಹುದು.

ಇದನ್ನು ಓದಿ: ವಿಡಿಯೊ| ಮಿತಿ ಮೀರುತ್ತಿರುವ ಪೊಲೀಸರ ವರ್ತನೆ-ಕೊರೊನಾ ವಾರಿಯರ್‌ ಸ್ವಯಂಸೇವಕನ ಕೈ ಮುರಿದ ದಾವಣಗೆರೆ ಪೊಲೀಸ್‌

ಈ ಎಲ್ಲ ಮಾಹಿತಿಗಳನ್ನು ಸರ್ಕಾರ ಯಾವುದೇ ರೀತಿಯಲ್ಲಿ ಉಪಯೋಗಿಸಿಕೊಳ್ಳಬಹುದು. ತಂತ್ರಜ್ಞಾನವೊಂದು ಸರ್ಕಾರದ ಪ್ರಬಲ ರಾಜಕೀಯ ಅಸ್ತ್ರವಾಗಬಹುದು. ವ್ಯಾಪಾರಿ ಸಂಸ್ಥೆಗಳೊಂದಿಗೆ ಒಡಂಬಡಿಕೆಗೆ ಬಂದರೆ, ನಮ್ಮೆಲ್ಲ ಮಾಹಿತಿಗಳು ವ್ಯಾಪಾರದ ಸರಕಾಗಬಹುದು. ಅಥವಾ ನಮ್ಮಿಂದಲೇ ಸಂಗ್ರಹಿಸಿದ ಈ ಮಾಹಿತಿಗಳು ನಮ್ಮನ್ನೇ ಬಂಧಿಸುವ ಬೇಲಿಯಾಗಬಹುದು. ನಮ್ಮ ದೇಶದಲ್ಲಿಯೂ ಕೇರಳ ಸರ್ಕಾರ ಕೋವಿಡ್-19 ಪ್ರಕರಣಗಳನ್ನು ಪತ್ತೆ ಹಚ್ಚಲು ಜಿಪಿಎಸ್ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದೆ. ಭಾರತ ಸರ್ಕಾರ ಕೂಡ ಆಪ್ ಮೂಲಕ ಈ ಪಿಡುಗನ್ನು ತಡೆಗಟ್ಟಲು ಮುಂದಾಗಿದೆ. ಸದ್ಯಕ್ಕೆ ಈ ಎಲ್ಲಾ ಹೆಜ್ಜೆಗಳು ನಮ್ಮ ಸುರಕ್ಷತೆಗೆ ಅಗತ್ಯವಿದ್ದ ಕ್ರಮಗಳಾಗಿದ್ದು, ಈ ಪಿಡುಗಿನಿಂದ ಮುಂದೊಮ್ಮೆ ಮುಕ್ತಿ ಹೊಂದಿದ ಮೇಲೆ ಈ ಕಣ್ಗಾವಲಿನ ಅವಶ್ಯಕತೆ ಮುಗಿದಿದೆ ಎಂದು ನಿಲ್ಲಿಸಬಹುದು ಎಂಬುದು ನಂಬಿಕೆಯ ಪ್ರಶ್ನೆ. ಇಂತಹ ಅಸಾಮಾನ್ಯ ಸಂದರ್ಭಗಳಲ್ಲಿ ಈ ಕ್ರಮಗಳನ್ನು ನಾಗರಿಕರು ಬೆಂಬಲಿಸಬೇಕು. ಆದರೆ ಈ ತಾತ್ಕಾಲಿಕ ವ್ಯವಸ್ಥೆ ಖಾಯಂ ಆಗದಂತೆ, ಪೂರ್ಣ ಪ್ರಮಾಣದಲ್ಲಿ ನಮ್ಮನ್ನು ಆವರಿಸದಂತೆ ಎಚ್ಚರ ವಹಿಸಬೇಕು. ಈ ಕ್ರಮಗಳ ಬಗ್ಗೆ ಸಂಪೂರ್ಣ ತಿಳುವಳಿಕೆ ಪಡೆಯುವುದು ನಾಗರಿಕರ ಕರ್ತವ್ಯ ಕೂಡ.

ಇದನ್ನು ಓದಿ: ಸರಕಾರದ ಬೇಜವಾಬ್ದಾರಿಯ ಸಾವುಗಳು ಕೊರೊನಾ ಸಾವುಗಳಿಗಿಂತಲೂ ಭೀಕರ: ಪಿ.ಸಾಯಿನಾಥ್

ಈಗಾಗಲೇ ಹೇಳಿದಂತೆ ಪ್ರಪಂಚದ ಅನೇಕ ದೇಶಗಳು ತಂತ್ರಜ್ಞಾನ ಕಣ್ಗಾವಲಿನ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಪ್ರಯತ್ನಿಸುತ್ತಿವೆ. ಭಾರತ ಕೂಡ ಮಿನಿಸ್ಟ್ರಿ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಶನ್ ಟೆಕ್ನಾಲಜಿ, ವ್ಯಕ್ತಿಗಳನ್ನು ಪತ್ತೆ ಹಚ್ಚುವ ಹಾಗು ಆತನ ಚಲನವಲನಗಳ ಮೇಲೆ ನಿಗಾ ಇರಿಸುವ ಆಪ್ ಒಂದನ್ನು ಅಭಿವೃದ್ಧಿ ಪಡಿಸಿ, ಅದರ ಮೂಲಕ ವಿಮಾನ, ರೈಲ್ವೆ ಮತ್ತಿತರ ಪ್ರವಾಸ ಮಾಹಿತಿಗಳನ್ನು ಪರಿಶೀಲಿಸಿ ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚಿ ನಿಗಾ ಇರಿಸುತ್ತಿದೆ. ಕೇರಳ ರಾಜ್ಯದಲ್ಲಿ ಟೆಲಿಫೋನ್ ದಾಖಲೆಗಳು, ಸಿಸಿಟಿವಿ ಮಾಹಿತಿ ಮತ್ತು ಜಿಪಿಎಸ್ ಮೂಲಕ ವಕ್ತಿಗಳ ಗುರುತುಗಳನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದೆ. ಕರ್ನಾಟಕ, ರಾಜಸ್ಥಾನ ಮೊದಲಾದ ರಾಜ್ಯಗಳು ಕೂಡ ತಮ್ಮ ರಾಜ್ಯದ ಸೋಂಕಿತರ ಮತ್ತು ಶಂಕಿತ ಕೋವಿಡ್ ವ್ಯಕ್ತಿಗಳ ಪಟ್ಟಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸುತ್ತಿವೆ.

ಜನರ ಖಾಸಗಿ ವಿಷಯಗಳನ್ನು ಗುರುತಿಸುವುದು, ಕಣ್ಗಾವಲಿನಲ್ಲಿ ಇಡುವುದು ಈ ಸಂಕಷ್ಟಕರ ಸಮಯದಲ್ಲಿ ಆರೋಗ್ಯದ ದೃಷ್ಟಿಯಿಂದ ಅನಿವಾರ್ಯವಾದರೂ, ಈ ವಿಷಮ ಪರಿಸ್ಥಿತಿಯಿಂದ ಹೊರಬಂದ ಮೇಲೆ ಆ ಮಾಹಿತಿಯ ಗತಿ? ಆಗಲೂ ಇದೇ ರೀತಿ ಮಾಹಿತಿಗಳನ್ನು ಕಲೆ ಹಾಕುವುದು ಅದನ್ನು ಬಳಕೆ ಮಾಡಿಕೊಳ್ಳುವುದು ಮುಂದುವರೆದರೆ ಅದು ನಾಗರಿಕರ ಖಾಸಗಿತನ ಮತ್ತು ಗೌಪ್ಯತೆಯ ಹರಣವಾದಂತೆ. ಈ ತುರ್ತು ಪರಿಸ್ಥಿತಿಯಲ್ಲಿ ಕಲೆಹಾಕಿದ ಮಾಹಿತಿಯನ್ನು ಸರ್ಕಾರ ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡುವುದಿಲ್ಲ ಎಂಬುದನ್ನು ನಾಗರಿಕರಿಗೆ ಮನವರಿಕೆ ಮಾಡಿಕೊಡುವುದು ಮುಖ್ಯ. ಸಂವಿಧಾನದಲ್ಲಿ ನಾಗರಿಕರ ಖಾಸಗಿತನ ಮತ್ತು ಗೌಪ್ಯತೆಯ ಹಕ್ಕಿನ ಬಗ್ಗೆ ಯಾವುದೇ ಉಲ್ಲೇಖವಿಲ್ಲದೆ ಇದ್ದರೂ, ಆರ್ಟಿಕಲ್ 21ರ ಪ್ರಕಾರ, ಬದುಕು ಮತ್ತು ಸ್ವಾತಂತ್ರ‍್ಯ ಮನುಷ್ಯನ ಮೂಲಭೂತ ಹಕ್ಕು. ಆ ನಿಟ್ಟಿನಲ್ಲಿ ಯಾವುದೇ ನಾಗರಿಕನ ಖಾಸಗಿ ಮಾಹಿತಿಯನ್ನು ಅವನ ಒಪ್ಪಿಗೆಯಿಲ್ಲದೆ ಉಪಯೋಗಿಸಿಕೊಳ್ಳುವುದು ವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ಮಾಡಿದಂತೆ. ರಾಷ್ಟ್ರೀಯ ವಿಪತ್ತಿನ ಸಂದರ್ಭದಲ್ಲಿ ನಿರ್ದಿಷ್ಟ ಕಾನೂನಿನಡಿ ಉಪಯೋಗಿಸಿಕೊಂಡರೂ (ಇದು ಕೂಡ ನಿರ್ಬಂಧಿತ ಉಪಯೋಗವೇ ಆಗಿರಬೇಕು) ಆ ಬಳಕೆ ಕೂಡ ಎಲ್ಲರೂ ಒಪ್ಪಿಕೊಳ್ಳುವ ರೀತಿಯದ್ದಾಗಿರಬೇಕು. ಮತ್ತದಕ್ಕೆ ಎಲ್ಲರ ಪರವಾನಗಿಯನ್ನೂ ಪಡೆಯಬೇಕು.

ಎಪಿಡೆಮಿಕ್ ಡಿಸೀಸ್ ಆಕ್ಟ್ 1897 ಹಾಗೂ ನ್ಯಾಷನಲ್ ಡಿಸಾಸ್ಟರ್ ಮ್ಯಾನೆಜ್ಮೆಂಟ್ ಆಕ್ಟ್ 2005ರ ಪ್ರಕಾರ ಸರ್ಕಾರವು ಎಲ್ಲ ತುರ್ತು ಕಾರ್ಯಗಳಿಗೆ ಕಾರ್ಯೋನ್ಮುಖವಾಗಿದ್ದು, ಅದಕ್ಕನುಗುಣವಾಗಿ ವ್ಯಕ್ತಿಗಳ ಖಾಸಗಿ ಮಾಹಿತಿಗಳನ್ನು ಉಪಯೋಗಿಸಿಕೊಳ್ಳುತ್ತದೆ. ಖಾಸಗಿ ಮಾಹಿತಿಗಳ ರಕ್ಷಣೆಯ ಬಿಲ್ ನಮ್ಮ ದೇಶದಲ್ಲಿ ಇನ್ನೂ ಕಾನೂನಾಗಿ ಪರಿವರ್ತನೆಯಾಗದ ಕಾರಣ ಅತೀ ಅಗತ್ಯ ಮಾಹಿತಿಗಳನ್ನಷ್ಟೇ ಕಲೆ ಹಾಕಬೇಕು ಹಾಗೂ ಅದರ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಸಾಂಕ್ರಾಮಿಕ ನಿವಾರಣೆಯಾದ ಬಳಿಕ ಇಂತಹ ಪ್ರಕ್ರಿಯೆಗಳನ್ನು ನಿಲ್ಲಿಸಿ, ಪ್ರತಿ ವ್ಯಕ್ತಿಯ ಖಾಸಗಿತನವನ್ನು ಗೌರವಿಸಿ ಉಳಿಸುವುದು ಪ್ರಜಾಪ್ರಭುತ್ವದಲ್ಲಿ ಮುಖ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...