Homeಕರ್ನಾಟಕಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

- Advertisement -
- Advertisement -

ಕೊರೊನಾ ಬಗ್ಗೆ ಇರುವ ಹಾಗೂ ಹರಡುತ್ತಿರುವ ಸುಳ್ಳು ಸುದ್ದಿಗಳಾಚೆಗೆ ಕರ್ನಾಟಕದ ಕೊರೊನಾ ಸೋಂಕಿನಿಂದ ಗುಣಮುಖರಾದ ಮೊದಲ ವ್ಯಕ್ತಿ ವೆಂಕಟ್ ಪಿ.ಕೆ. ಅವರು ತನ್ನ ಮನದ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಜೊತೆಗೆ ಕೊರೊನ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳ ಬಗ್ಗೆ ಕೂಡಾ ಜಾಗೃತರಾಗುವಂತೆ ಹೇಳಿ ಸೋಂಕು ಬಂದರೂ ಭಯಪಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಅವರೇ ಹೇಳಿಕೊಂಡಿರುವಂತೆ ವೆಂಕಟ್ ಪಿ.ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ. ಕೊರೊನಾ ವೈರಸ್ ಸೋಂಕಿದ್ದರಿಂದ ಇವರು ರಾಜಿವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಕೆಲವು ದಿನಗಳಿದ್ದ ನಂತರ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಹಲವಾರು ಜನ ಇವರೊಂದಿಗೆ, ನಿಮಗೆ ಹೇಗೆ ಕೊರೊನಾ ಬಂತು ಎಂದು ಕೇಳಿದ್ದರಿಂದ ಹಾಗೂ ಸೋಂಕಿನ ಬಗ್ಗೆ ಹಲವಾರು ತಪ್ಪು ಅಭಿಪ್ರಾಯಗಳು ಇರುವುದರಿಂದ ಈ ವಿಡಿಯೊ ಮಾಡುತ್ತಿದ್ದೇನೆ ಎಂದು ವೆಂಕಟ್ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ನಾನು ಮಾರ್ಚ್ ಮೊದಲ ವಾರದಲ್ಲಿ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದೆ. ನಾನು ಆದಷ್ಟು ಜಾಗರೂಕನಾಗಿದ್ದರೂ ವಿಮಾನ ನಿಲ್ದಾಣದಲ್ಲಿ ಸೋಂಕಿರುವವರು ಬಳಸಿದ ಬಾತ್‌ರೂಮಿನಿಂದ, ಸೆಕ್ಯೂರಿಟಿಗಾಗಿ ಬಳಸುವ ಬೆರಳಚ್ಚು ಸ್ಕಾನ್‌ನಿಂದ ಅಥವಾ ಸೋಂಕಿರುವವರು ಉಸಿರಾಡಿದ ಗಾಳಿ ಕುಡಿದಿದ್ದರಿಂದಲೂ ಇದು ನನಗೆ ಬಂದಿರಬಹುದು” ಎಂದು ವೆಂಕಟ್ ಹೇಳುತ್ತಾರೆ.

ವೆಂಕಟ್ ಹೇಳುವಂತೆ “ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿರುವಾಗಲೆ ನನಗೆ ಜ್ವರ ಶುರುವಾಗಿತ್ತು. ನಾನು ಮೊದಲಿಗೆ ಸಾಧಾರಣ ಜ್ವರ ಆಗಿರಬಹುದು ಎಂದು ಭಾವಿಸಿ ಕೆಲವು ಮಾತ್ರೆಗಳನ್ನು ತೆಗೆದುಕೊಂಡೆ. ನಾನು ವಾಪಾಸು ಬಂದು ಏರ್‌ಪೋರ್ಟಿನಲ್ಲಿ ನನ್ನ ಜ್ವರದ ಬಗ್ಗೆ ಹೇಳಿದೆ. ಏರ್‌ಪೋರ್ಟಿನ ಡಾಕ್ಟರುಗಳ ಕೈಯ್ಯಲ್ಲಿ ಸಾಕಷ್ಟು ವೈದ್ಯಕೀಯ ಸಲಕರಣೆಗಳು ಇರಲಿಲ್ಲ, ಯಾಕೆಂದರೆ ಅವರಿನ್ನೂ ಅದರ ತಯಾರಿಯಲ್ಲಿದ್ದರು.” ಎನ್ನುತ್ತಾರೆ.

“ಅಲ್ಲಿಂದ ಕ್ಲಿಯರೆನ್ಸ್ ಪಡೆದು ಮನೆಗೆ ಬಂದೆನಾದರೂ ನನ್ನ ಹೆಂಡತಿಯೊಂದಿಗೆ ನನಗೆ ಏನೋ ಆಗುತ್ತಿದೆ, ನನ್ನಿಂದ ಅಂತರದಲ್ಲಿರುವಂತೆ ಹೇಳಿ ನನ್ನ ಮನೆಯ ಮಹಡಿಗೆ ಹೋದೆ. ನಂತರ ನಾನು ರಾಜೀವ್ ಗಾಂಧಿ ಆಸ್ಪತ್ರೆಗೆ ಹೋಗಿ ಪರೀಕ್ಷೆಗೆ ಒಳಗಾದೆ. ಪರೀಕ್ಷೆಗೊಳಗಾದ ಮರುದಿನ ಮಧ್ಯಾನ್ಹ ನನ್ನಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗುವಂತೆ ಆಸ್ಪತ್ರೆಯಿಂದ ಫೋನ್ ಬಂತು. ನಾನು ತಕ್ಷಣವೇ ಮನೆಯಿಂದ ಹೊರಟು ಆಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾದೆ” ಎಂದು ವೆಂಕಟ್ ಹೇಳುತ್ತರೆ.

ವಿಡಿಯೋ ನೋಡಿ

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

Posted by Naanu Gauri on Thursday, April 2, 2020

“ಜ್ವರವು ಮುಂಜಾನೆ 102 ಡಿಗ್ರಿ ಹಾಗೂ ಹಗಲು ಹೊತ್ತು 100 ಡಿಗ್ರಿ ಆಗಿರುತ್ತಿತ್ತು. ನನಗೆ ಮೊದಲಿಗೆ ಅನಿಸಿದ್ದು ನನ್ನ ದೇಶಕ್ಕೆ ಕಟ್ಟಿದ್ದ ತೆರಿಗೆ ಸಾರ್ಥಕ ಆಗಿದೆ ಎಂದು. ಯಾಕೆಂದರೆ ಅಷ್ಟೊಂದು ಸೇವಾ ಮನೋಭಾವದ ವೈದ್ಯರು ಅಲ್ಲಿದ್ದರು. ಸಾಮಾನ್ಯಾಗಿ ಆಂಟಿಬಯಾಟಿಕ್ಸ್ ಕೊಡುತ್ತಿದ್ದರು. ಸುಸ್ತಾದಾಗ ಐವಿ ಕೇಳಿ ಐವಿಯನ್ನು ಹಾಕುತ್ತಿದ್ದೆ. ಎರಡು ವಾರಗಳವರೆಗೂ ಜ್ವರ ಇತ್ತು. ಸಾಮಾನ್ಯವಾಗಿ ನನಗೆ ಇಷ್ಟು ದಿನದ ಜ್ವರದ ಅನುಭವವೇ ಆಗಿರಲಿಲ್ಲ. ಎರಡು ವಾರಗಳ ನಂತರ ನನ್ನ ಜ್ವರ ನಿಂತಿತು. ಜ್ವರ ಬಿಟ್ಟು ಐದು ಪರೀಕ್ಷೆಗಳು ನಡೆಸಿದ ನಂತರ ಕೊರೊನಾ ನೆಗೆಟಿವ್ ಆಗಿರುವುದು ತಿಳಿದು ಬಂತು” ಎಂದು ಅವರು ಹೇಳುತ್ತಾರೆ.

ಸ್ವತಃ ವೆಂಕಟ್ ಕೊರೊನವನ್ನು ತಡೆಯಬಹುದಾಗಿದೆ ಎಂದು ಧೈರ್ಯ ತುಂಬುತ್ತಾರೆ. “ಸೋಂಕಿನ ಬಗ್ಗೆ ಹಲವಾರು ಸುಳ್ಳು ಸುದ್ದಿಗಳು ಹರಡುತ್ತಿವೆ. ಇದನ್ನು ಮೂರು ದಾರಿಯಲ್ಲಿ ತಡೆಗಟ್ಟಬಹುದಾಗಿದೆ. ಮೊದಲನೆಯದಾಗಿ ಮುಖಕ್ಕೆ ಮಾಸ್ಕ್ ಹಾಕುವುದರ ಮೂಲಕ ಇನ್ನೊಬ್ಬರಿಗೆ ರೋಗ ಹರಡದಿರುವಂತೆ ಮಾಡಬಹುದು. ಎರಡನೆಯದಾಗಿ ನಿಮ್ಮ ಕೈಗಳನ್ನು ತೊಳೆಯುತ್ತಿರಿ ಹಾಗೂ ನಿಮ್ಮ ಮುಖವನ್ನು ಕೈ ತೊಳೆಯದೆ ಮುಟ್ಟದಿರಿ. ಮೂರನೆಯದಾಗಿ ನಿಮ್ಮ ವಸ್ತುಗಳನ್ನು ಪ್ರತ್ಯೇಕವಾಗಿ ಇಟ್ಟು ಬಿಡಿ” ಎಂದು ವೆಂಕಟ್ ಹೇಳುತ್ತಾರೆ.

ಈ ರೋಗವು ತಡೆಗಟ್ಟುವಂತದ್ದಾಗಿದೆ ಎನ್ನುವ ವೆಂಕಟ್, “ನೀವು ಅದರಿಂದ ಹೊರಗೆ ಬರಬಹುದಾಗಿದೆ. ಸೋಂಕಿತರಿಗೆ ನನ್ನ ಶುಭ ಹಾರೈಕೆ ಇರುತ್ತದೆ. ಭಯದಿಂದ ದೂರವಿರಿ, ಇದು ನಿಮಗೆ ಬರದೇ ಇರಲಿ, ಒಂದು ವೇಳೆ ಬಂದರೂ ಅದನ್ನು ತಡೆಗಟ್ಟಬಹುದಾಗಿದೆ” ಎಂದು ಅವರ ತನ್ನ ವಿಡಿಯೊದಲ್ಲಿ ಧೈರ್ಯ ಹೇಳುತ್ತಾರೆ.

ವೆಂಕಟ್‌ರವರು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಹಾಕಿಕೊಂಡಿರುವ ವಿಡಿಯೋ ವೈರಲ್‌ ಆಗಿದ್ದು ಬಹಳಷ್ಟು ಜನ ಷೇರ್‌ ಮಾಡಿದ್ದಾರೆ. ಹಾಗೆಯೇ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನ ಸಾಂಕ್ರಾಮಿಕ ಬಿಕ್ಕಟ್ಟಿನ ಬೆಂಕಿಗೆ ಪುಳ್ಳೆಯಿಟ್ಟ ವೈಜ್ಞಾನಿಕ ಮನೋಭಾವದ ಅಭಾವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...