Homeಕರ್ನಾಟಕಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

- Advertisement -
- Advertisement -

ಕೊರೊನಾ ಬಗ್ಗೆ ಇರುವ ಹಾಗೂ ಹರಡುತ್ತಿರುವ ಸುಳ್ಳು ಸುದ್ದಿಗಳಾಚೆಗೆ ಕರ್ನಾಟಕದ ಕೊರೊನಾ ಸೋಂಕಿನಿಂದ ಗುಣಮುಖರಾದ ಮೊದಲ ವ್ಯಕ್ತಿ ವೆಂಕಟ್ ಪಿ.ಕೆ. ಅವರು ತನ್ನ ಮನದ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಜೊತೆಗೆ ಕೊರೊನ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳ ಬಗ್ಗೆ ಕೂಡಾ ಜಾಗೃತರಾಗುವಂತೆ ಹೇಳಿ ಸೋಂಕು ಬಂದರೂ ಭಯಪಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಅವರೇ ಹೇಳಿಕೊಂಡಿರುವಂತೆ ವೆಂಕಟ್ ಪಿ.ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ. ಕೊರೊನಾ ವೈರಸ್ ಸೋಂಕಿದ್ದರಿಂದ ಇವರು ರಾಜಿವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಕೆಲವು ದಿನಗಳಿದ್ದ ನಂತರ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಹಲವಾರು ಜನ ಇವರೊಂದಿಗೆ, ನಿಮಗೆ ಹೇಗೆ ಕೊರೊನಾ ಬಂತು ಎಂದು ಕೇಳಿದ್ದರಿಂದ ಹಾಗೂ ಸೋಂಕಿನ ಬಗ್ಗೆ ಹಲವಾರು ತಪ್ಪು ಅಭಿಪ್ರಾಯಗಳು ಇರುವುದರಿಂದ ಈ ವಿಡಿಯೊ ಮಾಡುತ್ತಿದ್ದೇನೆ ಎಂದು ವೆಂಕಟ್ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ನಾನು ಮಾರ್ಚ್ ಮೊದಲ ವಾರದಲ್ಲಿ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದೆ. ನಾನು ಆದಷ್ಟು ಜಾಗರೂಕನಾಗಿದ್ದರೂ ವಿಮಾನ ನಿಲ್ದಾಣದಲ್ಲಿ ಸೋಂಕಿರುವವರು ಬಳಸಿದ ಬಾತ್‌ರೂಮಿನಿಂದ, ಸೆಕ್ಯೂರಿಟಿಗಾಗಿ ಬಳಸುವ ಬೆರಳಚ್ಚು ಸ್ಕಾನ್‌ನಿಂದ ಅಥವಾ ಸೋಂಕಿರುವವರು ಉಸಿರಾಡಿದ ಗಾಳಿ ಕುಡಿದಿದ್ದರಿಂದಲೂ ಇದು ನನಗೆ ಬಂದಿರಬಹುದು” ಎಂದು ವೆಂಕಟ್ ಹೇಳುತ್ತಾರೆ.

ವೆಂಕಟ್ ಹೇಳುವಂತೆ “ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿರುವಾಗಲೆ ನನಗೆ ಜ್ವರ ಶುರುವಾಗಿತ್ತು. ನಾನು ಮೊದಲಿಗೆ ಸಾಧಾರಣ ಜ್ವರ ಆಗಿರಬಹುದು ಎಂದು ಭಾವಿಸಿ ಕೆಲವು ಮಾತ್ರೆಗಳನ್ನು ತೆಗೆದುಕೊಂಡೆ. ನಾನು ವಾಪಾಸು ಬಂದು ಏರ್‌ಪೋರ್ಟಿನಲ್ಲಿ ನನ್ನ ಜ್ವರದ ಬಗ್ಗೆ ಹೇಳಿದೆ. ಏರ್‌ಪೋರ್ಟಿನ ಡಾಕ್ಟರುಗಳ ಕೈಯ್ಯಲ್ಲಿ ಸಾಕಷ್ಟು ವೈದ್ಯಕೀಯ ಸಲಕರಣೆಗಳು ಇರಲಿಲ್ಲ, ಯಾಕೆಂದರೆ ಅವರಿನ್ನೂ ಅದರ ತಯಾರಿಯಲ್ಲಿದ್ದರು.” ಎನ್ನುತ್ತಾರೆ.

“ಅಲ್ಲಿಂದ ಕ್ಲಿಯರೆನ್ಸ್ ಪಡೆದು ಮನೆಗೆ ಬಂದೆನಾದರೂ ನನ್ನ ಹೆಂಡತಿಯೊಂದಿಗೆ ನನಗೆ ಏನೋ ಆಗುತ್ತಿದೆ, ನನ್ನಿಂದ ಅಂತರದಲ್ಲಿರುವಂತೆ ಹೇಳಿ ನನ್ನ ಮನೆಯ ಮಹಡಿಗೆ ಹೋದೆ. ನಂತರ ನಾನು ರಾಜೀವ್ ಗಾಂಧಿ ಆಸ್ಪತ್ರೆಗೆ ಹೋಗಿ ಪರೀಕ್ಷೆಗೆ ಒಳಗಾದೆ. ಪರೀಕ್ಷೆಗೊಳಗಾದ ಮರುದಿನ ಮಧ್ಯಾನ್ಹ ನನ್ನಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗುವಂತೆ ಆಸ್ಪತ್ರೆಯಿಂದ ಫೋನ್ ಬಂತು. ನಾನು ತಕ್ಷಣವೇ ಮನೆಯಿಂದ ಹೊರಟು ಆಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾದೆ” ಎಂದು ವೆಂಕಟ್ ಹೇಳುತ್ತರೆ.

ವಿಡಿಯೋ ನೋಡಿ

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

Posted by Naanu Gauri on Thursday, April 2, 2020

“ಜ್ವರವು ಮುಂಜಾನೆ 102 ಡಿಗ್ರಿ ಹಾಗೂ ಹಗಲು ಹೊತ್ತು 100 ಡಿಗ್ರಿ ಆಗಿರುತ್ತಿತ್ತು. ನನಗೆ ಮೊದಲಿಗೆ ಅನಿಸಿದ್ದು ನನ್ನ ದೇಶಕ್ಕೆ ಕಟ್ಟಿದ್ದ ತೆರಿಗೆ ಸಾರ್ಥಕ ಆಗಿದೆ ಎಂದು. ಯಾಕೆಂದರೆ ಅಷ್ಟೊಂದು ಸೇವಾ ಮನೋಭಾವದ ವೈದ್ಯರು ಅಲ್ಲಿದ್ದರು. ಸಾಮಾನ್ಯಾಗಿ ಆಂಟಿಬಯಾಟಿಕ್ಸ್ ಕೊಡುತ್ತಿದ್ದರು. ಸುಸ್ತಾದಾಗ ಐವಿ ಕೇಳಿ ಐವಿಯನ್ನು ಹಾಕುತ್ತಿದ್ದೆ. ಎರಡು ವಾರಗಳವರೆಗೂ ಜ್ವರ ಇತ್ತು. ಸಾಮಾನ್ಯವಾಗಿ ನನಗೆ ಇಷ್ಟು ದಿನದ ಜ್ವರದ ಅನುಭವವೇ ಆಗಿರಲಿಲ್ಲ. ಎರಡು ವಾರಗಳ ನಂತರ ನನ್ನ ಜ್ವರ ನಿಂತಿತು. ಜ್ವರ ಬಿಟ್ಟು ಐದು ಪರೀಕ್ಷೆಗಳು ನಡೆಸಿದ ನಂತರ ಕೊರೊನಾ ನೆಗೆಟಿವ್ ಆಗಿರುವುದು ತಿಳಿದು ಬಂತು” ಎಂದು ಅವರು ಹೇಳುತ್ತಾರೆ.

ಸ್ವತಃ ವೆಂಕಟ್ ಕೊರೊನವನ್ನು ತಡೆಯಬಹುದಾಗಿದೆ ಎಂದು ಧೈರ್ಯ ತುಂಬುತ್ತಾರೆ. “ಸೋಂಕಿನ ಬಗ್ಗೆ ಹಲವಾರು ಸುಳ್ಳು ಸುದ್ದಿಗಳು ಹರಡುತ್ತಿವೆ. ಇದನ್ನು ಮೂರು ದಾರಿಯಲ್ಲಿ ತಡೆಗಟ್ಟಬಹುದಾಗಿದೆ. ಮೊದಲನೆಯದಾಗಿ ಮುಖಕ್ಕೆ ಮಾಸ್ಕ್ ಹಾಕುವುದರ ಮೂಲಕ ಇನ್ನೊಬ್ಬರಿಗೆ ರೋಗ ಹರಡದಿರುವಂತೆ ಮಾಡಬಹುದು. ಎರಡನೆಯದಾಗಿ ನಿಮ್ಮ ಕೈಗಳನ್ನು ತೊಳೆಯುತ್ತಿರಿ ಹಾಗೂ ನಿಮ್ಮ ಮುಖವನ್ನು ಕೈ ತೊಳೆಯದೆ ಮುಟ್ಟದಿರಿ. ಮೂರನೆಯದಾಗಿ ನಿಮ್ಮ ವಸ್ತುಗಳನ್ನು ಪ್ರತ್ಯೇಕವಾಗಿ ಇಟ್ಟು ಬಿಡಿ” ಎಂದು ವೆಂಕಟ್ ಹೇಳುತ್ತಾರೆ.

ಈ ರೋಗವು ತಡೆಗಟ್ಟುವಂತದ್ದಾಗಿದೆ ಎನ್ನುವ ವೆಂಕಟ್, “ನೀವು ಅದರಿಂದ ಹೊರಗೆ ಬರಬಹುದಾಗಿದೆ. ಸೋಂಕಿತರಿಗೆ ನನ್ನ ಶುಭ ಹಾರೈಕೆ ಇರುತ್ತದೆ. ಭಯದಿಂದ ದೂರವಿರಿ, ಇದು ನಿಮಗೆ ಬರದೇ ಇರಲಿ, ಒಂದು ವೇಳೆ ಬಂದರೂ ಅದನ್ನು ತಡೆಗಟ್ಟಬಹುದಾಗಿದೆ” ಎಂದು ಅವರ ತನ್ನ ವಿಡಿಯೊದಲ್ಲಿ ಧೈರ್ಯ ಹೇಳುತ್ತಾರೆ.

ವೆಂಕಟ್‌ರವರು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಹಾಕಿಕೊಂಡಿರುವ ವಿಡಿಯೋ ವೈರಲ್‌ ಆಗಿದ್ದು ಬಹಳಷ್ಟು ಜನ ಷೇರ್‌ ಮಾಡಿದ್ದಾರೆ. ಹಾಗೆಯೇ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನ ಸಾಂಕ್ರಾಮಿಕ ಬಿಕ್ಕಟ್ಟಿನ ಬೆಂಕಿಗೆ ಪುಳ್ಳೆಯಿಟ್ಟ ವೈಜ್ಞಾನಿಕ ಮನೋಭಾವದ ಅಭಾವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...