Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...