Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...