Homeಮುಖಪುಟನಿರ್ಭಯ ಹಂತಕರನ್ನು ನೇಣಿಗೇರಿಸುವಾಗ ನೆನಪಾದಳು ‘ಧರ್ಮಸ್ಥಳದ ನಿರ್ಭಯ’

ನಿರ್ಭಯ ಹಂತಕರನ್ನು ನೇಣಿಗೇರಿಸುವಾಗ ನೆನಪಾದಳು ‘ಧರ್ಮಸ್ಥಳದ ನಿರ್ಭಯ’

ಧರ್ಮಸ್ಥಳದ ನಿರ್ಭಯಳಿಗೆ ನ್ಯಾಯ ಸಿಗುವುದು ಸುಲಭವಲ್ಲ!! ನ್ಯಾಯ ದೇವತೆಯನ್ನೇ ಗಲಿಬಿಲಿಗೊಳಿಸುವ ಪವಾಡ ಶಕ್ತಿ ಧರ್ಮಸ್ಥಳದ ಧರ್ಮ-ದೇವರ ಯಜಮಾನರಿಗಿದೆಯೆಂದೇ ಕರಾವಳಿಗರು ಮಾತನಾಡಿಕೊಳ್ಳುತ್ತಿದ್ದಾರೆ.

- Advertisement -
- Advertisement -

ಭರತಖಂಡವನ್ನೇ ಅಖಂಡವಾಗಿ ಬೆಚ್ಚಿಬೀಳಿಸಿದ ನಿರ್ಭಯಾ ಪ್ರಕರಣದ ಪಾತಕಿಗಳನ್ನು ಗಲ್ಲಿಗೇರಿಸಲಾಗಿದೆ. ಅಮಾಯಕ ಹುಡುಗಿಯ ಮೇಲೆ ಬರ್ಬರ ಲೈಂಗಿಕ ದಾಳಿ ನಡೆಸಿ ಕೊಂದು ಹಾಕಿದ್ದ ಪಾತಕಿಗಳು ಪ್ರಭಾವಿಗಳಾಗಿರಲಿಲ್ಲ, ಅಧಿಕಾರಸ್ಥರ ವಂಶಜರೂ ಆಗಿರಲಿಲ್ಲ. ಬಹುಷಃ ಈ ಕಾರಣದಿಂದಲೇ ಸದರಿ ರೇಪ್ ಅಂಡ್ ಮರ್ಡರ್ ಕೇಸ್‌ನ ತನಿಖೆಯಲ್ಲಿ ದೊಡ್ಡ ಅಡ್ಡಿ ಎದುರಾಗಿರಲಿಲ್ಲ. ಅಂತಿಮವಾಗಿ ನ್ಯಾಯಾಲಯಗಳೂ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನೇ ವಿಧಿಸಿದವು. ಅದು ಮೊನ್ನೆ ಜಾರಿಯೂ ಆಯಿತು. ಈ ಹೊತ್ತಲ್ಲಿ ನಿರ್ಭಯಳಷ್ಟೇ ಕ್ರೂರವಾಗಿ ಅತ್ಯಾಚಾರ ಹತ್ಯೆಗೀಡಾದ ದಕ್ಷಿಣ ಕನ್ನಡದ ಧರ್ಮಸ್ಥಳದ ’ನಿರ್ಭಯ’ ಗೌಡ ಎಂಬ ಪಾಪದ ವಿದ್ಯಾರ್ಥಿನಿ ಕರಾವಳಿಗರಿಗೆ ನೆನಪಾಗುತ್ತಿದ್ದಾಳೆ!!

’ನಿರ್ಭಯಳನ್ನು ಅತ್ಯಾಚಾರವೆಸಗಿ ಸಾಯಿಸಿರುವ ಸಂಶಯ ದೇವದೂತ ಪ್ರಭಾವಳಿಯ ಪರಿವಾರದ ಮೇಲಿದೆ. ಈ ಕುಟುಂಬದ ಯಜಮಾನ ಸಾಕ್ಷಾತ್ ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಸರ್ಕಾರಗಳ ನಡೆಸುವ ಅಷ್ಟೂ ಅಧಿಕಾರಸ್ಥರನ್ನು ಕ್ಷಣಮಾತ್ರದಲ್ಲಿ ಸಂಪರ್ಕಿಸಬಹುದ ಸರ್ವಶಕ್ತ!! ಹೀಗಾಗಿಯೇ ನ್ಯಾಯದೇವತೆ ಎಂಬ ಪ್ರತೀತಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಡೆದ ಪಾತಕ ಪ್ರಕರಣ ನ್ಯಾಯದ ಪರಿಧಿಗೆ ಒಳಪಡುತ್ತಲೇ ಇಲ್ಲವೆಂಬ ಚರ್ಚೆ ಇವತ್ತಿಗೂ ನಡೆಯುತ್ತಿದೆ!!. ಕಾಲೇಜಿನಿಂದ ಮನೆಗೆ ಹೋಗುವಾಗ ಉಜಿರೆ-ಧರ್ಮಸ್ಥಳ ಹೆದ್ದಾರಿಯಲ್ಲಿ ಹಾಡುಹಗಲೇ ಅಪಹರಿಸಲ್ಪಟ್ಟ ಹುಡುಗಿ ಕಣ್ಮರೆಯಾದ ಕ್ಷಣದಿಂದಲೇ ತನಿಖೆಯ ದಿಕ್ಕುತಪ್ಪಿಸುವ ವ್ಯವಸ್ಥಿತ ಸ್ಕೆಚ್ ಒಂದು ಕಾರ್ಯಾಚರಣೆ ನಾಜೂಕಾಗಿ ನಡೆಯುತ್ತಲೇ ಇದೆ. ಈ ಪ್ರಕರಣಕ್ಕೆ ನ್ಯಾಯ ಸಿಗುವ ಸಾಧ್ಯತೆ ದಿನಕಳೆದಂತೆ ಕಮ್ಮಿಯಾಗುತ್ತಲೇ ಇದೆ.

ದೆಹಲಿಯಲ್ಲಿ ನಿರ್ಭಯಾ ಅತ್ಯಾಚಾರ-ಕೊಲೆ ನಡೆದಿದ್ದು 2012ರ ಡಿಸೆಂಬರ್ 16ರಂದು ಅದಕ್ಕೂ ಎರಡು ಕಾಲು ತಿಂಗಳು ಮೊದಲು ಅಂದರೆ 2012 ಅಕ್ಟೋಬರ್ 8ರಂದು ಧರ್ಮಸ್ಥಳದ ನಿರ್ಭಯಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ಆಕೆಯ ಮನೆ ಹತ್ತಿರ ಕಾಡಿನಲ್ಲಿ ಎಸೆಯಲಾಗಿತ್ತು. ಆಕೆ ಕಾಣೆಯಾದಾಗ ರಾತ್ರಿಯಿಡೀ ಹುಡುಕಾಡಿದ ಕಾಡಿನಲ್ಲೆ ಬೆಳಿಗ್ಗೆ ಅತ್ಯಾಚಾರಗೊಂಡಿದ್ದ ದೇಹ ಕಂಡುಬಂದಿತ್ತು. ಆಕೆಯ ಮರ್ಮಾಂಗಕ್ಕೆ ಮಣ್ಣು ಹಾಕಿ ವೀರ್ಯ ಪರೀಕ್ಷೆ ವಿಫಲಗೊಳಿಸುವ ಯೋಜನೆ ಮಾಡಲಾಗಿತ್ತು. ಆ ರಾತ್ರಿ ಮಳೆಯಾಗಿತ್ತು, ಆದರೆ ಮೃತ ದೇಹದ ಹತ್ತಿರವೇ ಬಿದ್ದಿದ್ದ ಆಕೆಯ ಪಠ್ಯಪುಸ್ತಕ ಒಂಚೂರು ಒದ್ದೆಯಾಗಿರಲಿಲ್ಲ. ವ್ಯವಸ್ಥಿತವಾಗಿ ಸಾಕ್ಷ್ಯಗಳನ್ನು ನಾಶ ಮಾಡುವ ಶತಪ್ರಯತ್ನ ರೇಪಿಸ್ಟ್ ಗ್ಯಾಂಗ್ ಮಾಡಿತ್ತು.

ಉಜಿರೆ-ಧರ್ಮಸ್ಥಳದಲ್ಲಿ ಪ್ರತಿಭಟನೆಗಳು ಸರಣಿಯಾಗಿ ಭುಗಿಲೆದ್ದು ಇಡೀ ದಕ್ಷಿಣ ಕನ್ನಡಕ್ಕೆ ಹೋರಾಟದ ಕಿಚ್ಚು ವ್ಯಾಪಿಸಿತ್ತು. ಪ್ರತಿಭಟನಾಕಾರರ ಆಕ್ರೋಶ, ಅನುಮಾನ ಧರ್ಮ ವ್ಯಾಪಾರಿಯ ರಕ್ತಸಂಬಂಧಿ ಪುಂಡ ಹುಡುಗರ ಮೇಲೆ ಕೇಂದ್ರೀಕೃತವಾಗಿತ್ತು. ಜನರು ನ್ಯಾಯಕ್ಕಾಗಿ ಹೋರಾಡುತ್ತಿದ್ದರೆ ಪೋಲಿಸರು ಪ್ರಕರಣ ಹಳ್ಳ ಹಿಡಿಸಲು ಹವಣಿಸುತ್ತಿದ್ದರು. ಧರ್ಮಸ್ಥಳದ ಮಂಜುನಾಥ, ಧರ್ಮ ದೇವತೆ ಅಣ್ಣಪ್ಪ ಸ್ವಾಮಿ ಅಂಗಳದಲ್ಲಿ ಅಂಡೆಲೆಯುತ್ತಿದ್ದ ಮಾನಸಿಕ ಅಸ್ವಸ್ಥ ಸಂತೋಷ್‌ರಾವ್ ಹುಡುಗಿಯನ್ನು ಅಪಹರಿಸಿ ಕಾಡಿನಲ್ಲಿ ಅತ್ಯಾಚಾರ ನಡೆಸಿದ್ದಾನೆಂದು ಕತೆ ಕಟ್ಟಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿಯೂ ದೈವ ಸ್ವರೂಪಿ ಎಂದೇ ಧರ್ಮಸ್ಥಳದ ಶ್ರದ್ಧಾಳುಗಳು ನಂಬುವ ವೀರೇಂದ್ರ ಹೆಗ್ಗಡೆ ಪರಿವಾರದ ಉದಯ ಜೈನ್, ಮಲ್ಲಿಕ್ ಜೈನ್ ಮತ್ತು ಆಶ್ರಿತ್ ಜೈನ್ ಎಂಬ ನವ ತರುಣರು ಸಂತೋಷ್‌ರಾವ್‌ನೇ ಅತ್ಯಾಚಾರಿ ಎಂದು ತೀರ್ಪು ಕೊಟ್ಟು ಪೊಲೀಸರಿಗೆ ಹಿಡಿದು ಕೊಟ್ಟಿದ್ದರು! ಇಲ್ಲಿ ಅಡಗಿದೆ ನಿರ್ಭಯಳ ರೇಪ್ ಆಂಡ್ ಮರ್ಡರ್ ಮಿಸ್ಟರಿ!!

ಧರ್ಮಸ್ಥಳ ದೇವರ ದೊರೆಗಳ ಪರಿವಾರದ ಮೇಲಿದ್ದ ಜನತೆಯ ಶಂಕೆ ಬಲವಾಯಿತು. ಧರ್ಮಸ್ಥಳದಲ್ಲಿ ಅಸಂಖ್ಯಾ ಹೆಣ್ಣು ಜೀವಗಳ ಅಸಹಜ ಸಾವು ಸಂಭವಿಸುತ್ತಿರುವ ಪುಕಾರುಗಳು ಎದ್ದವು. ಪೊಲೀಸರೇ ಕೊಟ್ಟ ಮಾಹಿತಿಯಂತೆ ನಿರ್ಭಯಳಿಗಿಂತ ಮೊದಲು ದೇವ ಸನ್ನಿಧಿಯಲ್ಲಿ ನೂರಾರು ಹೆಣ್ಣು ಬಲಿ-ಬಲಾತ್ಕಾರ ನಡೆದಿರುವುದು ಹೊರಗೆ ಬಂದಿತು. ಸಿಬಿಐನಿಂದಲೇ ನಿರ್ಭಯ ಅತ್ಯಾಚಾರದ ತನಿಖೆ ನಡೆಯಬೇಕೆಂಬ ಬೇಡಿಕೆಯನ್ನು ಪ್ರತಿಭಟನಾಕಾರರು ಇಟ್ಟರು. ಸ್ಥಳೀಯ ಪೊಲೀಸರು ನೈಜ ಅಪರಾಧಿಗಳನ್ನು ರಕ್ಷಿಸಲು ನಾಟಕ ನಡೆಸುತ್ತಿದ್ದಾರೆಂಬ ಅನಿಸಿಕೆ ಜನರದ್ದಾಗಿತ್ತು. ಕೊನೆಗೆ ಸರ್ಕಾರವು ಸಿಬಿಐಗೆ ಸೌಜನ್ಯ ಪ್ರಕರಣವನ್ನು ಹಸ್ತಾಂತರಿಸಬೇಕಾಗಿ ಬಂತು. ಆದರೆ ಸಿಬಿಐ ಸಹ ಪ್ರಾಮಾಣಿಕ ತನಿಖೆ ನಡೆಸಲೇ ಇಲ್ಲ. ಸ್ಥಳೀಯ ಪೊಲೀಸರ ತನಿಖೆ ಜಾಡಿನಲ್ಲೇ ಸಾಗಿದ ಸಿಬಿಐ ಶೂರರು ಅಪರಾಧಿಗಳು ತಪ್ಪಿಸಿಕೊಳ್ಳಲು ಅನುಕೂಲವಾಗುವಂತ “ತನಿಖೆ” ತಂತ್ರ ನಡೆಸಿತು.

2017ರಲ್ಲಿ ಸಿಬಿಐನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿತ್ತು. ಸಿಬಿಐ ವೈಫಲ್ಯವನ್ನು ನ್ಯಾಯಾಧೀಶೆ ಬಿ.ಎಸ್. ರೇಖಾ ಎತ್ತಿ ತೋರಿಸಿದರು. ಸರಿಯಾಗಿ ಯಾಕೆ ತನಿಖೆ ನಡೆಸಿಲ್ಲವೆಂದು ಕಟುವಾಗಿ ಸಿಬಿಐಗೆ ಪ್ರಶ್ನಿಸಿದ್ದರು. ವೈದ್ಯರುಗಳ ಪ್ರಕಾರ ಅರೆಹುಚ್ಚ ಸಂತೋಷ್ ರಾವ್‌ಗೆ ಲೈಂಗಿಕ ಸಾಮರ್ಥ್ಯವೇ ಇಲ್ಲ. ವೈಜ್ಞಾನಿಕ ವಿವರಗಳಂತೆ ಸೌಜನ್ಯಳ ಮೃತದೇಹದಲ್ಲಿ ಸಿಕ್ಕ ಕೂದಲೂ ಸಂತೋಷ್ ರಾವ್‌ನದ್ದಾಗಿರಲಿಲ್ಲ. ವೀರ್ಯ ಸಂಗ್ರಹಿಸದಿರುವುದು ಸೇರಿದಂತೆ ಹಲವು ಲೋಪ-ದೋಷಗಳ ಬಗ್ಗೆ ನ್ಯಾಯಾಧೀಶರು ಸಿಬಿಐ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. ದೇವ ಪರಿವಾರದ ಜೈನ್‌ಗಳನ್ನು ಸಿಬಿಐ ನಿಷ್ಠುರ ತನಿಖೆಗೆ ಒಳಪಡಿಸಿರಲೇ ಇಲ್ಲ.

ನಿರ್ಭಯಳ ತಂದೆ ಚಂದಪ್ಪಗೌಡ ತನಗೆ ಉದಯ್ ಜೈನ್, ಮಲ್ಲಿಕ್ ಜೈನ್ ಮತ್ತು ಆಶ್ರಿತ್ ಜೈನ್ ಮೇಲೆ ಬಲವಾದ ಅನುಮಾನವಿದೆ ಎಂದು ಹೇಳಿದ್ದರು. ಸಿಬಿಐ ನ್ಯಾಯಾಲಯ ಈ ತ್ರಿಮೂರ್ತಿಗಳಿಗೆ ಸಮನ್ಸ್ ಕಳುಹಿಸಿತ್ತು, ಅದಕ್ಕೆ ಅವರು ಹೈಕೋರ್ಟಿನಿಂದ ತಡೆಯಾಜ್ಞೆ ತಂದರು. ಈ ನಡುವೆ ನಿರ್ಭಯಳನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಂಡಿದ್ದ ರವಿ ಪೂಜಾರಿ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡರು. ಕೇಸ್ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಬಡ್ತಿ ಪಡೆದುಕೊಂಡರು. ವಿಚಾರಣೆಗೆ ಬಿದ್ದಿರುವ ತಡೆ ತೆರವಾಗುವ ಲಕ್ಷಣವೊಂದೂ ಕಾಣಿಸುತ್ತಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಧರ್ಮವ್ಯಾಪಾರಿಯ ಶಿಷ್ಯರೇ ಆಡಳಿತ ನಡೆಸುತ್ತಿದ್ದಾರೆ. ಈ ಧರ್ಮಾಡಳಿತದಲ್ಲಿ ನಿರ್ಭಯಾಗೆ ಸಿಕ್ಕಂತೆ ಧರ್ಮಸ್ಥಳದ ನಿರ್ಭಯಳಿಗೆ ನ್ಯಾಯ ಸಿಗುವುದು ಸುಲಭವಲ್ಲ!! ನ್ಯಾಯ ದೇವತೆಯನ್ನೇ ಗಲಿಬಿಲಿಗೊಳಿಸುವ ಪವಾಡ ಶಕ್ತಿ ಧರ್ಮಸ್ಥಳದ ಧರ್ಮ-ದೇವರ ಯಜಮಾನರಿಗಿದೆಯೆಂದೇ ಕರಾವಳಿಗರು ಮಾತನಾಡಿಕೊಳ್ಳುತ್ತಿದ್ದಾರೆ.

(ಸಂತ್ರಸ್ತೆಯ ನಿಜವಾದ ಹೆಸರನ್ನು ಧರ್ಮಸ್ಥಳದ ನಿರ್ಭಯ ಎಂದು ಬದಲಿಸಲಾಗಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...