Homeಮುಖಪುಟಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್!

- Advertisement -
- Advertisement -

ಭಾರತ ನಿಜಕ್ಕೂ ಕೊರೋನಾಗೆ ಬೆಚ್ಚಿ ಬಿದ್ದಿದೆಯೋ ಇಲ್ಲವೋ? ಆದರೆ, ಬೆಂಗಳೂರಿನಂತಹ ಮಹಾ ನಗರಗಳಲ್ಲಿ ವಾಸಿಸುವ ಸಮಾಜದ ತಳವರ್ಗದ ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವಂತೆ ಮಾಡಿರುವ ಲಾಕ್‌ಡೌನ್‌ಗೆ  ಬೆಚ್ಚಿದ್ದಾರೆ.

ಭಾರತದಂತಹ ದೇಶದಲ್ಲಿ ಲಾಕ್‌ಡೌನ್ ಘೋಷಿಸುವುದು ಸುಲಭ. ಆದರೆ, ದಿನನಿತ್ಯದ ಆಹಾರಕ್ಕೆ ಅದೇ ದಿನ ದುಡಿಯುವ ಅನಿವಾರ್ಯತೆಗೆ ಸಿಲುಕಿ ಬದುಕುತ್ತಿರುವ ಜನರಿಗೆ ಸತತ 21 ದಿನಗಳ ಕಾಲ ಎರಡು ಹೊತ್ತಿನ ಊಟ ಹಾಗೂ ಆರೋಗ್ಯ ಸಲಕರಣೆಗಳನ್ನು ಒದಗಿಸುವುದು ಅಷ್ಟು ಸುಲಭದ ಕೆಲಸವಲ್ಲ.

ಬೆಂಗಳೂರಿನಲ್ಲೇ ಸುಮಾರು ಸಾವಿರದಷ್ಟು ಬಡಜನರ, ಶ್ರಮಿಕರ ಏರಿಯಾಗಳಿವೆ. ಇಲ್ಲಿನ ಬಡ ಜನರಿಗೆ ಊಟ ಒದಗಿಸುವುದು ಅವರ ಕಷ್ಟಕ್ಕೆ ಸ್ಪಂದಿಸುವುದು ಕೇವಲ ಸರ್ಕಾರದಿಂದ ಮಾತ್ರ ಆಗುವ ಕೆಲಸವಲ್ಲ. ಇಂತಹ ಕೆಲಸಕ್ಕೆಂದೆ ತನ್ನನ್ನು ಮುಡಿಪಾಗಿಟ್ಟುಕೊಂಡು ಇಂತಹ ಸಂದಿಗ್ಧ ಸಂದರ್ಭದಲ್ಲಿ ಸ್ಲಂ ಭಾಗದ ಬಡ ವರ್ಗದ ಜನರ ಹೊಟ್ಟೆ ತುಂಬಿಸುತ್ತಿರುವ ಎನ್‌ಜಿಓ ಸಂಸ್ಥೆಯೇ Mercy Mission.

ಪ್ರತಿನಿತ್ಯ ಸಾವಿರಾರು ಬಡವರ ಹೊಟ್ಟೆ ತುಂಬಿಸುತ್ತಿದೆ ಈ Mercy Mission!

Mercy Mission ಎಂಬುದು ಕೇವಲ ಒಂದು ಸ್ವಯಂ ಸೇವಾ ಸಂಘವಲ್ಲ. ಬದಲಿಗೆ ಜನಪರ ಕೆಲಸದಲ್ಲಿ ತೊಡಗಿರುವ ಸುಮಾರು 25ಕ್ಕೂ ಹೆಚ್ಚು ಜನಪರ ಸಂಘಟನೆಗಳ ಒಂದು ಒಕ್ಕೂಟ. ಭಾರತದಲ್ಲಿ ಕಳೆದ ಒಂದು ವಾರದಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಜನರ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದರೆ, ಇಂತಹ ಸಂದಿಗ್ಧ ಕಾಲದಲ್ಲಿ ಮರ್ಸಿ ಮೆಷಿನ್ ನಡೆಸುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ.

ಲಾಕ್‌ಡೌನ್ ‌ನಿದಾಗಿ ಹಸಿದಿರುವವರಿಗೆ ಆಹಾರ ನೀಡಲೆಂದೆ Mercy Mission ಬೆಂಗಳೂರಿನಲ್ಲಿ ಎರಡು ಕಡೆ “ಕಮ್ಯೂನಿಟಿ ಕಿಚನ್” ಹೊಂದಿದೆ. ಉತ್ತರ ಬೆಂಗಳೂರಿಗೆ ಡಿಜೆ ಹಳ್ಳಿ ಹಾಗೂ ದಕ್ಷಿಣ ಬೆಂಗಳೂರಿಗೆ ಈಜಿಪುರದಲ್ಲಿ ಕಮ್ಯೂನಿಟಿ ಕಿಚನ್ ಸ್ಥಾಪಿಸಲಾಗಿದೆ. ಇಲ್ಲಿನ ಅಡಿಗೆ ಮನೆಗಳಲ್ಲಿ ಪ್ರತಿ ಹೊತ್ತಿಗೆ ತಲಾ 2,000 ಜನರಿಗೆ ಆಹಾರ ಸಿದ್ದಪಡಿಸಿ ಹಂಚಲಾಗುತ್ತಿದೆ.

Mercy Mission ಸ್ವಯಂ ಸೇವಾ ಸಂಘಟನೆಯಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರಿದ್ದಾರೆ. ಈ ಸ್ವಯಂ ಸೇವಕರ ಪೈಕಿ ಪ್ರತಿಯೊಬ್ಬರೂ ಪ್ರತಿದಿನ ಇಂತಿಷ್ಟು ಜನರಿಗೆ ಆಹಾರ ತಲುಪಿಸಬೇಕೆಂಬ ಗುರಿ ನೀಡಲಾಗುತ್ತಿದೆ. ಆದಷ್ಟು ಸ್ಲಂ ಭಾಗಕ್ಕೆ ತಮ್ಮದೇ ವಾಹನಗಳಲ್ಲಿ ತೆರಳುತ್ತಿರುವ ಈ ಕಾರ್ಯಕರ್ತರು ಬಡ ಜನರಿಗೆ ಆಹಾರ ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಂತಹ ಮಹಾನಗರದಲ್ಲಿ ಮೂರು ಹೊತ್ತು ತಲಾ 2000 ಸಾವಿರ ಜನರ ಹೊಟ್ಟೆ ತುಂಬಿಸುವುದು ಎಂದರೆ ಸುಮ್ಮನೆ ಮಾತಲ್ಲ.

ಇದಲ್ಲದೆ, ಕೆಲವು ಫಾರ್ಮಸಿಗಳಿಂದ ರಿಯಾಯಿತಿ ದರದಲ್ಲಿ ಔಷಧ ಸಾಮಾಗ್ರಿಗಳನ್ನು ಕೊಂಡು ಅದನ್ನು ಬಡವರಿಗೆ ಉಚಿತವಾಗಿ ನೀಡುವ ಕೆಲಸವನ್ನೂ ಈ Mercy Mission ಮಾಡುತ್ತಿದೆ. ಶುಗರ್ ಬಿಪಿಯಂತಹ ಎಲ್ಲಾ ತರದ ಖಾಯಿಲೆ ಹೊಂದಿರುವ ಬಡವರಿಗೂ ಈ ಸೌಲಭ್ಯವನ್ನು ಮರ್ಸಿ ಮಿಷಿನ್ ನೀಡುತ್ತಿದೆ.

ಈ ಕುರಿತು ನಾನುಗೌರಿ.ಕಾಂ Mercy Mission ಸಂಸ್ಥೆ ಪದಾಧಿಕಾರಿಗಳಲ್ಲೊಬ್ಬರಾದ ತೌಸಿಫ್‌ರವರನ್ನು ಮಾತನಾಡಿಸಿತು. ಅವರು “ಈ ಸಂಸ್ಥೆ ಹಲವಾರು ವರ್ಷಗಳಿಂದ ಯಾವುದೇ ಪ್ರಚಾರ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ. ಲಾಕ್‌ಡೌನ್ ಘೋಷಿಸಿದ ನಂತರದ ಕಳೆದ ಒಂದು ವಾರದ ಅವಧಿಯಲ್ಲಿ ಸಾವಿರಾರು ಜನರ ಹಸಿವನ್ನು ನೀಗಿಸಿದೆ. ಆದರೆ, ಸಹಾಯ ಹಸ್ತ ನೀಡುವ ಸಂದರ್ಭದಲ್ಲಿ ನಾವು ಎಲ್ಲಿಯೂ ಸಹ ಹಿಂದೂ-ಮುಸ್ಲಿಂ ಎಂದು ಬೇಧ ಮಾಡುವ ಕೆಲಸಕ್ಕೆ ಮುಂದಾಗಿಲ್ಲ. ಇದು ಬೇಧ ಮಾಡುವ ಸಮಯವಲ್ಲ. ಇಡೀ ಭಾರತ ಒಟ್ಟಾಗಿ ನಿಲ್ಲಬೇಕಾದ ಸಮಯ” ಎನ್ನುತ್ತಾರೆ ಅವರು.

ಒಟ್ಟಾರೆ ಲಾಕ್‌ಡೌನ್‌ನಿಂದಾಗಿ ಮೇಲ್ ಮತ್ತು ಮಧ್ಯಮ ವರ್ಗಕ್ಕಿಂತ ಅಧಿಕ ಪೆಟ್ಟು ತಿನ್ನುತ್ತಿರುವುದು ಸಮಾಜದ ಕೆಳ ಮತ್ತು ಕೂಲಿ ಕಾರ್ಮಿಕ ವರ್ಗ. ಇಂತಹ ಜನರಿಗೆ ದಿನನಿತ್ಯ ಆಹಾರ ಪೂರೈಸುತ್ತಿರುವ Mercy Mission ಕಾರ್ಯ ನಿಜಕ್ಕೂ ಶ್ಲಾಘನೀಯ.


ಇದನ್ನೂ ಓದಿ: ಅಂದು ನೋಟುರದ್ದು, ಇಂದು ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...