Homeಕರ್ನಾಟಕಲಾಕ್‌ಡೌನ್: ರೈತರ ಸಮಸ್ಯೆಗಳಿಗೆ ಸರಕಾರ ನೆರವಾಗುತ್ತೇವೆ- ಯಡಿಯೂರಪ್ಪ

ಲಾಕ್‌ಡೌನ್: ರೈತರ ಸಮಸ್ಯೆಗಳಿಗೆ ಸರಕಾರ ನೆರವಾಗುತ್ತೇವೆ- ಯಡಿಯೂರಪ್ಪ

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ರಾಜ್ಯದ ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ  ಸಾಗಿಸಲಾಗದೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪನವರು ರೈತರ ನೆರವಿಗಿದ್ದೇವೆ ಎಂದು ಹೇಳಿದ್ದಾರೆ.

ಕರ್ನಾಟಕದಿಂದ ಟೊಮೆಟೊ, ಕಲ್ಲಂಗಡಿ, ಕರಬೂಜ, ದ್ರಾಕ್ಷಿ, ನಿಂಬೆ ಮೊದಲಾದ ಹಣ್ಣು ತರಕಾರಿಗಳು ದೊಡ್ಡ ಪ್ರಮಾಣದಲ್ಲಿ ಹೊರ ರಾಜ್ಯಗಳಿಗೆ ರಫ್ತಾಗುತ್ತಿದ್ದವು. ಈಗ ದೇಶದಾದ್ಯಂತ ಲಾಕ್‌ಡೌನ್ ಇರುವುದರಿಂದ ಸಾರಿಗೆ ಸಮಸ್ಯೆಯಿಂದ ಬೇಡಿಕೆ ಕುಸಿದಿದೆ. ಈ ನಿಟ್ಟಿನಲ್ಲಿ ಈ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ರೈತರಿಗೆ ಸಮಸ್ಯೆ: ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ತಜ್ಞರು


ಟೊಮೆಟೊ ಸಂಸ್ಕರಣಾ ಘಟಕಗಳ ಮೂಲಕ ಕೆಚಪ್ ತಯಾರಿಕೆ ಮಾಡಲು ಸೂಚಿಸಲಾಗಿದೆ. ಹಾಪ್ ಕಾಮ್ಸ್ ಮೂಲಕವೂ ತರಕಾರಿ ಪೂರೈಕೆಗೆ ಹಾಗೂ ಮೊಟ್ಟೆ ಮಾರಾಟಕ್ಕೆ ಸಹ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವಾಹನಗಳ ಮೂಲಕ ಪೂರೈಕೆಗೆ ಕೂಡ ಕ್ರಮ ವಹಿಸಿ, ಗ್ರಾಹಕರಿಗೂ ಸೂಕ್ತ ದರದಲ್ಲಿ ಹಣ್ಣು ತರಕಾರಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಹಣ್ಣು, ತರಕಾರಿ ದಿನಸಿ ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ದಿನವಿಡೀ ತೆರೆದಿಡಲು ಸೂಚಿಸಿದ್ದು, ಖರೀದಿದಾರರು ಸಾಮಾಜಿಕ ಅಂತರ ಕಾಯ್ದುಕೊಂಡು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಖರೀದಿಸುವಂತೆ ಕೋರಿದೆ.

ರೈಲುಗಳ ಮೂಲಕ ಹೊರ ರಾಜ್ಯಗಳಿಗೆ ಹಣ್ಣು-ತರಕಾರಿ ಮೊದಲಾದ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿನಸಿ ಮತ್ತು ತರಕಾರಿಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ಪರವಾನಿಗೆ ರದ್ದು ಮಾಡುವ ಎಚ್ಚರಿಕೆ ನೀಡಿದೆ. ಅಡುಗೆ ಎಣ್ಣೆ ದಾಸ್ತಾನು ಲಭ್ಯವಿದ್ದು, ಪ್ಯಾಕೇಜಿಂಗ್ ವ್ಯವಸ್ಥೆ ಮಾಡಿ ಪೂರೈಕೆಗೆ ಕ್ರಮ ವಹಿಸಲು ಸೂಚಿಸಲಾಗಿದ್ದು, ಮಾರುಕಟ್ಟೆಗಳಲ್ಲಿ ದಾಸ್ತಾನು ಕೊರತೆ ಇಲ್ಲವಾದ್ದರಿಂದ ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಸರಕಾರ ಹೇಳಿದೆ.

ಬೆಳೆ ಕಟಾವಿಗೆ ನೆರೆಯ ರಾಜ್ಯಗಳಿಂದ ಕಟಾವು ಯಂತ್ರಗಳನ್ನು ತರಿಸಿ, ಕಟಾವಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿರುವ ಸರಕಾರ, ಮುಂದಿನ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಬಿತ್ತನೆಯಾಗಲಿದ್ದು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿದೆ ಹಾಗೂ 15 ಅಕ್ಕಿ ಮಿಲ್‌ಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

27 ರೇಷ್ಮೆ ಮಾರುಕಟ್ಟೆ ತೆರೆಯಲು ಕ್ರಮ ವಹಿಸಲಾಗಿದ್ದು 14 ಮಾರುಕಟ್ಟೆಗಳಲ್ಲಿ ತಂಡಗಳನ್ನು ರಚಿಸಿ, ರೈತರನ್ನು ನೇರವಾಗಿ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಏಜೆಂಟರನ್ನು ಮನೆಗೆ ಕಳುಹಿಸಿ ಕಡಿಮೆ ದರಕ್ಕೆ ಖರೀದಿ ಮಾಡುತ್ತಿರುವವರ ಬಗ್ಗೆ ಸರ್ಕಾರ ಎಚ್ಚರಿಸಿದ್ದು ಇಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದೆಯಲ್ಲದೆ, ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ರೇಷ್ಮೆ ಮಾರುಕಟ್ಟೆಯನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದಿದೆ.

ಕೆಎಂಎಫ್ ಮೂಲಕ 69 ಲಕ್ಷ ಲೀಟರ್ ಹಾಲು ಖರೀದಿಯಾಗುತ್ತಿದ್ದು, 42 ಲಕ್ಷ ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದೆ. 7.5 ಲಕ್ಷ ಲೀಟರ್ ಹಾಲು ಉಳಿತಾಯವಾಗುತ್ತಿದೆ  ಎಂದಿರುವ ಸರಕಾರ ಇದನ್ನು ಲಾಕ್‌ಡೌನ್ ಮುಗಿಯುವ ವರೆಗೆ ಸರ್ಕಾರವೇ ಖರೀದಿಸಿ ಕೊಳೆಗೇರಿಗಳು ಮತ್ತು ಕಾರ್ಮಿಕರ ಬಡಾವಣೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗುವುದು ಎಂದಿದೆ.

ಲಾಕ್‌ಡೌನ್‌ನಿಂದ ನಗರದಲ್ಲಿ ಸಿಲುಕಿಕೊಂಡಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಿಲ್ಡರುಗಳೇ ಊಟ, ವಸತಿ ವ್ಯವಸ್ಥೆ ಒದಗಿಸುವಂತೆ ಸೂಚಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...