Homeಮುಖಪುಟಪ್ರಿ ಕೆಜಿ ಸ್ಕೂಲೆಂಬ ವ್ಯಾಪಾರವೂ... : ತಾಯಿಯೆಂಬ ಗುರುವೂ...

ಪ್ರಿ ಕೆಜಿ ಸ್ಕೂಲೆಂಬ ವ್ಯಾಪಾರವೂ… : ತಾಯಿಯೆಂಬ ಗುರುವೂ…

ಪ್ರಿ.ಕೆಜಿ ಸ್ಕೂಲ್‌ಗಳ ಉದ್ದೇಶ ತಮ್ಮ ಖಜಾನೆ ತುಂಬಿಸುವುದಷ್ಟೇ ಹೊರತು ನಮ್ಮ ಮಕ್ಕಳನ್ನು ಉದ್ಧಾರ ಮಾಡಲಂತೂ ಅಲ್ಲ.

- Advertisement -
- Advertisement -

ಎಪ್ರಿಲ್ ತಿಂಗಳು ಬಂತೆಂದರೆ ಸಾಕು, ಮಕ್ಕಳ ಶಾಲಾ ದಾಖಲಾತಿಯ ಗದ್ದಲ ಪ್ರಾರಂಭವಾಗುತ್ತದೆ. ಒಂದೆಡೆ ಹೆತ್ತವರಿಗೆ ಖುಷಿ, ಜೊತೆಗೆ ಯಾವ ಶಾಲೆಗೆ ಸೇರಿಸಬೇಕೆನ್ನುವ ಗೊಂದಲ. ಇನ್ನೊಂದೆಡೆ ಶಾಲಾ ಶುಲ್ಕದ ತಲೆಬಿಸಿ ಇವೆಲ್ಲವೂ ಇತ್ತೀಚೆಗೆ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಇದರಿಂದ ನಾನೂ ಕೂಡಾ ಹೊರತಾಗಿಲ್ಲ. ನನ್ನಮ್ಮನಿಗೆ ಇದರ ಚಿಂತೆಯಿರಲಿಲ್ಲ. ನನ್ನ ಪುಟ್ಟ ಹಳ್ಳಿಯಲ್ಲಿ ಸರಕಾರಿ ಶಾಲೆ ಬಿಟ್ಟರೆ ಬೇರೆ ಆಯ್ಕೆಯೇ ಇರಲಿಲ್ಲ. ಈಗ ಹಾಗಲ್ಲ, ಹೆಜ್ಜೆಗೊಂದರಂತೆ ಪ್ರಿ-ಕೆಜಿ ಶಾಲೆಗಳು ತಮ್ಮ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿರುತ್ತವೆ. ಒಂದೆರಡು ಹಲ್ಲುಗಳು ಇಣುಕಿದರೆ ಸಾಕು, ಈ ಸ್ಕೂಲ್‌ಗಳು ಅಮ್ಮನ ಮಡಿಲಿನಿಂದ ಮಕ್ಕಳನ್ನು ತಮ್ಮ ತೆಕ್ಕೆಗೆ ಎಳೆದುಕೊಳ್ಳುತ್ತವೆ.

ಹಿಂದೆಲ್ಲಾ ಮಕ್ಕಳಿಗೆ ಐದು ವರ್ಷವಾಗುತ್ತಲೇ ಅಂಗನವಾಡಿಗೆ ಸೇರಿಸಿ, ಆರು ವರ್ಷ ತುಂಬಿದಾಗ ಶಾಲೆಗೆ ದಾಖಲಿಸುವ ಪರಿಪಾಠವಿತ್ತು. ಅಲ್ಲಿಯವರೆಗೆ ಅಮ್ಮನ ಸೆರಗು ಹಿಡಿದು ನೇತಾಡುತ್ತಲೇ ಕಾಲಕಳೆಯುತ್ತಿದ್ದರು. ಅಂಗನವಾಡಿಗೂ ಹೋಗುತ್ತಿದ್ದುದು ಆಗೊಮ್ಮೆ ಈಗೊಮ್ಮೆ. ಮನೆಗೆಲಸಕ್ಕಾಗಿ ಯಂತ್ರಗಳಿಲ್ಲದ ಕಾಲದಲ್ಲಿ ಅಮ್ಮಂದಿರು ಸ್ವಯಂ ಯಂತ್ರಗಳಾಗಿ ದುಡಿಯುತ್ತಿದ್ದರು. ಬಿಡುವಿಲ್ಲದ ದಿನಚರಿಯ ನಡುವೆಯೂ, ವಯಸ್ಸಿಗೆ ಒಂದು ವರ್ಷದ ಅಂತರವಿರುತ್ತಿದ್ದ ಐದಾರು ಮಕ್ಕಳಿಗೂ ತಮ್ಮ ಸಮಯವನ್ನು ಮೀಸಲಾಗಿಡುತ್ತಿದ್ದರು. ಮಕ್ಕಳ ಜೊತೆ ಮುಕ್ತವಾಗಿ ಮಾತನಾಡುತ್ತಾ, ಕಥೆ ಹೇಳುತ್ತಾ, ಜೊತೆ ಸೇರಿ ಆಟವಾಡುತ್ತಾ ಮುಗ್ಧ ಮನಸ್ಸುಗಳ ನಡುವಿನ ಕೊಂಡಿಯನ್ನು ಭದ್ರಗೊಳಿಸುತ್ತಿದ್ದರು. ಎಷ್ಟು ಕಿರಿಕಿರಿಯುಂಟಾದರೂ ಒಂದು ಹಂತದವರೆಗೆ ಅವರನ್ನು ದೂರವಿರಿಸುವ ಪ್ರಯತ್ನ ಮಾಡುತ್ತಿರಲಿಲ್ಲ.

ಮಕ್ಕಳಿಗೆ ನೀಡಬೇಕಾದ ಸಮಯವು ಅವರ ಹಕ್ಕಾಗಿರುತ್ತದೆ. ಈಗ ನಮ್ಮಲ್ಲಿ ಧಾರಾಳ ಸಮಯವಿದೆ. ಆದರೆ ಒಂದಿಷ್ಟು ಹೊತ್ತು ಮಕ್ಕಳ ಜೊತೆ ಕಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಒಂದಿಬ್ಬರು ಮಕ್ಕಳು ಇರುವುದಾದರೂ ಸಂಭಾಳಿಸುವುದು ಬಹಳ ಕಷ್ಟ ಎನ್ನುವುದು ಬಹುತೇಕ ತಾಯಂದಿರು ಆಗಾಗ ಹೇಳುತ್ತಿರುವ ಮಾತು. ಇದಕ್ಕೆ ಪರಿಹಾರವನ್ನು ಪ್ರಿ-ಕೆಜಿ ಸ್ಕೂಲ್‌ಗಳು ನೀಡಿವೆ. ಅದರಂತೆ ತಮ್ಮ ಪುಟಾಣಿ ಮಕ್ಕಳನ್ನು ಪ್ರಿ-ಕೆಜಿ ಸ್ಕೂಲ್‌ಗಳ ಬಾಗಿಲಿಗೆ ನೂಕಿ ಬಿಡುತ್ತಾರೆ. ಒಂದಿಷ್ಟು ಹೊತ್ತು ಮಕ್ಕಳೊಡನೆ ಬೆರೆತು ನೋಡಿ, ಅವರ ಸೃಜನಶೀಲ ಮನಸ್ಸು ನಮ್ಮಲ್ಲಿ ಅಚ್ಚರಿಯುಂಟುಮಾಡುತ್ತದೆ. ತುಂಟಾಟಗಳು ದಿನದ ಜಂಜಾಟಗಳಿಗೆ ನಿರಾಳತೆಯನ್ನು ಒದಗಿಸುತ್ತದೆ. ಹಠ, ಕೀಟಲೆ, ಚೇಷ್ಟೆ ಇವೆಲ್ಲಾ ಮಕ್ಕಳಲ್ಲಿರುವ ಸಹಜ ಗುಣಗಳು. ಅವುಗಳ ಅಭಿವ್ಯಕ್ತಿ ಕೂಡಾ ಅವರ ಹಕ್ಕಾಗಿರುತ್ತದೆ. ಅದಕ್ಕಾಗಿ ಪುಟ್ಟ ಮಕ್ಕಳನ್ನು ಅಮ್ಮನ ಮಡಿಲಿಂದ ದೂರವಿಡುವುದು ಎಷ್ಟು ಸರಿ?

ಬಾಲ್ಯವೆಂಬುದು ಮಕ್ಕಳ ಹಕ್ಕು. ಅದನ್ನವರು ಸಹಜವಾಗಿಯೇ ಆಸ್ವಾಧಿಸಬೇಕು. ಅದನ್ನು ಕಸಿಯುವ ಹಕ್ಕು ಹೆತ್ತವರಿಗೂ ಇಲ್ಲ. ಒಂದು ವರ್ಷ ಬಳಪ ಬಳಸದೆ ಆಡುತ್ತಾ, ನಲಿಯುತ್ತಾ ಕಲಿಯುವುದು, ಪರ್ಯಾವರಣ ನಡಿಗೆ (ನೇಚರ್ ವಾಕ್), ಇಂಗ್ಲಿಷ್ ಕಲಿಕೆ ಇತ್ಯಾದಿ ಬಣ್ಣ ಬಣ್ಣಗಳ ಆಮಿಷಗಳ ಮೂಲಕ ಮೂವತ್ತು ಸಾವಿರದಿಂದ ಎಪ್ಪತ್ತು ಸಾವಿರದವರೆಗೂ ಈ ಪ್ರಿ ಕೆ.ಜಿ.ಸ್ಕೂಲ್‌ಗಳು ಶುಲ್ಕ ಪೀಕಿಸುತ್ತವೆ. ಶ್ರೀಮಂತರಷ್ಟೇ ಅಲ್ಲ, ಮಧ್ಯಮ ವರ್ಗದ ಹೆತ್ತವರೂ ಅವರ ಆಮಿಷಕ್ಕೆ ಬಲಿ ಬೀಳುತ್ತಾರೆ. ಹೇಗಾದರೂ ಸಾಲ, ಸೋಲ ಮಾಡಿ ಹಣ ಹೊಂದಿಸಿ ಅಲ್ಲಿಗೆ ದಾಖಲಿಸುತ್ತಾರೆ. ಉಳ್ಳವರಿಗೆ ಇದು ಪ್ರತಿಷ್ಟೆಯಾದರೆ ಮಧ್ಯಮ ವರ್ಗದವರಿಗೆ ಪ್ರಿ ಕೆ.ಜಿ.ಸ್ಕೂಲ್‌ಗಳಿಗೆ ಕಳಿಸದಿದ್ದರೆ ಎಲ್ಲಿ ತಮ್ಮ ಮಕ್ಕಳು ಹಿಂದುಳಿದು ಬಿಡುತ್ತಾರೋ ಎಂಬ ಆತಂಕ. ಒಂದರ್ಥದಲ್ಲಿ ಇವೆಲ್ಲವೂ ಎದೆಹಾಲಿಗೆ ಇಂಗ್ಲಿಷ್ ಬೆರೆಸುವ ವ್ಯಾಮೋಹ. ಇಂಗ್ಲಿಷ್ ಕಲಿಯುವುದು ತಪ್ಪಲ್ಲ. ಆದರೆ ಅತಿಯಾದ ಇಂಗ್ಲಿಷಿನ ವ್ಯಾಮೋಹದಿಂದಾಗಿ ಮಾತೃಭಾಷೆಯೇ ಸರಿಯಾಗಿ ಮಾತನಾಡಲು ಬಾರದ ಎಷ್ಟೋ ಮಕ್ಕಳಿದ್ದಾರೆ. ಸಂವಹನದ ತೊಡಕಿನಿಂದಾಗಿ ಮನೆಯಲ್ಲಿ ಹಿರಿಯರೊಂದಿಗೆ ವ್ಯವಹರಿಸಲು ಬಾರದೇ ಸಂಬಂಧಗಳು ಶಿಥಿಲಗೊಳ್ಳುತ್ತವೆ.

ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ ಮಾತಿನಂತೆ ಲಕ್ಷ ಸುರಿದರೂ ತಾಯಿಗಿಂತ ಮಿಗಿಲಾದ ಗುರುವನ್ನು ಈ ಪ್ರಿ ಕೆ.ಜಿ. ಶಾಲೆಗಳು ಒದಗಿಸಲು ಸಾಧ್ಯವೇ..? ಮನೆಯ ಹೊರಗಡೆ ಆಡಲು ಬಿಟ್ಟಾಗ ಬೀಳುತ್ತಾ, ಏಳುತ್ತಾ ಆಡುವಾಗ ಕಣ್ಣಿಗೆ ಕಾಣಿಸುವ ಆಕಾಶ, ಪ್ರಾಣಿ ಪಕ್ಷಿಗಳು, ಬಣ್ಣ ಬಣ್ಣದ ಚಿಟ್ಟೆಗಳು, ಮರಗಿಡಗಳು, ಗಾಳಿ – ಬೆಳಕು, ಮೋಡ ಇವುಗಳಿಗೆಲ್ಲಾ ನೇಚರ್ ವಾಕ್ ಎಂಬ ಹೆಸರನ್ನಿಟ್ಟು ಮಾಡುವ ವ್ಯಾಪಾರಕ್ಕೆ ದುಡ್ಡು ಸುರಿಯಬೇಕೇ..? ಪ್ರಕೃತಿಯ ಬಗ್ಗೆ ಮಕ್ಕಳಿಗೆ ವಿಶೇಷ ಕುತೂಹಲವಿರುತ್ತದೆ. ಅವರದೇ ಆದ ಆಲೋಚನೆಗಳು, ಕಲ್ಪನೆಗಳು ಇರುತ್ತವೆ. ಇದನ್ನು ಪ್ರಿ.ಕೆ.ಜಿ.ಸ್ಕೂಲ್‌ಗಳು ಇಲ್ಲವಾಗಿಸುತ್ತವೆ. ತಾಯಿಯ ಸೆರಗು ಹಿಡಿದು ಬಾಲದಂತೆ ಹಿಂಬಾಲಿಸುವಾಗ ಕಲಿಯುವ ವಸ್ತುಗಳ ಹೆಸರು, ಹಣ್ಣು-ತರಕಾರಿಗಳ ಹೆಸರು, ಬಣ್ಣಗಳು ಇತ್ಯಾದಿಗಳನ್ನೆಲ್ಲಾ ಅರಿತುಕೊಳ್ಳಲು ಪ್ರಿ ಕೆ.ಜಿ.ಸ್ಕೂಲ್‌ಗಳು ಬೇಕೇ..?

ಮಕ್ಕಳ ಮನಸ್ಸೆಂಬುದು ಬಹಳ ಸೂಕ್ಷ್ಮ. ಈ ವಿಚಾರವನ್ನು ಅಮ್ಮಂದಿರು ನೆನಪಿಟ್ಟುಕೊಳ್ಳಲೇಬೇಕು. ನಾವು ಹೇಳಿದಂತೆಲ್ಲಾ ಅವರು ಕೇಳದಿರಬಹುದು. ಆದರೆ ನಮ್ಮ ಪ್ರತಿಯೊಂದು ಹೆಜ್ಜೆಯನ್ನೂ ನಮಗರಿವಿಲ್ಲದೇ ಅನುಸರಿಸುತ್ತಾರೆ. ಅವರ ಕಲಿಕೆ ಪ್ರಾರಂಭವಾಗುವುದೇ ಇಲ್ಲಿಂದ. ಇದು ಅವರ ಸರ್ವತೋಮುಖ ಬೆಳವಣಿಗೆಗೆ ಗಟ್ಟಿ ಅಡಿಪಾಯ ಹಾಕುತ್ತದೆ. ಹಾಗಿರುವಾಗ ನಾವಿಡುವ ಪ್ರತೀ ಹೆಜ್ಜೆಯೂ ಜಾಗರೂಕತೆಯಿಂದ ಕೂಡಿರಬೇಕು. ಇಂತಹ ಸಂದರ್ಭದಲ್ಲಿ ಮಕ್ಕಳನ್ನು ದೂರ ಮಾಡಿದರೆ ಅವರು ಇದೆಲ್ಲದರಿಂದಲೂ ವಂಚಿತರಾಗುತ್ತಾರೆ. ಮಕ್ಕಳ ಸ್ವಭಾವವೇ ಹಾಗೆ. ಪ್ರತಿಯೊಂದನ್ನು ತಾಯಿಯಲ್ಲಿ ಪ್ರಶ್ನಿಸುತ್ತಲೇ ಇರುತ್ತಾರೆ. ಒಂದಕ್ಕೆ ಉತ್ತರಿಸಿದರೆ ಇನ್ನೊಂದು, ಅದಕ್ಕೆ ಉತ್ತರಿಸಿದರೆ ಮತ್ತೊಂದು, ಮಗದೊಂದು ಪ್ರಶ್ನೆಗಳು. ಉತ್ತರಿಸಿ ಸಾಕು ಸಾಕಾಗುವಷ್ಟು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿರುತ್ತಾರೆ. ಒಂದು ವೇಳೆ ಅತೀ ಚಿಕ್ಕ ವಯಸ್ಸಿನಲ್ಲಿ ಇಂತಹ ಪ್ರಿ ಕೆ.ಜಿ.ಸ್ಕೂಲ್‌ಗಳಿಗೆ ಕಳಿಸಿದರೆ ಅವರ ಆ ಪ್ರಶ್ನಿಸುವ ಸ್ವಭಾವವೇ ಕುಂಠಿತಗೊಂಡು ಕ್ರಮೇಣ ನಿಂತು ಹೋಗುತ್ತದೆ, ಶಿಸ್ತಿನ ಹೆಸರಲ್ಲಿ ಮಾಯವಾಗುತ್ತದೆ. ಅಲ್ಲಿರುವ ಅಷ್ಟೂ ಮಕ್ಕಳು ಪ್ರಶ್ನೆಗಳನ್ನು ಕೇಳುತ್ತಾ, ಮಾತನಾಡುತ್ತಾ ಇದ್ದರೆ ಶಿಕ್ಷಕಿಯಾದರೂ ಏನು ಮಾಡಲಾದೀತು..?

ತಾಯಿಯೊಬ್ಬಳು ತನ್ನ ಮಗುವಿನ ಮನಸ್ಸನ್ನು ಅರ್ಥೈಸಿದಂತೆ ಬೇರೆ ಯಾರೇ ಆದರೂ ಅರ್ಥೈಸಲು ಸಾಧ್ಯವೇ..? ಎಳವೆಯಲ್ಲಿ ಕಲಿತದ್ದು ಬಂಡೆಯ ಮೇಲೆ ಕೆತ್ತಿದಂತೆ. ದೊಡ್ಡವರಾದ ಮೇಲೆ ಕಲಿತದ್ದು ನೀರಿನ ಮೇಲೆ ಬರೆದಂತೆ. ಹಾಗೆಂದು ಮಕ್ಕಳ ಇತಿಮಿತಿಗಳನ್ನು ಕಡೆಗಣಿಸಿ ಪುಟ್ಟ ಮೆದುಳಿಗೆ ಸಿಕ್ಕಿದ್ದೆಲ್ಲವನ್ನೂ ತುಂಬಲು ಹೋದರೆ ಅದು ಅವರ ಮನಸ್ಸಿನ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂಬುವುದನ್ನು ಮರೆಯಬಾರದು.

ಹಿಂದೊಮ್ಮೆ ನನ್ನ ಮಾತೃಭಾಷೆ ಬ್ಯಾರಿಯಲ್ಲಿ ಪ್ರಿ ಕೆಜಿ ಸ್ಕೂಲ್‌ಗಳ ಬಗ್ಗೆ ಲೇಖನ ಬರೆದಾಗ ಹಲವು ಅಮ್ಮಂದಿರು ನನ್ನ ಮೇಲೆ ಕಿಡಿಕಾರಿದರು ಹಾಗೂ ಪ್ರಿ ಕೆಜಿ ಸ್ಕೂಲ್ ಪದ್ಧತಿಯನ್ನು ಸಮರ್ಥಿಸಿಕೊಂಡಿದ್ದರು. ಹಲವು ಪ್ರಿ.ಕೆ.ಜಿ.ಸ್ಕೂಲ್‌ಗಳ ಆಡಳಿತ ಮಂಡಳಿಗೂ ತಲುಪಿಸಿದ್ದರು. ನಾನು ಈಗಲೂ ನನ್ನ ಅದೇ ಪ್ರತಿಪಾದನೆಗೆ ಬದ್ಧಳಾಗಿದ್ದೇನೆ. ಪ್ರಿ.ಕೆಜಿ ಸ್ಕೂಲ್‌ಗಳ ಉದ್ದೇಶ ತಮ್ಮ ಖಜಾನೆ ತುಂಬಿಸುವುದಷ್ಟೇ ಹೊರತು ನಮ್ಮ ಮಕ್ಕಳನ್ನು ಉದ್ಧಾರ ಮಾಡಲಂತೂ ಅಲ್ಲ.


ಇದನ್ನೂ ಓದಿ: ಈ ಹೊತ್ತಿನಲ್ಲಿ ʼಹಳ್ಳಿ ಮಕ್ಕಳʼ ಕುರಿತು: ಒಂದು ರಚನಾತ್ಮಕ ಆಲೋಚನೆ – ಕೆ.ಪಿ.ಸುರೇಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...