Homeಮುಖಪುಟಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

ಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು “ಕೊರೊನಾ ವೈರಸ್ ವಿರುದ್ದ ರಾಷ್ಟ್ರದ ಸಾಮೂಹಿಕ ಮನೋಭಾವವನ್ನು ಪ್ರದರ್ಶಿಸಲು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಬಾಲ್ಕನಿಗಳಲ್ಲಿ ದೀಪ ಹಚ್ಚುವಂತೆ” ದೇಶದ ಜನತೆಯಲ್ಲಿ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ವೈರಸ್ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ತನ್ನ ಮೂರನೇ ಭಾಷಣ ಇದಾಗಿದ್ದು, ಏಪ್ರಿಲ್ 5 ರ ಭಾನುವಾರದಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳ ದೀಪಗಳನ್ನು ಸ್ವಿಚ್ ಆಫ್ ಮಾಡಿ, ದೀಪಗಳು, ಮೇಣದ ಬತ್ತಿಗಳು, ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯ ಈ ಕರೆ‌ಗೆ ಟ್ವಿಟ್ಟರ್‌ನಲ್ಲಿ ಬೆಂಬಲ ಹಾಗೂ ತೀವ್ರ ಟೀಕೆಗಳ ಸುರಿಮಳೆಯನ್ನೇ ಉಂಟುಮಾಡಿದೆ. ಕೊರೊನ ವೈರಸ್‌ ವಿರುದ್ಧ ಹೋರಾಡಲು ಟೆಸ್ಟಿಂಗ್‌ ಕಿಟ್‌ಗಳು, ವೈದ್ಯಕೀಯ ಸಲಕರಣೆಗಳು, ಸುಸಜ್ಜಿತ ಆಸ್ಪತ್ರೆಗಳ ಮೇಲೆ ಗಮನ ನೀಡುವುದನ್ನು ಬಿಟ್ಟು ಕೇವಲ ಹೇಳಿಕೆ-ಟಾಸ್ಕ್‌ಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು “ಪ್ರಧಾನ ಶೋ ಮ್ಯಾನ್‌ನ ಭಾಷಣ ಕೇಳಿದೆ,  ಜನರ ನೋವು, ಹೊರೆ ಮತ್ತು ಆರ್ಥಿಕ ಆತಂಕಗಳನ್ನು ಕಡಿಮೆ ಮಾಡಲು ಏನನ್ನೂ ಮಾಡಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಸ್ವಾತಿ ಚತುರ್ವೇದಿ ಅವರು ’’ದೀಪಗಳ ಮೇಲೆ ಈ ಸ್ವಿಚ್ ಏನನ್ನು ಸಾಧಿಸಲಿದೆ? ನಮಗೆ ಹೆಚ್ಚಿನ ಪರೀಕ್ಷೆಗಳು, ಮುಖವಾಡಗಳು, ಆಸ್ಪತ್ರೆಗಳು ಮತ್ತು ರಕ್ಷಣಾ ಸಾಧನಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಅವರು “ಕೊರೊನವನ್ನು ಒಟ್ಟಿಗೆ ಸೋಲಿಸೋಣ, ತಾಯಿ ಭಾರತಿ ಗೆಲ್ಲಲಿ. ಏಪ್ರಿಲ್ 5 ರ ಭಾನುವಾರದಂದು ನೆನಪಿಡಿ, ನಿಮ್ಮ ಬಾಲ್ಕನಿಯಲ್ಲಿ ಅಥವಾ ಬಾಗಿಲಿನ ಹೊರಗೆ 9 ನಿಮಿಷಗಳ ಕಾಲ ನಿಮ್ಮ ಕೈಯಲ್ಲಿ ಒಂದು ಬೆಳಕನ್ನು ಇರಿಸಿ ಮತ್ತು ಈ ಹೋರಾಟದಲ್ಲಿ ನಾವೆಲ್ಲರೂ ಒಟ್ಟಾಗಿರುವುದನ್ನು ನೆನಪಿಸಿ” ಎಂದು ಹೇಳಿದ್ದಾರೆ.

ಮೀಮ್ಸ್‌ಗಳಂತೂ ಕೆಲವೇ ಗಂಟೆಗಳಲ್ಲಿ ವೈರಲ್‌ ಆಗಿವೆ. ಕೆಲವೊಂದು ಇಲ್ಲಿವೆ

 

ಪತ್ರಕರ್ತ ಅತುಲ್ ಚೌರಾಸಿಯಾ ಕೂಡ ಪ್ರಧಾನಿ ವೈದ್ಯಕೀಯ ಸೌಲಭ್ಯ ಮತ್ತು ಭವಿಷ್ಯದ ವೈದ್ಯಕೀಯ ಯೋಜನೆಯ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. “ಆದರೆ ಅವರು ಮತ್ತೊಂದು ನಾಟಕಕ್ಕಾಗಿ ಮನವಿ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಇತಿಹಾಸಕಾರ ರಾಮಚಂದ್ರ ಗುಹಾ ಅವರು ಪ್ರಧಾನ ಮಂತ್ರಿಯ ಭಾಷಣವನ್ನು ‘ದುರಂತದ ಸಮಯದಲ್ಲಿ ಒಂದು ಪ್ರಹಸನ’ ಎಂದು ಬಣ್ಣಿಸಿದರು.

 

ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರು ಪ್ರಧಾನಿಯ ಕರೆಯನ್ನು ಬೆಂಬಲಿಸಿ, “ಪ್ರಧಾನಿ ಮೋದೀಜಿಯವರ ಕರೆಯ ಹಿನ್ನೆಲೆಯಲ್ಲಿ ನಾಳೆ ಮೈಸೂರು ನಗರ ಅಧ್ಯಕ್ಷರಾದ ಶ್ರೀವತ್ಸ ಅವರ ನೇತೃತ್ವದಲ್ಲಿ ದೀಪ ಮತ್ತು ಕ್ಯಾಂಡಲುಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.

ಸಂಘ ಪರಿವಾರದ ಸಾಮಾಜಿಕ ಮಾಧ್ಯಮ ತಪ್ಪು ಮಾಹಿತಿ ಅಭಿಯಾನದಲ್ಲಿ ತೊಡಗಿವೆ. 9 ನಿಮಿಷಗಳ ಬೆಳಕು ವೈರಸ್ ಅನ್ನು ಹೇಗೆ ಕೊಲ್ಲುತ್ತದೆ ಎಂಬುದರ ಕುರಿತು ನಾವು ಎಷ್ಟು ಬೇಗ ವಾಟ್ಸಾಪ್ ಫಾರ್ವರ್ಡ್‌ಗಳನ್ನು ಪಡೆಯುತ್ತೇವೆ ಎಂದು ಪತ್ರಕರ್ತ ರೋಹನ್ ವೆಂಕಟ್ ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...