Homeಮುಖಪುಟಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

ಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು “ಕೊರೊನಾ ವೈರಸ್ ವಿರುದ್ದ ರಾಷ್ಟ್ರದ ಸಾಮೂಹಿಕ ಮನೋಭಾವವನ್ನು ಪ್ರದರ್ಶಿಸಲು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಬಾಲ್ಕನಿಗಳಲ್ಲಿ ದೀಪ ಹಚ್ಚುವಂತೆ” ದೇಶದ ಜನತೆಯಲ್ಲಿ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ವೈರಸ್ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ತನ್ನ ಮೂರನೇ ಭಾಷಣ ಇದಾಗಿದ್ದು, ಏಪ್ರಿಲ್ 5 ರ ಭಾನುವಾರದಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳ ದೀಪಗಳನ್ನು ಸ್ವಿಚ್ ಆಫ್ ಮಾಡಿ, ದೀಪಗಳು, ಮೇಣದ ಬತ್ತಿಗಳು, ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯ ಈ ಕರೆ‌ಗೆ ಟ್ವಿಟ್ಟರ್‌ನಲ್ಲಿ ಬೆಂಬಲ ಹಾಗೂ ತೀವ್ರ ಟೀಕೆಗಳ ಸುರಿಮಳೆಯನ್ನೇ ಉಂಟುಮಾಡಿದೆ. ಕೊರೊನ ವೈರಸ್‌ ವಿರುದ್ಧ ಹೋರಾಡಲು ಟೆಸ್ಟಿಂಗ್‌ ಕಿಟ್‌ಗಳು, ವೈದ್ಯಕೀಯ ಸಲಕರಣೆಗಳು, ಸುಸಜ್ಜಿತ ಆಸ್ಪತ್ರೆಗಳ ಮೇಲೆ ಗಮನ ನೀಡುವುದನ್ನು ಬಿಟ್ಟು ಕೇವಲ ಹೇಳಿಕೆ-ಟಾಸ್ಕ್‌ಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು “ಪ್ರಧಾನ ಶೋ ಮ್ಯಾನ್‌ನ ಭಾಷಣ ಕೇಳಿದೆ,  ಜನರ ನೋವು, ಹೊರೆ ಮತ್ತು ಆರ್ಥಿಕ ಆತಂಕಗಳನ್ನು ಕಡಿಮೆ ಮಾಡಲು ಏನನ್ನೂ ಮಾಡಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಸ್ವಾತಿ ಚತುರ್ವೇದಿ ಅವರು ’’ದೀಪಗಳ ಮೇಲೆ ಈ ಸ್ವಿಚ್ ಏನನ್ನು ಸಾಧಿಸಲಿದೆ? ನಮಗೆ ಹೆಚ್ಚಿನ ಪರೀಕ್ಷೆಗಳು, ಮುಖವಾಡಗಳು, ಆಸ್ಪತ್ರೆಗಳು ಮತ್ತು ರಕ್ಷಣಾ ಸಾಧನಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಅವರು “ಕೊರೊನವನ್ನು ಒಟ್ಟಿಗೆ ಸೋಲಿಸೋಣ, ತಾಯಿ ಭಾರತಿ ಗೆಲ್ಲಲಿ. ಏಪ್ರಿಲ್ 5 ರ ಭಾನುವಾರದಂದು ನೆನಪಿಡಿ, ನಿಮ್ಮ ಬಾಲ್ಕನಿಯಲ್ಲಿ ಅಥವಾ ಬಾಗಿಲಿನ ಹೊರಗೆ 9 ನಿಮಿಷಗಳ ಕಾಲ ನಿಮ್ಮ ಕೈಯಲ್ಲಿ ಒಂದು ಬೆಳಕನ್ನು ಇರಿಸಿ ಮತ್ತು ಈ ಹೋರಾಟದಲ್ಲಿ ನಾವೆಲ್ಲರೂ ಒಟ್ಟಾಗಿರುವುದನ್ನು ನೆನಪಿಸಿ” ಎಂದು ಹೇಳಿದ್ದಾರೆ.

ಮೀಮ್ಸ್‌ಗಳಂತೂ ಕೆಲವೇ ಗಂಟೆಗಳಲ್ಲಿ ವೈರಲ್‌ ಆಗಿವೆ. ಕೆಲವೊಂದು ಇಲ್ಲಿವೆ

 

ಪತ್ರಕರ್ತ ಅತುಲ್ ಚೌರಾಸಿಯಾ ಕೂಡ ಪ್ರಧಾನಿ ವೈದ್ಯಕೀಯ ಸೌಲಭ್ಯ ಮತ್ತು ಭವಿಷ್ಯದ ವೈದ್ಯಕೀಯ ಯೋಜನೆಯ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. “ಆದರೆ ಅವರು ಮತ್ತೊಂದು ನಾಟಕಕ್ಕಾಗಿ ಮನವಿ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಇತಿಹಾಸಕಾರ ರಾಮಚಂದ್ರ ಗುಹಾ ಅವರು ಪ್ರಧಾನ ಮಂತ್ರಿಯ ಭಾಷಣವನ್ನು ‘ದುರಂತದ ಸಮಯದಲ್ಲಿ ಒಂದು ಪ್ರಹಸನ’ ಎಂದು ಬಣ್ಣಿಸಿದರು.

 

ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರು ಪ್ರಧಾನಿಯ ಕರೆಯನ್ನು ಬೆಂಬಲಿಸಿ, “ಪ್ರಧಾನಿ ಮೋದೀಜಿಯವರ ಕರೆಯ ಹಿನ್ನೆಲೆಯಲ್ಲಿ ನಾಳೆ ಮೈಸೂರು ನಗರ ಅಧ್ಯಕ್ಷರಾದ ಶ್ರೀವತ್ಸ ಅವರ ನೇತೃತ್ವದಲ್ಲಿ ದೀಪ ಮತ್ತು ಕ್ಯಾಂಡಲುಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.

ಸಂಘ ಪರಿವಾರದ ಸಾಮಾಜಿಕ ಮಾಧ್ಯಮ ತಪ್ಪು ಮಾಹಿತಿ ಅಭಿಯಾನದಲ್ಲಿ ತೊಡಗಿವೆ. 9 ನಿಮಿಷಗಳ ಬೆಳಕು ವೈರಸ್ ಅನ್ನು ಹೇಗೆ ಕೊಲ್ಲುತ್ತದೆ ಎಂಬುದರ ಕುರಿತು ನಾವು ಎಷ್ಟು ಬೇಗ ವಾಟ್ಸಾಪ್ ಫಾರ್ವರ್ಡ್‌ಗಳನ್ನು ಪಡೆಯುತ್ತೇವೆ ಎಂದು ಪತ್ರಕರ್ತ ರೋಹನ್ ವೆಂಕಟ್ ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...