Homeಮುಖಪುಟಕೊರೋನಾ: ಭವಿಷ್ಯದ ಸುಳ್ಳು ಸುದ್ದಿಗಳು

ಕೊರೋನಾ: ಭವಿಷ್ಯದ ಸುಳ್ಳು ಸುದ್ದಿಗಳು

ಸಾಬರಿಂದ ಹಬ್ಬಿತು ವೈರಸ್ ಎಂದು ಇನ್ನೊಂದು ಸುಳ್ಳುಸುದ್ದಿ ಹರಡಿಸುತ್ತಾರೆ. ಆದರೆ ಅದಕ್ಕೆ ಕಾರಣ ಅವರು ಸಾಬರಾಗಿರುವುದು ಅಲ್ಲದೇ ಇನ್ನೊಂದು ಬಹುಮುಖ್ಯ ಕಾರಣವಿದೆ.

- Advertisement -
- Advertisement -

ಮುಂದಿನೆರಡು ತಿಂಗಳಿನಲ್ಲಿ, ಕೊರೊನಾ ಹತೋಟಿಗೆ ಬಂದರೆ, ಬಿಜೆಪಿ ಹಬ್ಬಿಸುವ ಸುಳ್ಳುಸುದ್ಧಿಗಳು ಇಂತಿರಲಿವೆ:

– ಭಾರತಕ್ಕೆ ಬರಲು ಹೆದರಿತೆ ಕೊರೋನಾ? ನೋಡಿ ಮೋದಿ ಯೋಗದ ಪರಿಣಾಮ!

– ವುಹಾನ್‌ನಲ್ಲಿ ಕೊರೋನಾ ವೈರಸ್ ಗೆಳತಿಯ ವೇಷ ಧರಿಸಿ ವೈರಸ್‌ನನ್ನೇ ಕೊಂದ ಧೋವಲ್!

– ಅಮಿ_ ಶಾ_ ದಡಿಯಲ್ಲಿ ವಿಲವಿಲ ಒದ್ದಾಡಿದ ದಡ್ಡ ಕೊರೋನಾ!

ಕೊರೋನಾಸುರನನ್ನು ಕೊಂದ ಕಾರಣಕ್ಕಷ್ಟೇ ಅಲ್ಲದೇ, ಭಾರತದಲ್ಲಿ ಈ ವೈರಸ್‌ನ ರಗಳೆ ಮುಂದೆ ಹೆಚ್ಚು ಹಬ್ಬದೇ ಹೋದರೆ ಅದಕ್ಕೆ ಇನ್ನೂ ಕೆಲವು ಕಾರಣಗಳಿವೆ. ಅವು ಹೀಗಿವೆ.

ನಮ್ಮ ದೇಶದ ಜಿಡಿಪಿ ಪ್ರವಾಸೋದ್ಯಮದ ಕಾರಣದಿಂದ 9% ನಷ್ಟು ಗಳಿಸುತ್ತದೆ. ಆದರೆ ಚೈನಾದಿಂದ ನಮ್ಮಲ್ಲಿ ಬರುವ ಪ್ರವಾಸಿಗರ ಸಂಖ್ಯೆ ಅತ್ಯಂತ ಅಲ್ಪ. (ಉತ್ತರ ಇಟಲಿಯ ಸಮಸ್ಯೆ ಮುಖ್ಯವಾಗಿ ಉಂಟಾದದ್ದೇ ಚೀನಾದ ಪ್ರವಾಸಿಗರ ಕಾರಣದಿಂದ. ಅದು ದಕ್ಷಿಣ ಜರ್ಮನಿಯ ಬವೇರಿಯಾ ಪ್ರಾಂತ್ಯಕ್ಕೆ ದಾಟಿದ್ದು ಶೆಂಗಿಯನ್ ದೇಶಗಳಿಗೆ ಪೋರಸ್ ಗಡಿಗಳಿರುವ ಕಾರಣದಿಂದ). ಮಲೇಷ್ಯಾ ಹೊರತುಪಡಿಸಿದರೆ ಪೂರ್ವ ಏಷ್ಯಾದಿಂದ ಭಾರತಕ್ಕೆ ಬರುವ ಪ್ರವಾಸಿಗರು ಅತ್ಯಂತ ಕಡಿಮೆ. ಯೂರೋಪಿನಿಂದ ಭಾರತಕ್ಕೆ ಬರುವ ಪ್ರವಾಸಿಗರು ಬೇಸಿಗೆಯಲ್ಲಿ ಹೆಚ್ಚು ಬರುತ್ತಾರೆಯೇ ಹೊರತು, ನಮ್ಮ ಚಳಿಗಾಲದಲ್ಲಿ ಅಲ್ಲ.

ಸೇವೆ ಆಧಾರಿತ ಎಕಾನಮಿಯ ದೇಶವಾದ ನಮ್ಮಿಂದ ಯುರೋಪಿಗೋ, ಅಮೇರಿಕಾಕ್ಕೋ ಹೋಗುವ ಜನಗಳು ಬಹಳ ಕಡಿಮೆ. ಉತ್ಪನ್ನಾಧರಿತ ದೇಶವಾದ ಚೈನಾದಿಂದ ಹೊರದೇಶಗಳಿಗೆ ಭೇಟಿ ಕೊಡುವ ಜನರೂ, ವಸ್ತುಗಳೂ ಬಹಳ ಹೆಚ್ಚು. (ನಾವು ಹೆಚ್ಚೆಂದರೆ ಸಾಫ್ಟ್ ವೇರ್ ವೈರಸ್ ಉಂಟುಮಾಡಿ ಹರಡಬಹುದಷ್ಟೇ! ಆದರೆ ಕಮ್ಯೂನಲ್ ವೈರಸ್ ಹರಡುವುದರಲ್ಲೇ ಬಿಝಿಯಾದ ನಮ್ಮ ಸಾಫ್ಟ್-ವೇರ್ ಇಂಜಿನೀರುಗಳಿಗೆ ಅಷ್ಟು ತಲೆಯಾಗಲೀ ವ್ಯವಧಾನವಾಗಲೀ ಇಲ್ಲ.) ಹಾಗಾಗಿ, ಬಹುಷಃ ನಮ್ಮ ದೇಶಕ್ಕೆ ಈ ವೈರಸ್ ಹೆಚ್ಚು ಬಂದಿರದೇ ಇರಬಹುದು.

ಸಾಬರಿಂದ ಹಬ್ಬಿತು ವೈರಸ್ ಎಂದು ಇನ್ನೊಂದು ಸುಳ್ಳುಸುದ್ದಿ ಹರಡಿಸುತ್ತಾರೆ. ಆದರೆ ಅದಕ್ಕೆ ಕಾರಣ ಅವರು ಸಾಬರಾಗಿರುವುದು ಅಲ್ಲದೇ ಇನ್ನೊಂದು ಬಹುಮುಖ್ಯ ಕಾರಣವಿದೆ.

ಜಗತ್ತಿನ ಏರ್-ಟ್ರಾಫಿಕ್ ಟ್ರಾನ್ಸಿಟ್‌ಗಳಲ್ಲಿ (ಅಂದರೆ ಬೆಂಗಳೂರಿನಿಂದ ಸಾಗರಕ್ಕೆ ಹೋಗುವಾಗ ಸಿಗರೇಟ್ ಸೇದಲು ಬಸ್ ನಿಲ್ಲುವ ಕೆ.ಬಿ ಕ್ರಾಸೋ ಅರಸಿಕೆರೆಯೋ ಅಂಥ ಜಾಗ ಅಂತಿಟ್ಟುಕೊಳ್ಳಿ.) ದುಬೈ ಅತ್ಯಂತ ಮುಖ್ಯ ಏರ್ಪೋರ್ಟ್. ಅದು ಜಗತ್ತಿನ ಅತೀದೊಡ್ಡ ಟ್ರಾನ್ಸಿಟ್ ಏರ್ಪೋರ್ಟ್ಗಳ ಪೈಕಿ ಒಂದು. ವರ್ಷಕ್ಕೆ ಹತ್ತು ಕೋಟಿ ಜನ ಆ ವಿಮಾನ ನಿಲ್ದಾಣದಲ್ಲಿ ಕಾಲಿಡುತ್ತಾರೆ. 12 ನಿಮಿಷಕ್ಕೆ ಒಂದು ಕಿಲೋಮೀಟರ್ ನಡೆಯುವ ನನಗೆ ನಾಲ್ಕು ಕಿಲೋಮೀಟರ್‌ಗಳಷ್ಟಿರುವ ಆ ಏರ್ಪೋರ್ಟ್ನ ತುದಿಯಿಂದ ತುದಿಗೆ ತಲುಪಲು ಗಂಟೆಗಿಂತ ಹೆಚ್ಚು ಹಿಡಿದಿತ್ತು. ಅಂಥ ವಿಸ್ತಾರ ಜಾಗದಲ್ಲಿ ಎಷ್ಟು ಜನಕ್ಕೆ ಹಬ್ಬುವುದೆಂದು ಗೊತ್ತಾಗದೇ ಜಾತಿಧರ್ಮ ಮೀರಿ ಕೊರೊನಾ ಕೈಲಾದಷ್ಟು ಜನರಿಗೆ ಅಂಟಿಕೊಳ್ಳುತ್ತದೆ. ಕೈತೊಳೆಯದ ಜನ ಇನ್ನಷ್ಟು ಹಬ್ಬಿಸುತ್ತಾರೆ. ಮಿಡಲ್ ಈಸ್ಟ್ನಲ್ಲಿ ಸಾಬರಿರುವುದರಿಂದ ಅದು ಅವರ ಗಡ್ಡಕ್ಕೂ ಅಂಟಿಕೊಳ್ಳುವ ಸಾಧ್ಯತೆಯಿದೆ ಹೊರತು, ಅವರು ಸಾಬರೆಂದು ಕೊರೋನಾಕ್ಕೆ ಗೊತ್ತಾಗುವುದಿಲ್ಲ. ಅದು ಗೊತ್ತಾಗುವುದು ನಮ್ಮ ಬಿಜೆಪಿಗಳಿಗೆ ಮಾತ್ರ.

ಇನ್ನೊಂದು ತರ್ಕವಿದೆ. ಇದು ಅನೇಕ ಬಾರಿಯ ವಯಕ್ತಿಕ ಅನುಭವದ್ದು. ಯೂರೋಪಿನಿಂದ ಮತ್ತು ಅಮೆರಿಕಾದಿಂದ ದುಬೈನ ಟ್ರಾನ್ಸಿಟ್‌ವರೆಗೆ ಅತ್ಯಂತ ಒಳ್ಳೆಯ ರೀತಿಯಲ್ಲಿ ಮೇಂಟೇನ್ ಮಾಡಲಾದ ಬೋಯಿಂಗ್ 747 ಜಂಬೋಜೆಟ್‌ಗಳಂತಹ ವಿಮಾನಗಳು ಬರುತ್ತವೆ. ಅಲ್ಲಿಂದ ಇಂಡಿಯಾಕ್ಕೆ ಮತ್ತು ಏಷ್ಯಾದ ದೇಶಗಳಿಗೆ ಬರುವ ವಿಮಾನಗಳು -ಸ್ಯಾನಿಟೇಷನ್‌ನ ದೃಷ್ಟಿಯಿಂದ – ಅಷ್ಟು ಉತ್ತಮವಾಗಿರದ ಏರ್ ಬಸ್ ವಿಮಾನಗಳು.

ಝೀ ಟಿವಿಯ ಸುಧೀರ್ ಚೌಧರಿಯಂಥವರು ಚೀಪ್ (pun intended) ಎಡಿಟರ್ ಆಗಿರುವ, ಆಕ್ಸೆಂಟೆಡ್ ಇಂಗ್ಲಿಷ್ ಮಾತಾಡುವ ನಿರೂಪಕಿ ಇರುವ ವಿಯೋನ್ ಟಿ.ವಿಯ ವರದಿ ಚೈನಾದ ಕುರಿತು ದೊಡ್ಡ ಕಾನ್ಸ್-ಪಿರಸಿ ಥಿಯರಿಯನ್ನು ಹಬ್ಬಿಸುತ್ತಿದೆ. Ravi Belagere ತನಿಖಾ ಪತ್ರಕರ್ತರು ಇದನ್ನು ಹಂಚಿಕೊಳ್ಳುತ್ತಾರೆ. (ನಾನಿಲ್ಲಿ ಚೈನಾವನ್ನು ಖಂಡಿತಾ ಸಪೋರ್ಟ್ ಮಾಡುತ್ತಿಲ್ಲ. ನಮ್ಮ ಮನೆಗೆ ಬಂದು ಊಟ ಮಾಡಿಕೊಂಡು ಹೋಗಿ, ಅವರ ಮನೆಗೆ ಹೋದರೆ ಬಾಗಿಲಲ್ಲಿ ಮಾತಾಡಿಸಿ ಕಳುಹಿಸುವ ದೇಶ ಅದು.) ಆದರೆ ಜಾಗತಿಕ ಡಿಪ್ಲೊಮಸಿ ಮತ್ತು ಎಕನಾಮಿಕ್ಸ್ನ ಕನಿಷ್ಟ ನರಮಂಡಲ ಗೊತ್ತಿದ್ದರೆ ಅಂಥ ಥಿಯರಿಯನ್ನು ಯಾರೂ ನಂಬುವುದಿಲ್ಲ. ಮಾಸ್ಕ್ ಮಾರಿ ಶ್ರೀಮಂತವಾಗುತ್ತದೆ ಚೈನಾ ಎನ್ನುತ್ತಾರೆ ಜನ. ಅಡಿಗೆಮನೆಗೆ ಬೆಂಕಿ ಹಾಕಿ ಅಕ್ಕಿ ಮಾರಲಾಗುವುದಿಲ್ಲ. ಐಫೋನ್ ಕೊಳ್ಳುವವರೆಲ್ಲ ಸತ್ತು ಹೋದರೆ ಅದನ್ನು ಮಾಡುವ ಚೈನಾ ಅದನ್ನು ಅಂಡಿಗೆ ಹಾಕಿಕೊಳ್ಳಬೇಕಷ್ಟೇ.

ಜರ್ಮನಿಯಲ್ಲಿ ಮೂರು ವರ್ಷದಿಂದ ನಾನು ವಾಸಿಸುತ್ತಿರುವ ಬಿಲ್ಡಿಂಗ್‌ನಲ್ಲಿ ಸುಮಾರು 20-25 ಜನ ಚೈನೀಸ್ ಹುಡುಗರನ್ನು ಮಾತಾಡಿಸಲು ಪ್ರಯತ್ನಿಸಿದ್ದೇನೆ. ರಾಜಕೀಯ ಮಾತಾಡಲು ಪ್ರಯತ್ನಿಸಿದರೆ ಒಂದೋ ಹೆದರುತ್ತಾರೆ. ಅಥವಾ I don’t want to spek about it ಎಂದು ನೇರವಾಗಿ ಹೇಳುವಷ್ಟು ಹೆದರುತ್ತಾರೆ. ಒಬ್ಬ ಹುಡುಗ ಮಾತ್ರ ಅಡಿಗೆ ಮನೆಯ ಕಿಟಕಿ ಬಾಗಿಲುಗಳ ಮುಚ್ಚಿ ಕಥೆಗಳನ್ನು ಹೇಳಿದ. ಅದೆಲ್ಲ ನಾವು ಆ ದೇಶದ ಬಗ್ಗೆ ನಂಬಿರುವಂಥದ್ದೇ. ಅಂಥದ್ದೇ ಡಿಕ್ಟೇಟೋರಿಯಲ್ ದೇಶ ನಾವಾಗಲು ಕಾದುಕುಳಿತಿದ್ದೇವೆ. ಬೆಳಿಗ್ಗೆ ಚೈನಾದಂಥ ಆಡಳಿತ ಬರಬೇಕು ಎಂದು ಕೂಗುತ್ತೇವೆ. ಮಧ್ಯಾಹ್ನ ಆ ದೇಶ ಜಗತ್ತಿಗೆ ನ್ಯೂಸ್ ಕೊಡುತ್ತಿಲ್ಲ ಅಂಥ ಬೊಬ್ಬಿರಿಯುತ್ತೇವೆ. ಸಂಜೆ ನಮ್ಮ ಬಗ್ಗೆ ಅಮೇರಿಕನ್ ಮೀಡಿಯಾ ತಪ್ಪಾಗಿ ಬಿಂಬಿಸುತ್ತಿದೆ ಎಂದು ಕನ್ನಡ ಮೀಡಿಯಾಗಳು ಊಳಿಡುತ್ತವೆ.

ಇದೆಲ್ಲ ಬಿಟ್ಟು-

ಒಂದೊಮ್ಮೆ, ಇನ್ಕ್ಯುಬೇಷನ್ ಅವಧಿ ಹೆಚ್ಚಿರುವ ಈ ವೈರಸ್ ಬಂದಿದ್ದು, ಜನರಿಂದ ಜನಕ್ಕೆ ಹರಡಿ ಅದು ಕಾಣಿಸಿಕೊಂಡರೆ, ಅದು ಮುಂದೆರಡು ತಿಂಗಳಿನಲ್ಲಿ – ಈ ಸರ್ಕಾರ ಹಿಂದೂಮುಂದೂ ಯೋಚಿಸದ ರೀತಿಯಲ್ಲಿ ಲಾಕ್ ಡೌನ್ ಮಾಡಿ, ಟೆಸ್ಟುಗಳನ್ನೂ ಸರಿಯಾಗಿ ಮಾಡದೇ ಜನರಿಂದ ಜನರಿಗೆ ಹಬ್ಬುವಂತೆ ಮಾಡಿದ್ದರಲ್ಲಿ ಸಾಬರಿಗೆ ಬಂದಿದ್ದರೆ ಅದು ಕೊರೋನಾದ ತಪ್ಪೇ ಹೊರತು ಸಾಬರದ್ದಲ್ಲ ಎಂದು ಅರ್ಥ.

ಪುಣ್ಯಕ್ಕೆ ಸಾಬರಲ್ಲಿ ಮುಕ್ಕಾಲು ಪಾಲು ಜನ ಕುಡಿಯುವುದಿಲ್ಲ. ಹೆಂಡ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೆದರಿಸುತಿರುವ ಹಿಂದುಗಳಿಗೆ ಹೆಂಡ ಕೊಡುತ್ತಿರುವ ನಾವು ಸಾಬರಿಗೆ ಅದನ್ನೂ ಕೊಡದೇ ಮಜಾ ನೋಡುತ್ತಿದ್ದೆವು. ಆ ಅವಕಾಶ ಮಾತ್ರ ಬಿಜೆಪಿಗೆ ತಪ್ಪಿಹೋಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...