HomeUncategorizedದೀಪ ಹಚ್ಚಲು ಅಭ್ಯಂತರವಿಲ್ಲ, ಆದರೆ ಪ್ರಧಾನಿ ತಾವು ಮಾಡುವ ಕೆಲಸದ ಬಗ್ಗೆ ಗಮನ ಹರಿಸಲಿ...!!

ದೀಪ ಹಚ್ಚಲು ಅಭ್ಯಂತರವಿಲ್ಲ, ಆದರೆ ಪ್ರಧಾನಿ ತಾವು ಮಾಡುವ ಕೆಲಸದ ಬಗ್ಗೆ ಗಮನ ಹರಿಸಲಿ…!!

’ಕೊರೊನಾ ಅವಧಿ’ಯಲ್ಲಿ ಪ್ರಧಾನಿಯವರು ದೇಶವನ್ನುದ್ದೇಶಿಸಿ ಮಾಡಿದ ಮೂರನೇ ಭಾಷಣದ ಕುರಿತು ನಾನುಗೌರಿ.ಕಾಂ ಕೆಲವು ವ್ಯಕ್ತಿಗಳನ್ನು ಮಾತಾಡಿಸಿದಾಗ ಬಂದ ಅಭಿಪ್ರಾಯಗಳನ್ನು ಆಧರಿಸಿ ಬರೆದ ವಿಶೇಷ ವರದಿ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಕರೆಯ ಕುರಿತು ಕೊರೊನಾ ಸೋಂಕು ತಡೆ ಮತ್ತು ಲಾಕ್‌ಡೌನ್‌ ಪರಿಹಾರ ಕಾರ್ಯಗಳಲ್ಲಿ ತೊಡಗಿರುವ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಕೊರೊನ ವೈರಸ್ ವಿರುದ್ದ ರಾಷ್ಟ್ರದ ಸಾಮೂಹಿಕ ಒಗ್ಗಟ್ಟಿನ ಮನೋಭಾವವನ್ನು ಪ್ರದರ್ಶಿಸಲು ಬಾಲ್ಕನಿಗಳಲ್ಲಿ ಆದಿತ್ಯವಾರ ರಾತ್ರಿ ದೀಪ ಹಚ್ಚುವಂತೆ ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ವೈರಸ್ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ತನ್ನ ಮೂರನೇ ಭಾಷಣದಲ್ಲಿ, ಏಪ್ರಿಲ್ 5 ರ ಆದಿತ್ಯವಾರದಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳ ದೀಪಗಳನ್ನು ಸ್ವಿಚ್ ಆಫ್ ಮಾಡಿ, ದೀಪಗಳು, ಮೇಣದ ಬತ್ತಿಗಳು, ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸಬೇಕೆಂದು ಮನವಿ ಮಾಡಿದರು.

ಹೆಸರು ಹೇಳಲಿಚ್ಛಿಸದ ತುಮಕೂರು ಜಿಲ್ಲೆಯ ವೈದ್ಯರೊಬ್ಬರು ’ಪ್ರಧಾನಿಯ ಮಾತು ಒಪ್ಪಿಕೊಳ್ಳುತ್ತೇನೆ, ಸಾಂಕ್ರಾಮಿಕ ರೋಗದ ವಿರುದ್ದ ರಾಷ್ಟ್ರದ ಜನತೆ ಒಗ್ಗಟ್ಟು ಪ್ರದರ್ಶಿಸಬೇಕು, ದೀಪವನ್ನೂ ಹಚ್ಚುತ್ತೇವೆ ಸಮಸ್ಯೆ ಇಲ್ಲ. ಆದರೆ ಪ್ರಸ್ತುತ ಸಮಯದಲ್ಲಿ ಜನತೆ ಪ್ರಧಾನಿಯಿಂದ ಇನ್ನೂ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದರು. ಕೊರೊನ ಲಾಕ್‌ಡೌನ್‌ನಿಂದಾಗಿ ದೇಶದ ಸಂಪತ್ತು ಉತ್ಪಾದಿಸುವ ಕಾರ್ಮಿಕರು ಅನುಭವಿಸುತ್ತಿರುವ ಕಷ್ಟದ ಬಗ್ಗೆ ಹಾಗೂ ಅವರ ಸಮಸ್ಯೆ ಪರಿಹಾರಮಾಡುವ ಬಗ್ಗೆ ದೇಶದ ಪ್ರಧಾನಿಯಗಿ ಮೋದಿ ಮಾತನಾಡುತ್ತಿರಬೇಕಿತ್ತು. ವೈರಸನ್ನು ಹಿಡಿದು ಕೋಮುವಾದೀಕರಣ ಮಾಡುವವರ ಬಗಗೆ ಪ್ರಧಾನಿ ಮಾತನಾಡಬೇಕಿತ್ತು. ಆದರೆ ನಮ್ಮ ಪ್ರಧಾನಿ ಮಾಡಿದ್ದೇನು? ಅದೇ ಹಳೆಯ ಭಾಯಿಯೋಂ ಬೆಹನಿಂದ ಹಿಡಿದು ಕೊನೆಯವರೆಗೂ ಬರಿಯ ಸಪ್ಪೆ ಮಾತುಗಳನ್ನು. ಅವರ ಮಾತುಗಳು ಭಾರತದಂತಹ ಬೃಹತ್ ದೇಶವನ್ನು ಆಳುತ್ತಿರುವ ಒಬ್ಬ ಪ್ರಧಾನಿಯ ಮಾತಿನಂತೆ ಇರಲೇ ಇಲ್ಲ. ನನಗೆ ಕೇಳಿಸಿದ್ದು ಕೇವಲ ಹೊಸ ಸಿನೆಮಾ ಬಂದಾಗ ಚಿತ್ರ ನಟನೊಬ್ಬ ತನ್ನ ಅಭಿಮಾನಿಗಳೊಂದಿಗೆ ಮಾತನಾಡಿದಂತೆ ಅನಿಸುತ್ತಿತ್ತು” ಎಂದು ಹೇಳಿದ್ದಾರೆ.

’ಕೊರೊನ ರೋಗಕ್ಕೆ ಈಗಾಗಲೆ 70 ಕ್ಕಿಂತಲೂ ಹೆಚ್ಚು ಜನರು ಸತ್ತಿದ್ದರೂ ದೇಶದಲ್ಲಿ ಇನ್ನೂ ಆಸ್ಪತ್ರೆಗಳು ಸರಿಯಾಗಿ ಸಜ್ಜುಗೊಂಡಿಲ್ಲ. ಆರೋಗ್ಯ ಸಲಕರಣೆಗಳು ಇನ್ನು ಸಿಗುತ್ತಿಲ್ಲ ಎಂದು ಸುದ್ದಿಗಳು ಬರುತ್ತಿವೆ. ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಮಾತನಾಡಬಹುದಿತ್ತು. ಅದೂ ಇಲ್ಲವೆಂದರೆ ದೇಶದ ಜನರಿಗೆ ಕೊರೊನ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳನ್ನು ಹೋಗಲಾಡಿಸಬಹುದಿತ್ತು. ಯಾಕೆಂದರೆ ಇಂತಹಾ ಸಮಯದಲ್ಲಿ ದೇಶದ ಪ್ರಧಾನಿಗಳ ಮಾತನ್ನು ದೇಶವೇ ಕೇಳಿಸಿಕೊಳ್ಳುತ್ತಿರುತ್ತವೆ, ಇದರಿಂದ ಜನರ ನೆಡುವೆ ಇದ್ದ ಭಯ ಹೋಗಿ ತುಸು ಧೈರ್ಯವಾದರೂ ಬರುತ್ತಿತ್ತು’ ಅವರು ಹೇಳಿದ್ದಾರೆ.

ಗಡಿ ಪ್ರದೇಶವಾದ ಮಧುಗಿರಿ ತಾಲೂಕಿನ ಅನಿಲ್ ಕುಮಾರ್ ಅವರನ್ನು ಮಾತಾಡಿಸಿದಾಗ ಅವರು ಆಂಧ್ರದ ಸ್ಥಿತಿಗೆ ಸಂಬಂಧಿಸಿದ ಫೋಟೋವೊಂದನ್ನು ಕಳಿಸಿ, ಈ ರೀತಿ ಹೇಳಿದರು. ’ದೇಶದಲ್ಲಿ ಪರಿಸ್ಥಿತಿ ಹೇಗಿದೆಯೆಂದರೆ ಈ ಚಿತ್ರದಲ್ಲೇ ನೋಡಿ ಆಂಧ್ರ ಪ್ರದೆಶದ ಎಮ್.ಎಲ್.ಎ ಒಬ್ಬರು, ಕುಂದುರ್ಪಿ ಎಂಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾವು ಮಾತ್ರ  N95 ಮಾಸ್ಕನ್ನು ಹಾಕಿದ್ದಾರೆ, ಅವರ ಹಾಗೂ ಅವರ ಗನ್‌ಮ್ಯಾನ್‌ಗಳು ಕೈಗೆ ಗ್ಲೌಸ್ ಹಾಕಿ ಹಾಕಿದ್ದಾರೆ. ಆದರೆ ಸರಿಯಾಗಿ ಗಮನಿಸಿ ರೋಗಿಗಳನ್ನು ಶುಶ್ರೂಷೆ ಮಾಡುವ ಡಾಕ್ಟರುಗಳು ತನ್ನ ಮುಖಕ್ಕೆ ಕರ್ಚೀಫ್ ಕಟ್ಟಿಕೊಂಡಿದ್ದಾರೆ. ಇದು ನಮ್ಮ ದೇಶದ ಪರಿಸ್ಥಿತಿ. ಬೆಂಗಳೂರಿನ ಹಲವಾರು ಮೆಡಿಕಲ್ ಸ್ಟೋರುಗಳಲ್ಲಿ ಈಗಾಗಲೇ ಮಾಸ್ಕುಗಳು, ಸೋಪುಗಳು ಹಾಗೂ ಹ್ಯಾಂಡ್ ಸ್ಯಾನಿಟೈಝ್ ಇಲ್ಲ ಎಂದು ಬೋರ್ಡುಗಳನ್ನು ಹಾಕಿಕೊಂಡಿವೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳು ಇವುಗಳ ಬೇಡಿಕೆಗಳನ್ನು ಪೂರೈಸುವುದನ್ನು ಬಿಟ್ಟು ಚಪ್ಪಾಳೆ, ದೀಪ ಹಚ್ಚುವುದು, ಮೆರವಣಿಗೆ ಮಾಡುವ ಬಗ್ಗೆ ಮಾತನಾಡುತ್ತಾ ಕೂತಿದೆ. ಖಂಡಿತವಾಗಿಯೂ ಇದು ಜವಾಬ್ದಾರಿಯುತ ಸರ್ಕಾರ ಅಲ್ಲವೇ ಅಲ್ಲ.’ ಎಂದು ಅನಿಲ್ ಕುಮಾರ್ ತಿಳಿಸಿದರು.

ಈ ಬಗ್ಗೆ ಪಬ್ಲಿಕ್ ಹೆಲ್ತ್ ಎಕ್ಸ್‌ಪರ್ಟ್‌  ಡಾ. ಸಿಲ್ವಿಯ ಅವರು ಪ್ರತಿಕ್ರಿಯಿಸುತ್ತಾ “ದೇಶವನ್ನು ಲಾಕ್‌ಡೌನ್‌ ಮಾಡುವುದು ಒಂದು ದೊಡ್ಡ ಜವಾಬ್ದಾರಿ. ಲಾಕ್‌ಡೌನ್‌ ಮಾಡುವುದಕ್ಕಿಂತ ಮುಂಚೆ ಹಲವಾರು ತಯಾರಿಗಳು ಮಾಡಿಕೊಳ್ಳಬೇಕಾಗುತ್ತದೆ. ಜನರಿಗೆ ಯಾವುದೆ ತೊಂದರೆ ಆಗದೇ ಇರುವ ರೀತಿಯಲ್ಲಿ ಲಾಕ್‌ಡೌನ್‌ ಮಾಡುವ ತಯಾರಿ ಆಗಬೇಕಿತ್ತು. ಆದರೆ ಸರ್ಕಾರ ಈಗ ಮಾಡಿರುವುದೇನೆಂದರೆ ನಾವು ಲಾಕ್‌ಡೌನ್‌ ಮಾಡುತ್ತೇವೆ ನೀವು ಏನು ಬೇಕಾದರೂ ಮಾಡಿಕೊಳ್ಳಿ, ನೀವು ಲಾಕ್‌ಡೌನ್‌ ಮಾಡಿಲ್ಲವೆಂದರೆ ನಾವು ನಿಮ್ಮನ್ನು ಶಿಕ್ಷೆಗೊಳಪಡಿಸುತ್ತೇವೆ ಎಂದು ಹೇಳುತ್ತಿದೆ” ಎಂದರು.

“ಲಾಕ್‌ಡೌನ್‌ ಹೇಗೆ ಮಾಡಬೇಕೆಂದು ಬೀದಿಯ ಸಾಮನ್ಯ ಮನುಷ್ಯನ ಬಳಿ ಹೊಗಿ ಕೇಳಿದರೂ ಅವರೇ ಅದರ ಬಗ್ಗೆ ಸರಳವಾಗಿ ಹೇಳುತ್ತಾರೆ. ಇದಕ್ಕೆಲ್ಲ ದೊಡ್ಡ ಮಟ್ಟದ ಜ್ಞಾನ ಬೇಕಾಗಿಲ್ಲ, ಇಷ್ಟನ್ನೂ ನಮ್ಮ ಸರ್ಕಾರ ಮಾಡಿಲ್ಲ. ಲಾಕ್‌ಡೌನ್‌ ಸಮಯದಲ್ಲಿ ಏನು ತಿನ್ನುತ್ತಾರೆ, ತುರ್ತು ಪರಿಸ್ಥಿತಿಯ ಅಗತ್ಯ ಬಂದರೆ ಏನು ಮಾಡಬೇಕು, ಉದ್ಯೋಗ ಕಳೆದುಕೊಂಡರೆ ಏನು ಮಾಡಬೇಕು, ದಿನಗೂಲಿ ಕಾರ್ಮಿಕರು ಏನು ಮಾಡಬೇಕು ಹೀಗೆ ಯಾವುದೆ ರೀತಿಯಲ್ಲಿ ಚಿಂತಿಸದೆ ಏಕಾಏಕಿ ಲಾಕ್‌ಡೌನ್ ಘೋಷಿಸಿ ಕ್ಯಾಂಡಲ್ ಹಚ್ಚಿ, ಪ್ಲೇಟ್ ಹೊಡೆಯಿರಿ, ಚಪ್ಪಾಳೆ ತಟ್ಟಿ ಎಂದು ಹೇಳುತ್ತಾರೆಂದರೆ ನಮ್ಮ ದೇಶದಲ್ಲಿ ಇರುವ ಮೂಡನಂಬಿಕೆಯ ಬಗ್ಗೆ ಅರಿವಾಗುತ್ತದೆ” ಎಂದು ಡಾ. ಸಿಲ್ವಿಯ ಹೇಳಿದ್ದಾರೆ.

ಪ್ರಪಂಚದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್‌ಡೌನ್‌ ಚಾಲ್ತಿಯಲ್ಲಿದೆ. ಇತರ ದೇಶಗಳಲ್ಲಿ ಹೇಗೆ ನಿಭಾಯಿಸುತ್ತಿದ್ದಾರೆ, ಒಂದು ವಾರಕ್ಕೂ ಹೆಚ್ಚಿನ ಲಾಕ್‌ಡೌನ್‌ನಿಂದ ಕಲಿತ ಪಾಠಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸರ್ವಪಕ್ಷ ಸಮಾಲೋಚನೆ ನಡೆಸಿ ಪ್ರಧಾನಿ ಮೋದಿ ಅವರು ದೇಶದ ಜನರ ಆತಂಕವನ್ನು ಹೋಗಲಾಡಿಸುತ್ತಾರೆ ಎಂಬ ನಿರೀಕ್ಷೆ ಮತ್ತೊಮ್ಮೆ ಮನ್‌ಕಿ ಬಾತ್‌ನಲ್ಲಿ ಹುಸಿಯಾಗದಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪ್ರದಾನಿಗಳ ಕರೆಗೆ ನಾವು ಸ್ಪಂದಿಸುವುದು ಕೇವಲ ೯ ನಿಮಿಷ ಮಾತ್ರ. ಅದೂ ಸಾಮೂಹಿಕವಾಗಿ ಮಾನಸಿಕ ದೃಢತೆಯನ್ನೂ, ಏಕತೆಯನ್ನೂ ಪ್ರದರ್ಶಿಸುವ, ಸೋಂಕಿಗೆ ಒಳಗಾಗಿರುವ ಜನರಿಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಸಲುವಾಗಿ ಭಾಗವಹಿಸುವ ಒಂದು ಪ್ರಕ್ರಿಯೆ. ಶ್ರೀಮತಿ ಡಾಕ್ಟರ್ ಸಿಲ್ಲಿ ವಿಮಾ ಅವರು ತಿಳಿಯೋಣವಾಗಲಿ. ಭಾರತೀಯತೆ ಎಂದರೇ ಆಧ್ಯಾತ್ಮ. ಅದು ನಮ್ಮತನ, ಪಾಶ್ಚಾತ್ಯರೇ ಭಾರತದತ್ತ ತಿರುಗಿ ನೋಡುತ್ತಿರುವಾಗ, ವಿಶ್ವ ಆರೋಗ್ಯ ಸಂಸ್ಥೆಯೇ ಭಾರತವನ್ನು ಮುಂದಾಳತ್ವ ವಹಿಸಲು ಬೇಡುತ್ತಿರುವಾಗ ನಮ್ಮದೇ ಜನರ ಮನಸ್ತಿತಿ ಕಂಡು ಮರುಗಬಹುದಷ್ಟೆ.

  2. Problems will not get solved by speech of Prime minister or by this article of this author.there was no need for both these. Don’t waste time publishing these

  3. Thinking our PM is not doing his job & imposing same on other readers is an absolute rubbish article…
    Allowing time to lockdown in our country with such huge population is just doing a massive blunder..
    We have seen how there is a mass flow with all the restrictions.,..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...