Homeಮುಖಪುಟನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

- Advertisement -
- Advertisement -

I, a citizen of Republic of India

ನಾನು,

ಭಾರತ ಗಣರಾಜ್ಯದ ಪ್ರಜೆಯೇ ಹೊರತು ಯಾವುದೋ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ ಕರೆಗೆ ತಕ್ಕಂತೆ ತಿಪ್ಪರಲಾಗ ಹಾಕುವ ಬಫೂನ್ ಅಲ್ಲ.

ಹಲವಾರು ದೇಶಗಳಲ್ಲಿ ನಾಯಕರು ದಿನದ ಕೊನೆಯಲ್ಲಿ ಕರೋನಾ ವಿರುದ್ಧ ಸಾರಿರುವ ಸಮರದಲ್ಲಿ ಆ ದಿನದ ಬೆಳವಣಿಗೆಗಳೇನು ಎನ್ನುವುದನ್ನು ಹಂಚಿಕೊಳ್ಳಲು ಪ್ರಜೆಗಳೊಂದಿಗೆ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಹಾಗೆಯೇ ಅಲ್ಲಿನ ಮಾಧ್ಯಮಗಳು ಸರಕಾರವನ್ನು ಕಾರ್ಯಬದ್ಧವಾಗಿಸಲು ತುರ್ತಿನ ಪ್ರಶ್ನೆಗಳನ್ನು ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ.

ಆದರೆ ನಾವಿಲ್ಲಿ, ಯಾರದೋ ತಾಳಕ್ಕೆ ಕುಣಿಯುವ ಕೋತಿಗಳಾಗಿದ್ದೇವೆ.

ನಾನು ಈ ದೇಶದ ಪ್ರಜೆಯಾಗಿ ಹಕ್ಕೊತ್ತಾಯದಿಂದ ಕೆಲವು ಮಾಹಿತಿಯನ್ನು ತಿಳಿಯಲು ಇಚ್ಛಿಸುತ್ತಿದ್ದೇನೆ. ಈ ದೇಶದಲ್ಲಿ, ಈ ದಿನ

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಲಭ್ಯವಿರುವ PPE ಗಳು ಎಷ್ಟು?

ಎಷ್ಟು ಆಸ್ಪತ್ರೆಗಳು, ವೆಂಟಿಲೇಟರುಗಳು ಮತ್ತು ತೀವ್ರ ನಿಗಾ ಘಟಕಗಳು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಯಾರಿವೆ?

ಕರೋನಾ ಪರೀಕ್ಷೆಯ ಸೌಲಭ್ಯ ಎಲ್ಲರಿಗೆ ದೊರೆಯುವ ರೀತಿಯಲ್ಲಿ ನಾವೆಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ?

ದಿನಗೂಲಿಯವರ, ಮನೆಯಿಲ್ಲದವರ, ನಿರುದ್ಯೋಗಿಗಳ ಮತ್ತು  ವಲಸೆ ಕೆಲಸಗಾರರ ದಯನೀಯ ಸ್ಥಿತಿಯನ್ನು ಉತ್ತಮಪಡಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ?

ಬೀದಿಗೆ ಬಿದ್ದು  ನೂರಾರು ಕಿಲೋಮೀಟರುಗಳನ್ನು ಸವೆಸುತ್ತಿರುವ ವಲಸೆ ಕೆಲಸಗಾರರ ಆಹಾರ ಮತ್ತು ವೈದ್ಯಕೀಯ ಅಗತ್ಯಗಳ ಪಾಡೇನು?

ಬೆಳೆದಿದ್ದನ್ನು ಮಾರಲಾಗದೆ ಅಸಹಾಯರಾಗಿ ಕೈಚೆಲ್ಲಿ ಕೂತಿರುವ ರೈತರ ಗತಿಯೇನು?

ಮನೆಯಲ್ಲಿ ಬಂಧಿತರಾಗಿರುವ ಹೆಂಗಸರು ಮತ್ತು ಮಕ್ಕಳು ಎದುರಿಸುತ್ತಿರುವ ಕೌಟುಂಬಿಕ ದೌರ್ಜನ್ಯಗಳ ರೂಪಗಳು ಯಾವುವು? ಪರಿಹಾರಗಳೇನು?

ತೃತೀಯ ಲಿಂಗಿಗಳ ಮತ್ತು ಲೈಂಗಿಕ ಕೆಲಸಗಾರರು ಈ ಲಾಕ್ ಡೌನ್ ಅವಧಿಯಲ್ಲಿ ಬದುಕನ್ನು ಹೇಗೆ ಸಾಗಿಸಬೇಕು? ಅವರಿಗೆ ಸರಕಾರ ಏನು ಮಾಡುತ್ತಿದೆ?

ಮೋದಿ ಸರಕಾರಕ್ಕೆ ನಾನು ಕೇಳಬೇಕಾದ ಪ್ರಶ್ನೆಗಳು ಇನ್ನೂ ಹಲವಾರಿವೆ.

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

ಸರಕಾರ ಈ ಕೆಲವು ಪ್ರಶ್ನೆಗಳಿಗಾದರೂ ಸ್ಪಂದಿಸಿ ‘ಬೆಳಕನ್ನು’ ಚೆಲ್ಲಲ್ಲಿ ಎಂದು ಕೇಳಿಕೊಳ್ಳುತ್ತೇನೆ.

ಮತ್ತೊಮ್ಮೆ ಇದನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ:

ನಾನೊಬ್ಬ ಭಾರತ ಗಣರಾಜ್ಯದ ಪ್ರಜೆ
ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ  ಕೋತಿಯಲ್ಲ.

– ವೃಂದಾ ಗ್ರೋವರ್‌

ಕನ್ನಡಕ್ಕೆ: ಸುಕನ್ಯಾ ಕನಾರಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...