Homeಮುಖಪುಟನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ನಾನು ಭಾರತ ಗಣರಾಜ್ಯದ ಪ್ರಜೆಯೇ ಹೊರತು ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ ಕೋತಿಯಲ್ಲ. 

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

- Advertisement -
- Advertisement -

I, a citizen of Republic of India

ನಾನು,

ಭಾರತ ಗಣರಾಜ್ಯದ ಪ್ರಜೆಯೇ ಹೊರತು ಯಾವುದೋ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ ಕರೆಗೆ ತಕ್ಕಂತೆ ತಿಪ್ಪರಲಾಗ ಹಾಕುವ ಬಫೂನ್ ಅಲ್ಲ.

ಹಲವಾರು ದೇಶಗಳಲ್ಲಿ ನಾಯಕರು ದಿನದ ಕೊನೆಯಲ್ಲಿ ಕರೋನಾ ವಿರುದ್ಧ ಸಾರಿರುವ ಸಮರದಲ್ಲಿ ಆ ದಿನದ ಬೆಳವಣಿಗೆಗಳೇನು ಎನ್ನುವುದನ್ನು ಹಂಚಿಕೊಳ್ಳಲು ಪ್ರಜೆಗಳೊಂದಿಗೆ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಹಾಗೆಯೇ ಅಲ್ಲಿನ ಮಾಧ್ಯಮಗಳು ಸರಕಾರವನ್ನು ಕಾರ್ಯಬದ್ಧವಾಗಿಸಲು ತುರ್ತಿನ ಪ್ರಶ್ನೆಗಳನ್ನು ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ.

ಆದರೆ ನಾವಿಲ್ಲಿ, ಯಾರದೋ ತಾಳಕ್ಕೆ ಕುಣಿಯುವ ಕೋತಿಗಳಾಗಿದ್ದೇವೆ.

ನಾನು ಈ ದೇಶದ ಪ್ರಜೆಯಾಗಿ ಹಕ್ಕೊತ್ತಾಯದಿಂದ ಕೆಲವು ಮಾಹಿತಿಯನ್ನು ತಿಳಿಯಲು ಇಚ್ಛಿಸುತ್ತಿದ್ದೇನೆ. ಈ ದೇಶದಲ್ಲಿ, ಈ ದಿನ

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಲಭ್ಯವಿರುವ PPE ಗಳು ಎಷ್ಟು?

ಎಷ್ಟು ಆಸ್ಪತ್ರೆಗಳು, ವೆಂಟಿಲೇಟರುಗಳು ಮತ್ತು ತೀವ್ರ ನಿಗಾ ಘಟಕಗಳು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ನಿಭಾಯಿಸಲು ತಯಾರಿವೆ?

ಕರೋನಾ ಪರೀಕ್ಷೆಯ ಸೌಲಭ್ಯ ಎಲ್ಲರಿಗೆ ದೊರೆಯುವ ರೀತಿಯಲ್ಲಿ ನಾವೆಷ್ಟು ಬೆಳವಣಿಗೆಯನ್ನು ಸಾಧಿಸಿದ್ದೇವೆ?

ದಿನಗೂಲಿಯವರ, ಮನೆಯಿಲ್ಲದವರ, ನಿರುದ್ಯೋಗಿಗಳ ಮತ್ತು  ವಲಸೆ ಕೆಲಸಗಾರರ ದಯನೀಯ ಸ್ಥಿತಿಯನ್ನು ಉತ್ತಮಪಡಿಸಲು ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ?

ಬೀದಿಗೆ ಬಿದ್ದು  ನೂರಾರು ಕಿಲೋಮೀಟರುಗಳನ್ನು ಸವೆಸುತ್ತಿರುವ ವಲಸೆ ಕೆಲಸಗಾರರ ಆಹಾರ ಮತ್ತು ವೈದ್ಯಕೀಯ ಅಗತ್ಯಗಳ ಪಾಡೇನು?

ಬೆಳೆದಿದ್ದನ್ನು ಮಾರಲಾಗದೆ ಅಸಹಾಯರಾಗಿ ಕೈಚೆಲ್ಲಿ ಕೂತಿರುವ ರೈತರ ಗತಿಯೇನು?

ಮನೆಯಲ್ಲಿ ಬಂಧಿತರಾಗಿರುವ ಹೆಂಗಸರು ಮತ್ತು ಮಕ್ಕಳು ಎದುರಿಸುತ್ತಿರುವ ಕೌಟುಂಬಿಕ ದೌರ್ಜನ್ಯಗಳ ರೂಪಗಳು ಯಾವುವು? ಪರಿಹಾರಗಳೇನು?

ತೃತೀಯ ಲಿಂಗಿಗಳ ಮತ್ತು ಲೈಂಗಿಕ ಕೆಲಸಗಾರರು ಈ ಲಾಕ್ ಡೌನ್ ಅವಧಿಯಲ್ಲಿ ಬದುಕನ್ನು ಹೇಗೆ ಸಾಗಿಸಬೇಕು? ಅವರಿಗೆ ಸರಕಾರ ಏನು ಮಾಡುತ್ತಿದೆ?

ಮೋದಿ ಸರಕಾರಕ್ಕೆ ನಾನು ಕೇಳಬೇಕಾದ ಪ್ರಶ್ನೆಗಳು ಇನ್ನೂ ಹಲವಾರಿವೆ.

ಈ ದುರ್ಭರ ಕಾಲದಲ್ಲಿ ಬೆಳಕೆಂದರೆ ಜ್ಞಾನ ಮತ್ತು ಮಾಹಿತಿ.

ಸರಕಾರ ಈ ಕೆಲವು ಪ್ರಶ್ನೆಗಳಿಗಾದರೂ ಸ್ಪಂದಿಸಿ ‘ಬೆಳಕನ್ನು’ ಚೆಲ್ಲಲ್ಲಿ ಎಂದು ಕೇಳಿಕೊಳ್ಳುತ್ತೇನೆ.

ಮತ್ತೊಮ್ಮೆ ಇದನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ:

ನಾನೊಬ್ಬ ಭಾರತ ಗಣರಾಜ್ಯದ ಪ್ರಜೆ
ಶೀಟಿ ಊದಿದ ತಕ್ಷಣ ಪಲ್ಟಿ ಹೊಡೆಯಲಾರಂಭಿಸುವ  ಕೋತಿಯಲ್ಲ.

– ವೃಂದಾ ಗ್ರೋವರ್‌

ಕನ್ನಡಕ್ಕೆ: ಸುಕನ್ಯಾ ಕನಾರಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...