Homeಕರ್ನಾಟಕದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

- Advertisement -
- Advertisement -

ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ ಎಂದು ಮೈಸೂರಿನ ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಬ್ಯಾಟರಿ, ಮೊಬೈಲ್ ಟಾರ್ಚ್ ಹೊತ್ತಿಸಿ ಕೊರೊನ ವಿರುದ್ದ ದೇಶದ ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ರಾಮದಾಸ್ ಜನರಿಗೆ ದೀಪ, ಕ್ಯಾಂಡಲ್ ಹಂಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಕೊರೊನಾ ವಿರುದ್ದ ಕಳೆದ ಬಾರಿ ಜನರು ಚಪ್ಪಾಳೆ ತಟ್ಟಿ, ಶಂಖ-ಜಾಗಟೆ ಊದುವ ಮೂಲಕ ಇಡೀ ದೇಶ ಕೊರೊನಾ ವಿರುದ್ದ ಯುದ್ದ ಮಾಡಿದೆ. ಚಪ್ಪಾಳೆ ಹೊಡಿದ ಶಬ್ದ ತರಂಗದ ಮುಖಾಂತರ ವೈರಸ್ ಸಾಯುತ್ತದೆ ಎಂದು ವೈಜ್ಞಾನಿಕವಾಗಿ ಸಾಬಿತಾಗಿದೆ” ಎಂದು ಹೇಳಿದರು.

“ಕಳೆದ ಭಾರಿಯಂತೆ ಈ ಭಾರಿಯೂ ಪ್ರಧಾನ ಮಂತ್ರಿಯ ಮನವಿಯಂತೆ ಭಾನುವಾರ ರಾತ್ರಿ ವಿದ್ಯುತ್ ಆಫ್ ಮಾಡಿ ಕತ್ತಲಲ್ಲಿದ್ದು 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಕನ್ನು ಹಾಕಬೇಕು. ಇದು ಕೊರೊನ ವಿರುದ್ದ ದೇಶ ಇದೆ ಎನ್ನುವ ಜಾಗೃತಿ ಮಾಡುವ ಕೆಲಸವಾಗಿದೆ. ಜಾಗೃತಿ ಮಾಡುದಲ್ಲದೆ ದೀಪದ ಬೆಳಕಿಗೆ ಕ್ರಿಮಿ-ಕೀಟಗಳು ಆಕರ್ಷಣೆಯಾಗುವಂತೆ ಕ್ರಿಮಿಯೂ ಅದರ ಬಳಿ ಬಂದು ಸಾಯುತ್ತದೆ. ದೀಪವೂ ಕತ್ತಲಲ್ಲಿ ಕೇವಲ ಬೆಳಕಾಗಿ ಇರದೆ ಅದು ಒಂದು ಶಕ್ತಿಯಾಗಿ ಪರಿವರ್ತನೆಯಾಗುತ್ತದೆ” ಎಂದು ಹೇಳಿದರಲ್ಲದೆ, “ಮನೆಯೊಳಗಡೆ ಇರುವ ಕ್ರಿಮಿಯನ್ನು ಕೂಡಾ ಸಾಯಿಸುವುದಕ್ಕಾಗಿ ನಾವು ನಮ್ಮದೇ ಜಾಲಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಶಾಸಕರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಒಳಗಾಗಿದೆ. ವೈದ್ಯರು ಕೊರೊನ ಶಾಖಕ್ಕೆ ಸಾಯುವುದಿಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ, ಅದಲ್ಲದೆ ಸಾಮಾಜಿಕ ಅಂತರದ ಬಗ್ಗೆ ಹೇಳುತ್ತಾರೆ ಆದರೆ ಶಾಸಕರು ಜನಸಂದಣಿಯ ನಡುವೆ ಓಡಾಡಿ ದೀಪ ಹಂಚುತ್ತಿದ್ದಾರೆ ಇದು ಕೊರೊನ ವಿರುದ್ದದ ಹೋರಾಟಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರೇಖಾ ಶ್ರೀನಿವಾಸ್ ಎಂಬವರು “ಡಿ ಗ್ರೂಪ್ ಹುದ್ದೆಗೂ ಕೂಡ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಎಲ್ಲದರಲ್ಲೂ ಪರಿಣಿತರಾಗಿರಬೇಕು. ಸ್ಪಧಾ೯ತ್ಮಕ ಪರೀಕ್ಷೆ, ಸಂದಶ೯ನಗಳ ಮೂಲಕ ನೇಮಕಾತಿ ನಡೆಯುತ್ತದೆ. ಆದರೆ ನಮ್ಮ ಜನಪ್ರತಿನಿಧಿಗಳಿಗೆ ಯಾಕೆ ಇವೆಲ್ಲ ಪರೀಕ್ಷೆಗಳಿಲ್ಲ” ಎಂದು ಪ್ರಶ್ನಿಸುತ್ತಾ “ಸರಿಯಾದ ಮಾಹಿತಿ ಗೊತ್ತಿದ್ದರೆ ಮಾತಾಡಿ, ಇಲ್ಲವೇ ಸುಮ್ಮನಿರಿ ಅದು ಬಿಟ್ಟು ಮೂಖ೯ತನದ ಪ್ರದಶ೯ನ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮುಧೋಳದ ಶುಭಾಶ್ ಸಂಗಣ್ಣನವರ್ ಅವರು “ರಾಮದಾಸ್ ಅವರ ಸಮರ್ಥನೆ ಸರಿಯಾಗಿಲ್ಲ, ಸುಮ್ಮನೆ ಏನೇನೋ ಹೇಳುತ್ತಾರೆ. ನಮ್ಮ ಹಳ್ಳಿ ಜನಾ ವಿದ್ಯುತ್ ಕಡಿತದಿಂದ ಪ್ರತಿ ದಿನ ಕ್ಯಾಂಡಲ್ ಹಚ್ಚುತ್ತಾರೆ. ಪ್ರತಾಪಸಿಂಹ ಅವರು ಕೂಡಾ ಸಾರ್ವಜನಿಕರಿಗೆ ಕ್ಯಾಂಡಲ್ ವಿತರಿಸುವ ಬಗ್ಗೆ ಹೇಳುತ್ತಾರೆ ಆದರೆ ಅದರ ಬದಲಿಗೆ ಮಾಸ್ಕ್, ಸ್ಯಾನಿಟೇಷನ್ ಹಂಚಿಲಿ” ಎಂದು ಹೇಳಿದ್ದಾರೆ.

ರಾಮ್‌ದಾಸ್‌ರವರ ಹೇಳಿಕೆಯನ್ನು ಕೊರೊನಾ ಏನಾದರೂ ಓದಿದರೆ ಕರೋನಾ ಜೀವನದಲ್ಲಿ ಜಿಗುಪ್ಸೆ ಬಂದು ನೇಣು ಹಾಕಿಕೊಂಡು ಅಥವಾ ರೈಲಿಗೆ ತಲೆ ಕೊಟ್ಟು ಸೂಸೈಡ್ ಮಾಡಿಕೊಳ್ಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕುಮಾರ್‌ ದಿನೂ ಟ್ರೋಲ್‌ ಮಾಡಿದ್ದಾರೆ.

ಬಿಜೆಪಿ ಶಾಸಕ ರಾಮದಾಸ್ (ಈತ ಡಾಕ್ಟರ್ ಬೇರೆ) ಪ್ರಕಾರ, ದೀಪದ ಶಾಖಕ್ಕೆ ವೈರಸ್ ಢಮಾರ್!
ಹಂಗಿದ್ರೆ ಮೊದ್ಲೇ ಇದನ್ನ ಹೇಳೋಕೆ ಏನಾಗಿತ್ತೋ ಬೇಕೂಫ? ಡಾಕ್ಟರ್ ಸಮುದಾಯಕ್ಕೆ ಕಳಂಕ ಇಂತಹ ಶಾಖಾ ಪೀಡೆಗಳು ಎಂದು ಪತ್ರಕರ್ತರಾದ ಪಿ.ಕೆ ಮಲ್ಲನಗೌಡರ್‌ರವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...