Homeಕರ್ನಾಟಕದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

- Advertisement -
- Advertisement -

ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ ಎಂದು ಮೈಸೂರಿನ ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಬ್ಯಾಟರಿ, ಮೊಬೈಲ್ ಟಾರ್ಚ್ ಹೊತ್ತಿಸಿ ಕೊರೊನ ವಿರುದ್ದ ದೇಶದ ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ರಾಮದಾಸ್ ಜನರಿಗೆ ದೀಪ, ಕ್ಯಾಂಡಲ್ ಹಂಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಕೊರೊನಾ ವಿರುದ್ದ ಕಳೆದ ಬಾರಿ ಜನರು ಚಪ್ಪಾಳೆ ತಟ್ಟಿ, ಶಂಖ-ಜಾಗಟೆ ಊದುವ ಮೂಲಕ ಇಡೀ ದೇಶ ಕೊರೊನಾ ವಿರುದ್ದ ಯುದ್ದ ಮಾಡಿದೆ. ಚಪ್ಪಾಳೆ ಹೊಡಿದ ಶಬ್ದ ತರಂಗದ ಮುಖಾಂತರ ವೈರಸ್ ಸಾಯುತ್ತದೆ ಎಂದು ವೈಜ್ಞಾನಿಕವಾಗಿ ಸಾಬಿತಾಗಿದೆ” ಎಂದು ಹೇಳಿದರು.

“ಕಳೆದ ಭಾರಿಯಂತೆ ಈ ಭಾರಿಯೂ ಪ್ರಧಾನ ಮಂತ್ರಿಯ ಮನವಿಯಂತೆ ಭಾನುವಾರ ರಾತ್ರಿ ವಿದ್ಯುತ್ ಆಫ್ ಮಾಡಿ ಕತ್ತಲಲ್ಲಿದ್ದು 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಕನ್ನು ಹಾಕಬೇಕು. ಇದು ಕೊರೊನ ವಿರುದ್ದ ದೇಶ ಇದೆ ಎನ್ನುವ ಜಾಗೃತಿ ಮಾಡುವ ಕೆಲಸವಾಗಿದೆ. ಜಾಗೃತಿ ಮಾಡುದಲ್ಲದೆ ದೀಪದ ಬೆಳಕಿಗೆ ಕ್ರಿಮಿ-ಕೀಟಗಳು ಆಕರ್ಷಣೆಯಾಗುವಂತೆ ಕ್ರಿಮಿಯೂ ಅದರ ಬಳಿ ಬಂದು ಸಾಯುತ್ತದೆ. ದೀಪವೂ ಕತ್ತಲಲ್ಲಿ ಕೇವಲ ಬೆಳಕಾಗಿ ಇರದೆ ಅದು ಒಂದು ಶಕ್ತಿಯಾಗಿ ಪರಿವರ್ತನೆಯಾಗುತ್ತದೆ” ಎಂದು ಹೇಳಿದರಲ್ಲದೆ, “ಮನೆಯೊಳಗಡೆ ಇರುವ ಕ್ರಿಮಿಯನ್ನು ಕೂಡಾ ಸಾಯಿಸುವುದಕ್ಕಾಗಿ ನಾವು ನಮ್ಮದೇ ಜಾಲಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಶಾಸಕರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಒಳಗಾಗಿದೆ. ವೈದ್ಯರು ಕೊರೊನ ಶಾಖಕ್ಕೆ ಸಾಯುವುದಿಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ, ಅದಲ್ಲದೆ ಸಾಮಾಜಿಕ ಅಂತರದ ಬಗ್ಗೆ ಹೇಳುತ್ತಾರೆ ಆದರೆ ಶಾಸಕರು ಜನಸಂದಣಿಯ ನಡುವೆ ಓಡಾಡಿ ದೀಪ ಹಂಚುತ್ತಿದ್ದಾರೆ ಇದು ಕೊರೊನ ವಿರುದ್ದದ ಹೋರಾಟಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರೇಖಾ ಶ್ರೀನಿವಾಸ್ ಎಂಬವರು “ಡಿ ಗ್ರೂಪ್ ಹುದ್ದೆಗೂ ಕೂಡ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಎಲ್ಲದರಲ್ಲೂ ಪರಿಣಿತರಾಗಿರಬೇಕು. ಸ್ಪಧಾ೯ತ್ಮಕ ಪರೀಕ್ಷೆ, ಸಂದಶ೯ನಗಳ ಮೂಲಕ ನೇಮಕಾತಿ ನಡೆಯುತ್ತದೆ. ಆದರೆ ನಮ್ಮ ಜನಪ್ರತಿನಿಧಿಗಳಿಗೆ ಯಾಕೆ ಇವೆಲ್ಲ ಪರೀಕ್ಷೆಗಳಿಲ್ಲ” ಎಂದು ಪ್ರಶ್ನಿಸುತ್ತಾ “ಸರಿಯಾದ ಮಾಹಿತಿ ಗೊತ್ತಿದ್ದರೆ ಮಾತಾಡಿ, ಇಲ್ಲವೇ ಸುಮ್ಮನಿರಿ ಅದು ಬಿಟ್ಟು ಮೂಖ೯ತನದ ಪ್ರದಶ೯ನ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮುಧೋಳದ ಶುಭಾಶ್ ಸಂಗಣ್ಣನವರ್ ಅವರು “ರಾಮದಾಸ್ ಅವರ ಸಮರ್ಥನೆ ಸರಿಯಾಗಿಲ್ಲ, ಸುಮ್ಮನೆ ಏನೇನೋ ಹೇಳುತ್ತಾರೆ. ನಮ್ಮ ಹಳ್ಳಿ ಜನಾ ವಿದ್ಯುತ್ ಕಡಿತದಿಂದ ಪ್ರತಿ ದಿನ ಕ್ಯಾಂಡಲ್ ಹಚ್ಚುತ್ತಾರೆ. ಪ್ರತಾಪಸಿಂಹ ಅವರು ಕೂಡಾ ಸಾರ್ವಜನಿಕರಿಗೆ ಕ್ಯಾಂಡಲ್ ವಿತರಿಸುವ ಬಗ್ಗೆ ಹೇಳುತ್ತಾರೆ ಆದರೆ ಅದರ ಬದಲಿಗೆ ಮಾಸ್ಕ್, ಸ್ಯಾನಿಟೇಷನ್ ಹಂಚಿಲಿ” ಎಂದು ಹೇಳಿದ್ದಾರೆ.

ರಾಮ್‌ದಾಸ್‌ರವರ ಹೇಳಿಕೆಯನ್ನು ಕೊರೊನಾ ಏನಾದರೂ ಓದಿದರೆ ಕರೋನಾ ಜೀವನದಲ್ಲಿ ಜಿಗುಪ್ಸೆ ಬಂದು ನೇಣು ಹಾಕಿಕೊಂಡು ಅಥವಾ ರೈಲಿಗೆ ತಲೆ ಕೊಟ್ಟು ಸೂಸೈಡ್ ಮಾಡಿಕೊಳ್ಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕುಮಾರ್‌ ದಿನೂ ಟ್ರೋಲ್‌ ಮಾಡಿದ್ದಾರೆ.

ಬಿಜೆಪಿ ಶಾಸಕ ರಾಮದಾಸ್ (ಈತ ಡಾಕ್ಟರ್ ಬೇರೆ) ಪ್ರಕಾರ, ದೀಪದ ಶಾಖಕ್ಕೆ ವೈರಸ್ ಢಮಾರ್!
ಹಂಗಿದ್ರೆ ಮೊದ್ಲೇ ಇದನ್ನ ಹೇಳೋಕೆ ಏನಾಗಿತ್ತೋ ಬೇಕೂಫ? ಡಾಕ್ಟರ್ ಸಮುದಾಯಕ್ಕೆ ಕಳಂಕ ಇಂತಹ ಶಾಖಾ ಪೀಡೆಗಳು ಎಂದು ಪತ್ರಕರ್ತರಾದ ಪಿ.ಕೆ ಮಲ್ಲನಗೌಡರ್‌ರವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...