Homeಮುಖಪುಟನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ -...

ನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ – ಸುಪ್ರೀಂಗೆ PIL

ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಸಂಕಷ್ಟದಲ್ಲಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಸಕ್ರಿಯ ಮತ್ತು ನೋಂದಾಯಿತ ಜಾಬ್ ಕಾರ್ಡ್ ಹೊಂದಿರುವವರಿಗೆ ಮುಂಚಿತವಾಗಿ ವೇತನ ನೀಡುವಂತೆ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಏಕರೂಪದ ಮಾರ್ಗಸೂಚಿಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಅರುಣಾ ರಾಯ್ ಮತ್ತು ನಿಖಿಲ್ ಡೇಯವರ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿ ಸಲ್ಲಿಸಿದ್ದು, ಭಾರತ ಸಂವಿಧಾನದ 14 ಮತ್ತು 21 ರ ವಿಧಿ ಅಡಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯ 7.6 ಕೋಟಿಗೂ ಹೆಚ್ಚು ಸಕ್ರಿಯ ಜಾಬ್ ಕಾರ್ಡ್ ಹೊಂದಿರುವವರ ಆರೋಗ್ಯ ಮತ್ತು ಜೀವನೋಪಾಯದ ಮೂಲಭೂತ ಹಕ್ಕುಗಳ ರಕ್ಷಣೆ ನೀಡುವಂತೆ ಒತ್ತಾಯಿಸಲಾಗಿದೆ.

ಅಲ್ಲದೇ ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಕೆಲವು ರಾಜ್ಯಗಳು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಇದು ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರ ಜೀವವನ್ನು ಅಪಾಯಕ್ಕೆ ತಳ್ಳುತ್ತದೆ. ದೇಶದ ಎಲ್ಲಾ ಜಿಲ್ಲೆಗಳಿಗೂ ಕೊರೊನಾ ಹರಡಿರುವುದರಿಂದ ಕೂಡಲೇ ಅವರ ಕೆಲಸ ನಿಲ್ಲಿಸುವಂತೆ ಮತ್ತು ಲಾಕ್‌ಡೌನ್‌ ಮುಗಿಯುವವರೆಗೂ ಎಲ್ಲರಿಗೂ ಪೂರ್ಣ ವೇತನ ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಅರ್ಜಿಯಲ್ಲಿ ಕೋರಿದ ಮನವಿಗಳು ಹೀಗಿವೆ:

1. 24.03.2020 ರಿಂದ ಪ್ರಾರಂಭವಾಗುವ ಲಾಕ್‌ಡೌನ್ ಅವಧಿಯ ಸಂಪೂರ್ಣ ಅವಧಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಎಲ್ಲಾ ಸಕ್ರಿಯ ಕುಟುಂಬಗಳು ಕೆಲಸದಲ್ಲಿದ್ದಾರೆ ಎಂದು ಪರಿಗಣಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು. ಅದಕ್ಕೆ ಅನುಗುಣವಾಗಿ ಅವರ ಪೂರ್ಣ ವೇತನವನ್ನು ಪಾವತಿಸುವುದು.

2. ನಗರಗಳಿಂದ ತಮ್ಮ ಸ್ಥಳೀಯ ಹಳ್ಳಿಗಳಿಗೆ ಮರಳಿದ ಎಲ್ಲ ವಲಸಿಗ ಕಾರ್ಮಿಕರಿಗೂ 15 ದಿನಗಳಲ್ಲಿ ವೈಯಕ್ತಿಕ ತಾತ್ಕಾಲಿಕ ಉದ್ಯೋಗ ಖಾತರಿ ಕಾರ್ಡ್‌ಗಳನ್ನು ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು.

3. ಕೊರೊನಾ ಸಾಂಕ್ರಾಮಿಕ ಮುಗಿದ ನಂತರ ಹೆಚ್ಚಿನ ಉದ್ಯೋಗದ ಭರವಸೆ ನೀಡಬೇಕು.

4. ಹೊಸ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಗ್ರಾಮೀಣ ಜೀವನೋಪಾಯವನ್ನು ಬೆಂಬಲಿಸಲು 100 ದಿನಗಳ ಕೆಲಸದ ಸಮಯದಿಂದ ಪ್ರತಿ ಮನೆಗೆ 200 ದಿನಗಳವರೆಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವುದು.

ಈ ಅರ್ಜಿಯು ಏಪ್ರಿಲ್ 7 ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಯಿಲ್ಲದವರ ಪರವಾಗಿ ದನಿ ಎತ್ತುವ ವಕೀಲರು, ನಮ್ಮ ದೇಶದಲ್ಲಿ ಇದ್ದಾರೆ ಎಂಬುದು ಸಮಾಧಾನಕರ ಮತ್ತು ಸಂತೋಷದ ಸುದ್ದಿ.

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...