Homeಮುಖಪುಟನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ -...

ನರೇಗ ಕಾರ್ಮಿಕರಿಗೆ ಈಗಲೇ ವೇತನ ನೀಡಿ. ನಗರ ಕಾರ್ಮಿಕರಿಗೆ ಹೊಸ ಜಾಬ್‌ ಕಾರ್ಡ್ ಕೊಡಿ – ಸುಪ್ರೀಂಗೆ PIL

ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಸಂಕಷ್ಟದಲ್ಲಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಸಕ್ರಿಯ ಮತ್ತು ನೋಂದಾಯಿತ ಜಾಬ್ ಕಾರ್ಡ್ ಹೊಂದಿರುವವರಿಗೆ ಮುಂಚಿತವಾಗಿ ವೇತನ ನೀಡುವಂತೆ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಏಕರೂಪದ ಮಾರ್ಗಸೂಚಿಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಅರುಣಾ ರಾಯ್ ಮತ್ತು ನಿಖಿಲ್ ಡೇಯವರ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿ ಸಲ್ಲಿಸಿದ್ದು, ಭಾರತ ಸಂವಿಧಾನದ 14 ಮತ್ತು 21 ರ ವಿಧಿ ಅಡಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯ 7.6 ಕೋಟಿಗೂ ಹೆಚ್ಚು ಸಕ್ರಿಯ ಜಾಬ್ ಕಾರ್ಡ್ ಹೊಂದಿರುವವರ ಆರೋಗ್ಯ ಮತ್ತು ಜೀವನೋಪಾಯದ ಮೂಲಭೂತ ಹಕ್ಕುಗಳ ರಕ್ಷಣೆ ನೀಡುವಂತೆ ಒತ್ತಾಯಿಸಲಾಗಿದೆ.

ಅಲ್ಲದೇ ಲಾಕ್‌ಡೌನ್‌ ಕಾರಣದಿಂದ ನಗರಗಳಿಂದ ಹಳ್ಳಿಗಳಿಗೆ ವಲಸೆ ಹೋದವರಿಗೂ ಸಹ ಹೊಸ ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌‌ಗಳನ್ನು ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಕೆಲವು ರಾಜ್ಯಗಳು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಇದು ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರ ಜೀವವನ್ನು ಅಪಾಯಕ್ಕೆ ತಳ್ಳುತ್ತದೆ. ದೇಶದ ಎಲ್ಲಾ ಜಿಲ್ಲೆಗಳಿಗೂ ಕೊರೊನಾ ಹರಡಿರುವುದರಿಂದ ಕೂಡಲೇ ಅವರ ಕೆಲಸ ನಿಲ್ಲಿಸುವಂತೆ ಮತ್ತು ಲಾಕ್‌ಡೌನ್‌ ಮುಗಿಯುವವರೆಗೂ ಎಲ್ಲರಿಗೂ ಪೂರ್ಣ ವೇತನ ನೀಡುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಅರ್ಜಿಯಲ್ಲಿ ಕೋರಿದ ಮನವಿಗಳು ಹೀಗಿವೆ:

1. 24.03.2020 ರಿಂದ ಪ್ರಾರಂಭವಾಗುವ ಲಾಕ್‌ಡೌನ್ ಅವಧಿಯ ಸಂಪೂರ್ಣ ಅವಧಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೋಂದಾಯಿತ ಎಲ್ಲಾ ಸಕ್ರಿಯ ಕುಟುಂಬಗಳು ಕೆಲಸದಲ್ಲಿದ್ದಾರೆ ಎಂದು ಪರಿಗಣಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು. ಅದಕ್ಕೆ ಅನುಗುಣವಾಗಿ ಅವರ ಪೂರ್ಣ ವೇತನವನ್ನು ಪಾವತಿಸುವುದು.

2. ನಗರಗಳಿಂದ ತಮ್ಮ ಸ್ಥಳೀಯ ಹಳ್ಳಿಗಳಿಗೆ ಮರಳಿದ ಎಲ್ಲ ವಲಸಿಗ ಕಾರ್ಮಿಕರಿಗೂ 15 ದಿನಗಳಲ್ಲಿ ವೈಯಕ್ತಿಕ ತಾತ್ಕಾಲಿಕ ಉದ್ಯೋಗ ಖಾತರಿ ಕಾರ್ಡ್‌ಗಳನ್ನು ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವುದು.

3. ಕೊರೊನಾ ಸಾಂಕ್ರಾಮಿಕ ಮುಗಿದ ನಂತರ ಹೆಚ್ಚಿನ ಉದ್ಯೋಗದ ಭರವಸೆ ನೀಡಬೇಕು.

4. ಹೊಸ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಗ್ರಾಮೀಣ ಜೀವನೋಪಾಯವನ್ನು ಬೆಂಬಲಿಸಲು 100 ದಿನಗಳ ಕೆಲಸದ ಸಮಯದಿಂದ ಪ್ರತಿ ಮನೆಗೆ 200 ದಿನಗಳವರೆಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವುದು.

ಈ ಅರ್ಜಿಯು ಏಪ್ರಿಲ್ 7 ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಯಿಲ್ಲದವರ ಪರವಾಗಿ ದನಿ ಎತ್ತುವ ವಕೀಲರು, ನಮ್ಮ ದೇಶದಲ್ಲಿ ಇದ್ದಾರೆ ಎಂಬುದು ಸಮಾಧಾನಕರ ಮತ್ತು ಸಂತೋಷದ ಸುದ್ದಿ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...